ರಾಯಚೂರು: ಅಖಂಡ ಕರ್ನಾಟಕವನ್ನು ಪ್ರತ್ಯೇಕಿಸುವ ಮಾತೇ ಇಲ್ಲ. ಉತ್ತರ ಕರ್ನಾಟಕ ಪತ್ಯೇಕ ರಾಜ್ಯವಾಗಬೇಕು ಎಂಬ ಒತ್ತಾಯ ಇಟ್ಟಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವೈಯಕ್ತಿಕ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸಚಿವರು, ಅನೇಕ ನಾಯಕರ ಪರಿಶ್ರಮದಿಂದ ಅಖಂಡ ಕರ್ನಾಟಕ ನಿರ್ಮಾಣವಾಗಿದೆ. ಈಗ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ಕೇಳಿಬರುತ್ತಿರುವುದು ಸರಿಯಲ್ಲ. ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟಿರುವ ಸಹೋದರ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ನಾನು ಮಾತನಾಡಿ, ಸಮಸ್ಯೆ ಬಗೆಹರಿಸುತ್ತೇನೆ ಎಂದು ಅವರು ಭರವಸೆ ನೀಡಿದ ಅವರು ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ. ಎಲ್ಲದಕ್ಕೂ ಪ್ರತಿರೋಧ ವ್ಯಕ್ತಪಡಿಸುತ್ತಾರೆ ಅಂದ್ರು.
ಇದೇ ವೇಳೆ ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಜಮೀರ್ ಅಹ್ಮದ್ ಅವರ ಚಿಂತನೆ ಅಷ್ಟೇ. ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳುತ್ತದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಾಲಮನ್ನಾ ನಿರ್ಧಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.