ಕಾರವಾರ: ಕುಡಿದ ಮತ್ತಿನಲ್ಲಿ ಯುವಕರಿಂದ ಬಾರ್ ಅಂಡ್ ರೆಸ್ಟೋರೆಂಟ್ ಮುಂದೆ ದಾಂಧಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ.
ಈ ಘಟನೆ ರತ್ನಾಸ್ ಹಾಲಿಡೇಸ್ ರೆಸ್ಟೋರೆಂಟ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಾಡಿ, ಕಾರಿನ ಗಾಜು ಒಡೆದು ದಾಂಧಲೆ ಮಾಡಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕರು ಬಾರ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಕಾರವಾರದ ಸಮೀರ್ ನಾಯ್ಕ ಮತ್ತು ಅಮೋಘ ಎನ್ನುವ ಯುವಕರೇ ಕೃತ್ಯ ನಡೆಸಿದವರು ಎಂದು ತಿಳಿದುಬಂದಿದ್ದು, ಇವರ ವಿರುದ್ಧ ರೆಸ್ಟೋರೆಂಟ್ ಮ್ಯಾನೇಜರ್ ಸಂತೋಷ್ ಅವರು ದೂರು ನೀಡಿದ್ದಾರೆ. ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.