ಮುಂಬೈ: ಗುಜರಾತ್ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡದೇ ತಪ್ಪು ಮಾಡಿದೆ ಎಂದು ಪಟೇಲ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಹೇಳಿದ್ದಾರೆ.
ಖಾಸಗಿ ಮಾಧ್ಯಮ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಹಾರ್ದಿಕ್, ಒಂದು ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದರೆ ಪ್ರತಿಪಕ್ಷ ಇಂದು ಅಧಿಕಾರಕ್ಕೆ ಏರುತಿತ್ತು. ಬಿಜೆಪಿಗೆ 99 ಸ್ಥಾನಗಳು ಸಿಗುವ ಬದಲು ಕೇವಲ 79ರಲ್ಲಿ ಮಾತ್ರ ಗೆಲ್ಲುತಿತ್ತು ಎಂದು ತಿಳಿಸಿದರು.
ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್ ಮತ್ತು ಶಿವಸೇನಾ ಅಧ್ಯಕ್ಷ ಉದ್ದವ್ ಠಾಕ್ರೆ ಅವರನ್ನ ಬಹಿರಂಗವಾಗಿ ಭೇಟಿ ಮಾಡಿದ್ದೇನೆ. ನನಗೆ ರಾಹುಲ್ ಗಾಂಧಿಯವರ ಭೇಟಿಯಲ್ಲೂ ಯಾವುದೇ ಸಮಸ್ಯೆ ಇಲ್ಲ ಎಂದರು.
2017ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳಲ್ಲಿ ಗೆದ್ದಿದ್ದರೆ 77 ಸ್ಥಾನಗಳನ್ನು ಗೆದ್ದುಕೊಂಡಿತ್ತು.