Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ತುಂಡು ಭೂಮಿಯಿಂದಲ್ಲ, ಜನರಿಂದ ದೇಶ ನಿರ್ಮಾಣ – ಕೇಂದ್ರದ ವಿರುದ್ಧ ರಾಹುಲ್ ಕಿಡಿ

Public TV
Last updated: August 6, 2019 3:11 pm
Public TV
Share
2 Min Read
dinesh gundu rao rahul gandhi 2 1
SHARE

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರದ ನಡೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಮೌನ ಮುರಿದಿದ್ದು, ದೇಶದ ಭದ್ರತೆ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಏಕಪಕ್ಷೀಯವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಇಬ್ಭಾಗ ಮಾಡುವ ನಿರ್ಧಾರ ಕೈಗೊಳ್ಳುವುದು, ಜನಪ್ರತಿನಿಧಿಗಳನ್ನು ಬಂಧಿಸುವುದು ಹಾಗೂ ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ರಾಷ್ಟ್ರದ ಏಕೀಕರಣವನ್ನು ಹೆಚ್ಚಿಸಲು ಸಾಧ್ಯವಿಲ್ಲ. ಜನರಿಂದ ದೇಶ ನಿರ್ಮಾಣವಾಗಿದೆ. ಇದು ಕೇವಲ ತುಂಡು ಭೂಮಿಯಲ್ಲ. ಆಡಳಿತಾತ್ಮಕ ಅಧಿಕಾರದ ದುರುಪಯೋಗ ಮಾಡಿರುವುದು ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಕಿಡಿ ಕಾರಿದ್ದಾರೆ.

National integration isn’t furthered by unilaterally tearing apart J&K, imprisoning elected representatives and violating our Constitution. This nation is made by its people, not plots of land.

This abuse of executive power has grave implications for our national security.

— Rahul Gandhi (@RahulGandhi) August 6, 2019

ರಾಹುಲ್ ಗಾಂಧಿ ಅವರು ತಾಯಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಸಂಸದರು ಹಾಗೂ ನಾಯಕರೊಂದಿಗೆ ನಡೆದ ಸಭೆ ಬಳಿಕ ಟ್ವೀಟ್ ಮಾಡಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಕುರಿತು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಘೋಷಣೆ ಮಾಡಿದರು. ಈ ವೇಳೆ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸುವಲ್ಲಿ ಎಡವಿದ್ದರಿಂದ ರಾಹುಲ್ ಗಾಂಧಿ ಚಕಾರ ಎತ್ತಿರಲಿಲ್ಲ.

Mir Mohammad Fayaz

ಅಮಿತ್ ಶಾ 370ನೇ ವಿಧಿ ಹಾಗೂ 35ಎ ರದ್ದು ಪಡಿಸುವ ಘೋಷಣೆ ಕೂಗುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಗದ್ದಲ ಎಬ್ಬಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲು ಪ್ರಾರಂಭಿಸಿದ್ದರು. ಅಲ್ಲದೆ, ಕಾಂಗ್ರೆಸ್ ನಾಯಕರು ಈ ನಿರ್ಧಾರವನ್ನು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಸಂಸತ್ ಹೊರಗಡೆ ಘೋಷಣೆ ಕೂಗಿದ್ದರು. ಇದಕ್ಕೆ ಜನಾರ್ಧನ್ ದ್ವಿವೇದಿ ಹಾಗೂ ದೀಪೇಂದರ್ ಹೂಡಾರಂತಹ ನಾಯಕರು ಸಹ ಬೆಂಬಲ ವ್ಯಕ್ತಪಡಿಸಿದ್ದರು.

ಈ ಮಹತ್ವದ ಬೆಳವಣಿಗೆ ಹಿನ್ನೆಲೆ ತುರ್ತು ಸಭೆ ಕರೆಯುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, ನಾನು ಕಾಂಗ್ರೆಸ್ ಅಧ್ಯಕ್ಷನಲ್ಲದ ಕಾರಣ ಯಾವುದೇ ಸಭೆ ಕರೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದ ಕಾರಣ ರಾಹುಲ್ ಗಾಂಧಿ ಅವರು ಮೇನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಕಾಂಗ್ರೆಸ್ ವರಿಷ್ಠೆ, ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಚರ್ಚಿಸಲು ಸಭೆ ಕರೆದಿದ್ದರು. ಸಭೆಯಲ್ಲಿ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕೇ ಅಥವಾ ಬೆಂಬಲಿಸಬೇಕೇ ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನಡೆಯನ್ನು ನಾವು ವಿರೋಧಿಸುತ್ತೇವೆ. ಆದರೆ, ನಮ್ಮ ವಿರೋಧವು ಜಮ್ಮು ಮತ್ತು ಕಾಶ್ಮೀರದ ಜನತೆ ಹಾಗೂ ರಾಜ್ಯದ ವಿಧಾನಸಭೆಯನ್ನು ಸಂಪರ್ಕಿಸದಿರುವುದನ್ನು ಆಧರಿಸಿದೆ ಎಂದು ಕಾಂಗ್ರೆಸ್ ಸಂಸದರು ಹಾಗೂ ನಾಯಕರಿಗೆ ಸಭೆಯಲ್ಲಿ ಸ್ಪಷ್ಟಪಡಿಸಲಾಗಿತ್ತು.

TAGGED:35A35ಎ370ನೇ ವಿದಿAmit Shahjammu kashmirPM ModiPublic TVRahul Gandhiಅಮಿತ್ ಶಾಜಮ್ಮು ಮತ್ತು ಕಾಶ್ಮೀರಪಬ್ಲಿಕ್ ಟಿವಿಪ್ರಧಾನಿ ಮೋದಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
2 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
7 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
8 minutes ago
train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
27 minutes ago
Ahmedabad Plane Crash Capt Sumeet Sabharwal is a LTC with 8200 Hrs of experience
Latest

ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

Public TV
By Public TV
32 minutes ago
Ahmedabad Plane Crash Nikhil Kumaraswamy
Bengaluru City

ಅಹಮದಾಬಾದ್‌ನಲ್ಲಿ ವಿಮಾನ ದುರಂತ – ನಿಖಿಲ್ ಕುಮಾರಸ್ವಾಮಿ ಸಂತಾಪ

Public TV
By Public TV
33 minutes ago
Maharashtra Murder
Crime

ಮಹಾರಾಷ್ಟ್ರ| ಮದುವೆಯಾದ ಮೂರೇ ವಾರಕ್ಕೆ ಕೊಡಲಿಯಿಂದ ಪತಿಯ ಹತ್ಯೆಗ್ಯದ ಪತ್ನಿ!

Public TV
By Public TV
39 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?