ಬೆಂಗಳೂರು: ನನ್ನ ಲಾಭ ನಷ್ಟ ನೋಡಿ ನಿರ್ಧಾರ ಮಾಡಲ್ಲ. ನನ್ನ ಜತೆ ಇರುವವರ ಬಗ್ಗೆಯೂ ನೋಡಿಕೊಂಡೇ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಹೇಳಿದರು.
ಇಂದು ಬೆಂಗಳೂರಿನಲ್ಲಿ (Bengaluru) ಮಾಜಿ ಸಿಎಂ ಎಸ್.ಎಂ ಕೃಷ್ಣ (S. M. Krishna) ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು. ಈ ವೇಳೆ ಬಿಜೆಪಿ (BJP) ಸೇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಸಂಸದೆ ಸ್ಪಷ್ಟನೆ ಕೊಟ್ಟರು. ಇವತ್ತು ಮಂಡ್ಯದಿಂದ (Mandya) ಹಲವರು ಬಂದಿದ್ದಾರೆ. ಎಲ್ಲರ ಜತೆ ಚರ್ಚೆ ಮಾಡುತ್ತೇನೆ. ನಾನು ಯಾವುದೇ ತೀರ್ಮಾನ ಇನ್ನೂ ಮಾಡಿಲ್ಲ. ಇನ್ನೂ ಹಲವರ ಜೊತೆ, ವರಿಷ್ಠರ ಜತೆ ಚರ್ಚೆ ಮಾಡಬೇಕು ಎಂದರು. ಇದನ್ನೂ ಓದಿ: ನಟ, ನಟಿಯರ ಹೆಸರಿನಲ್ಲಿ ಭಾರೀ ವಂಚನೆ : ಬೆಚ್ಚಿದ ದೆಹಲಿ ಪೊಲೀಸ್
ಎಸ್.ಎಂ ಕೃಷ್ಣ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಎಸ್.ಎಂ.ಕೆ ಅವರು ನಮ್ಮ ಜಿಲ್ಲೆಯ ಹಿರಿಯ ನಾಯಕರು, ಟಾಲೆಸ್ಟ್ ನಾಯಕರು. ಅವರಿಗೆ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿ ಬಂದಿದೆ. ನಾನು ಅವರನ್ನು ಭೇಟಿ ಮಾಡಿರಲಿಲ್ಲ. ಇವತ್ತು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಆದರೆ ಇಲ್ಲಿ ಯಾವುದೇ ರಾಜಕೀಯ ವಿಚಾರ ಮಾತಾಡಿಲ್ಲ ಎಂದರು. ಇದನ್ನೂ ಓದಿ: ‘ಲವ್ ಲಿ’ ಎನ್ನುತ್ತಾ ಡಬ್ಬಿಂಗ್ ಕೆಲಸದಲ್ಲಿ ತೊಡಗಿದ ವಸಿಷ್ಠ ಸಿಂಹ