ನವದೆಹಲಿ: ಜೇವರ್ನಲ್ಲಿರುವ (Jewar) ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (Noida International Airport) ಉತ್ತರ ಪ್ರದೇಶದ ರೈತರು, ಸಣ್ಣ ವ್ಯಾಪಾರಿಗಳು ಮತ್ತು ಯುವಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.
ವಿಮಾನ ನಿಲ್ದಾಣದ ಮೊದಲನೇ ಹಂತ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾದೇಶಿಕ ಅಭಿವೃದ್ಧಿ ಮತ್ತು ಸಂಪರ್ಕದತ್ತ ಈ ವಿಮಾನ ನಿಲ್ದಾಣವು ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ಭಾರತದ ಹೊಸ ಚೈತನ್ಯದ ಸಂಕೇತ. ಈ ಯೋಜನೆಯು ಉತ್ತರ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಯನ್ನು ಬೆಂಬಲಿಸುತ್ತದೆ ಮತ್ತು ಹತ್ತಿರದ ಹಲವಾರು ಪ್ರದೇಶಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು. ಇದನ್ನೂ ಓದಿ: Kissing My Ass – ಸೌದಿ ರಾಜ ಎಂಬಿಎಸ್ಗೆ ಟ್ರಂಪ್ ವ್ಯಂಗ್ಯ

ಇದು ಪಶ್ಚಿಮ ಉತ್ತರ ಪ್ರದೇಶದ ರೈತರು ಮತ್ತು ಯುವಕರಿಗೆ ಅವಕಾಶಗಳನ್ನು ತರುತ್ತದೆ. ಅಲ್ಲದೇ ಅಭಿವೃದ್ಧಿ ಹೊಂದಿದ ಉತ್ತರ ಪ್ರದೇಶದ ಗುರುತಿನ ಸಂಕೇತವಾಗಲಿದೆ. ಪಶ್ಚಿಮ ಉತ್ತರ ಪ್ರದೇಶದ ಜನರನ್ನು ನಾನು ಅಭಿನಂದಿಸುತ್ತೇನೆ. ಇಂದಿನ ಕಾರ್ಯಕ್ರಮವು ಭಾರತದ ಹೊಸ ಚೈತನ್ಯದ ಸಂಕೇತವಾಗಿದೆ ಎಂದು ನುಡಿದರು. ಇದನ್ನೂ ಓದಿ: ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

ಇಂದು ನಾವು ವಿಕಸಿತ ಉತ್ತರ ಪ್ರದೇಶ, ವಿಕಸಿತ ಭಾರತ ಅಭಿಯಾನದ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ. ದೇಶದ ಅತಿದೊಡ್ಡ ರಾಜ್ಯ ಇಂದು ದೇಶದಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ. ಈ ನೋಯ್ಡಾ ವಿಮಾನ ನಿಲ್ದಾಣವು ಆಗ್ರಾ, ಮಥುರಾ, ಗಾಜಿಯಾಬಾದ್, ಮೀರತ್, ಇಟಾವಾ ಮತ್ತು ಇತರ ಹಲವು ಸ್ಥಳಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನೋಯ್ಡಾದ ಜೇವರ್ ಅಂತಾರಾಷ್ಟ್ರೀಯ ಏರ್ಪೋರ್ಟ್ ಉದ್ಘಾಟಿಸಿದ ಮೋದಿ – 3,900 ಮೀಟರ್ ರನ್ವೇ; ಏನೇನಿದೆ ವಿಶೇಷತೆ?
ಮಧ್ಯಪ್ರಾಚ್ಯ ಸಂಘರ್ಷ ಉಲ್ಲೇಖಿಸಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಆಹಾರ, ಇಂಧನ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ಕೊರತೆಯಿಂದಾಗಿ ಜಗತ್ತು ಚಿಂತಿತವಾಗಿರುವ ಸಮಯದಲ್ಲಿ, ಭಾರತವು ಬಿಕ್ಕಟ್ಟನ್ನು ಪೂರ್ಣ ಶಕ್ತಿಯಿಂದ ನಿಭಾಯಿಸುತ್ತಿದೆ ಎಂದು ಹೇಳಿದರು. ಸರ್ಕಾರವು ಸಾಮಾನ್ಯ ಕುಟುಂಬಗಳು ಮತ್ತು ರೈತರ ಮೇಲೆ ಹೊರೆ ಬೀಳದಂತೆ ನೋಡಿಕೊಳ್ಳುತ್ತಿದೆ ಎಂದರು. ಇದನ್ನೂ ಓದಿ: ನೈಟ್ ಔಟ್ ವೇಳೆ ಬೈಕ್ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

