ಬರ ಅಧ್ಯಯನಕ್ಕೆ ಬಂದಿದ್ದ ಕೇಂದ್ರದ ತಂಡಕ್ಕೆ, ಸರ್ಕಾರಿ ಶಾಲೆಯಲ್ಲಿ ಭರ್ಜರಿ ಬಾಡೂಟ ಹಾಕಿಸಿದ ಜಿಲ್ಲಾಧಿಕಾರಿ

Public TV
1 Min Read
DVG BADUTA

ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಬರ ಅಧ್ಯಯನಕ್ಕೆಂದು ಕೇಂದ್ರದಿಂದ ಬಂದಿದ್ದ ತಂಡವನ್ನು ಮೆಚ್ಚಿಸಲು ಜಿಲ್ಲಾಧಿಕಾರಿಗಳು ಸರ್ಕಾರಿ ಶಾಲೆಯಲ್ಲಿ ಭರ್ಜರಿ ಬಾಡೂಟ ಹಾಕಿಸಿದ್ದಾರೆ.

ಹೌದು, ಬರಗಾಲ ಪೀಡಿತ ತಾಲೂಕು ಎಂದೇ ಹೆಸರು ಪಡೆದಿರುವ ಹರಪ್ಪನಹಳ್ಳಿ ಪಟ್ಟಣಕ್ಕೆ ಭಾನುವಾರ ಕೇಂದ್ರದ ಬರ ಅಧ್ಯಯನ ತಂಡ ಭೇಟಿ ನೀಡಿತ್ತು. ಈ ವೇಳೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧಿಕಾರಿಗಳನ್ನು ಮೆಚ್ಚಿಸಲು ಸರ್ಕಾರಿ ಶಾಲೆಯಲ್ಲೇ ಭರ್ಜರಿ ಬಾಡೂಟವನ್ನು ಹಾಕಿಸಿದ್ದಾರೆ.

vlcsnap 2018 11 18 17h21m38s981

ಜಿಲ್ಲಾಧಿಕಾರಿಗಳ ಸೂಚನೆಯಂತೆ ಹರಪ್ಪನಹಳ್ಳಿ ಪಟ್ಟಣದ ನಜೀರ್ ನಗರದ ಮೋರಾರ್ಜಿ ವಸತಿಯುತ ಶಾಲೆಯಲ್ಲಿ ಕೇಂದ್ರ ಅಧಿಕಾರಿಗಳಿಗೆಂದೇ ಬಾಡೂಟ ಸಿದ್ದಪಡಿಸಿದ್ದರು. ಇದರಲ್ಲಿ ಚಿಕನ್ ಮಸಾಲ, ಮಟನ್ ಚಾಪ್ಸ್, ಎಗ್ ಮಸಾಲ, ರೋಟಿ ಹಾಗೂ ರಾಗಿಮುದ್ದೆಯನ್ನು ಮಾಡಿಸಿದ್ದರು.

ಜಿಲ್ಲಾಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರೈತರು, ತಾಲೂಕಿನ ಬರ ಅಧ್ಯಯನಕ್ಕಿಂತ ಕೇಂದ್ರದ ತಂಡಕ್ಕೆ ಬಾಡೂಟವೇ ಪ್ರಮುಖವಾಗಿತ್ತು. ಕೇವಲ ಎರಡು ಮೂರು ಕಡೆ ಪರಿಶೀಲನೆ ನಡೆಸಿ, ಹೋದ್ಯಾ ಪುಟ್ಟ, ಬಂದ್ಯಾ ಪುಟ್ಟ ಎಂಬಂತೆ ಅಧ್ಯಯನ ಮಾಡಿದ್ದಾರೆ. ಕಳೆದ ಬಾರಿಯೂ ಇದೇ ರೀತಿ ಅಧ್ಯಯನ ಮಾಡಿಕೊಂಡು ಹೋಗಿದ್ದರು. ಆದರೆ ರೈತರಿಗೆ ಪರಿಹಾರ ನೀಡುವಲ್ಲಿ ವಿಫಲವಾಗಿದ್ದರು. ಈಗ ಪುನಃ ಅದೇ ರೀತಿ ಈ ಬಾರಿಯೂ ಮಾಡಿಕೊಂಡು ಹೋಗುತ್ತಿದ್ದಾರೆಂದು ಅಸಮಾಧಾನ ಹೊರಹಾಕಿದ್ದರು.

vlcsnap 2018 11 18 16h21m40s290

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *