ಬೆಂಗಳೂರು: ನೇರಳೆ ಮಾರ್ಗದಲ್ಲಿ (Purple Line) ಕೆಲಕಾಲ ವ್ಯತ್ಯಯವಾಗಿದ್ದ ಮೆಟ್ರೋ ಸಂಚಾರ ಇಂದು ಬೆಳಗ್ಗೆ 11 ಗಂಟೆಯಿಂದ ಪುನರ್ ಆರಂಭವಾಗಿದೆ.
ಎಂಜಿ ರೋಡ್- ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಕರೆಂಟ್ ಸಮಸ್ಯೆಯಿಂದ ಕೆಲ ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿತ್ತು.
- Advertisement 2
- Advertisement 3
ಅಂತೆಯೇ ಸಮಸ್ಯೆ ಪರಿಹರಿಸಲಾಗಿದ್ದು, ಎಂಜಿ ರೋಡ್ ಮತ್ತು ಚಲ್ಲಘಟ್ಟ ನಡುವೆ ಬೈಯಪ್ಪನಹಳ್ಳಿ ಮತ್ತು ವೈಟ್ಫೀಲ್ಡ್ (ಕಾಡುಗೋಡಿ) ನಡುವೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬೆಳಿಗ್ಗೆ 11.00 ಗಂಟೆಯಿಂದ ರೈಲು ಸೇವೆಗಳು ಎಂದಿನಂತೆ ಪುನರ್ ಆರಂಭಿಸಲಾಗಿದೆ. ಇದನ್ನೂ ಓದಿ: ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕನ ಮಕ್ಕಳಿಗೆ ದೀಕ್ಷೆ!
- Advertisement 4
ಕೆಲಕಾಲ ಮೆಟ್ರೋ ಸಂಚಾರ ಕೈಕೊಟ್ಟಿದ್ದರಿಂದ ಪ್ರಯಾಣಿಕರು ಪರದಾಟ ಅನುಭವಿಸಿದರು. ಓಲಾ, ಆಟೋಗಳಲ್ಲಿ ಪ್ರಯಾಣ ಮಾಡಬೇಕಾಯಿತು.