Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಕೆಗಳಷ್ಟೇ ಅಲ್ಲ,ಸಲಹೆಗಳು ಕೊಡುವ ಕೆಲಸವೂ ಮಾಧ್ಯಮಗಳಿಂದಾಗಲಿ: ಮಾಧುಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟೀಕೆಗಳಷ್ಟೇ ಅಲ್ಲ,ಸಲಹೆಗಳು ಕೊಡುವ ಕೆಲಸವೂ ಮಾಧ್ಯಮಗಳಿಂದಾಗಲಿ: ಮಾಧುಸ್ವಾಮಿ

Bengaluru City

ಟೀಕೆಗಳಷ್ಟೇ ಅಲ್ಲ,ಸಲಹೆಗಳು ಕೊಡುವ ಕೆಲಸವೂ ಮಾಧ್ಯಮಗಳಿಂದಾಗಲಿ: ಮಾಧುಸ್ವಾಮಿ

Public TV
Last updated: November 16, 2022 11:11 pm
Public TV
Share
3 Min Read
madhuswamy anantnag
SHARE

ಬೆಂಗಳೂರು: ಟೀಕೆಗಳು ಮಾಡುವುದಷ್ಟೇ ಮಾಧ್ಯಮಗಳ(Media) ಕೆಲಸವೆಂದು ಪರಿಭಾವಿಸದೇ ಆಡಳಿತ ವ್ಯವಸ್ಥೆಗೆ ಸೂಕ್ತ ಸಲಹೆ-ಸೂಚನೆಗಳು, ಮಾರ್ಗದರ್ಶನ ಕೊಡುವ ಕೆಲಸಗಳು ಮಾಧ್ಯಮಗಳಿಂದಾಗಬೇಕು. ಇದು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಅಗತ್ಯವಾಗಿದೆ ಎಂದು ಕಾನೂನು ಮತ್ತು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ(JC Madhuswamy) ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ನಗರದ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ “ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ” ವಿಚಾರಸಂಕಿರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಗಳು ಮತ್ತು ಆಡಳಿತ ವ್ಯವಸ್ಥೆ ತಪ್ಪು ಮಾಡಿದಲ್ಲಿ ಅವಹೇಳನ ಮಾಡದೇ ಅದನ್ನು ಅತ್ಯಂತ ನವೀರಾಗಿ ತಿದ್ದಿ ಹೇಳುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಇದುವರೆಗೆ ಏನಾಗಿದೆ? ಏನಾಗಬೇಕಾಗಿತ್ತು ಎನ್ನುವುದರ ಕುರಿತು ವಿಶ್ಲೇಷಣೆ ಮಾಡಿ ಸರ್ಕಾರಗಳಿಗೆ ಚಾಟಿ ಬಿಸಿ ಎಚ್ಚರಿಸುವ ಕೆಲಸಗಳನ್ನು ಮಾಡಬೇಕು ಎಂದು ಹೇಳಿದ ಸಚಿವ ಮಾಧುಸ್ವಾಮಿ ಅವರು ರಾಷ್ಟ್ರನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂಬ ಅಂಶವನ್ನು ವಿವಿಧ ರೀತಿಯ ಉದಾರಣೆಗಳ ಮೂಲಕ ತಿಳಿಯಪಡಿಸಿದರು.

press club function

ರಾಷ್ಟ್ರ ನಿರ್ಮಾಣವೆಂದರೇ ಕೇವಲ ದೊಡ್ಡ ದೊಡ್ಡ ಕೈಗಾರಿಗಳ ಅಭಿವೃದ್ಧಿಯಲ್ಲ. ಜಾತಿ-ಮತ, ಪಂಥ, ಸಂಸ್ಕೃತಿ ಸೇರಿದಂತೆ ವೈವಿಧ್ಯತೆಯನ್ನೇ ಜೀವಾಳವಾಗಿಸಿಕೊಂಡಿರುವ ಎಲ್ಲವನ್ನು ಮತ್ತು ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಮುನ್ನಡೆಯುತ್ತಾ ಎಲ್ಲ ರಂಗಗಳಲ್ಲಿ ಸಮಗ್ರ ಅಭಿವೃದ್ಧಿ ಸಾಧಿಸುವುದಾಗಿದೆ ಎಂದು ಅವರು ವಿವರಿಸಿದರು. ನಿಷ್ಪಕ್ಷಪಾತ ವರದಿಗಾರಿಕೆ ಮತ್ತು ಮಾಧ್ಯಮಗಳ ವರದಿ ಹಾಗೂ ನಿರೀಕ್ಷೆಗಳ ಕುರಿತು ಸಹ ಅವರು ಮಾತನಾಡಿದರು.

ಹಿರಿಯ ಪತ್ರಕರ್ತರಾದ ರಾಜಾ ಶೈಲೇಶಚಂದ್ರಗುಪ್ತ ಅವರು ಮಾತನಾಡಿ, ಜನರ ಭಾವನೆಗಳಿಗೆ ಕನ್ನಡಿ ಹಿಡಿಯುವ ಕೆಲಸ ಮಾಧ್ಯಮಗಳು ಮಾಡಬೇಕು. ಮಾಧ್ಯಮಗಳ ಮೇಲೆ ನಿರೀಕ್ಷೆಗಳು ಹೆಚ್ಚಾಗಿದ್ದು, ಅವುಗಳು ಈಡೇರಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಲೋಪಗಳಾಗದೇ ನಿರೀಕ್ಷೆಗಳು ನಿಜವಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಮಾಧ್ಯಮಗಳು ಇರುವ ಅವಕಾಶಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು. ಇದನ್ನೂ ಓದಿ: ಪೋಲೆಂಡ್‌ಗೆ ಕ್ಷಿಪಣಿ ಹಾರಿಸಿ ಉಕ್ರೇನ್ ಎಡವಟ್ಟು

ಹಿರಿಯ ಪತ್ರಕರ್ತರಾದ ಡಾ.ಆರ್.ಪೂರ್ಣಿಮಾ ಅವರು ಮಾತನಾಡಿ, ಭಾರತದಲ್ಲಿ ಪತ್ರಿಕಾರಂಗ ಹುಟ್ಟಿದ್ದೇ ರಾಷ್ಟ್ರೀಯ ಚಳವಳಿ ಸಂದರ್ಭದಲ್ಲಿ. ಸ್ವಾತಂತ್ರ್ಯ ಚಳವಳಿಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಮತ್ತು ಬ್ರಿಟೀಷರ ವಿರುದ್ಧ ಜನರು ಸಂಘಟಿತರಾಗಿ ಹೋರಾಟಕ್ಕಿಳಿಯುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದು. ಪತ್ರಿಕಾರಂಗವನ್ನು ರಾಷ್ಟ್ರೀಯ ಚಳವಳಿ ಅತ್ಯಂತ ಸಮರ್ಪಕವಾಗಿ ಬಳಸಿಕೊಂಡಿತು ಎಂದರು.

ಜರ್ನಲಿಸ್ಟ್ ಆ್ಯಕ್ಟಿವಿಸ್ಟ್ ಕೂಡ ಹೌದು ಎಂದು ಹೇಳಿದ ಅವರು ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವ ಕೆಲಸವನ್ನು ಮಾಧ್ಯಮ ಪ್ರತಿನಿಧಿಗಳು ಮಾಡಬೇಕು ಎಂದರು.

ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿರುವ ಅನಿಷ್ಠಗಳ ಕುರಿತು ಆಡಳಿತ ವ್ಯವಸ್ಥೆ ಎಚ್ಚರಿಸುವುದು ಮತ್ತು ಲಿಂಗ ಸಮಾನತೆ ಕುರಿತು ತಿಳಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಜನಪರ ದೃಷ್ಟಿಕೋನವನ್ನಿಟ್ಟುಕೊಂಡು ಕಾರ್ಯನಿರ್ವಹಿಸುವುದು ನಮ್ಮ ಆದ್ಯತೆಯಾಗಬೇಕು ಎಂದರು.

ಗೌರವ ಉಪಸ್ಥಿತರಿದ್ದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರು ಮಾತನಾಡಿ, ನೈತಿಕತೆ, ಮೌಲ್ಯಗಳನ್ನು ಉಳಿಸಿ ಬೆಳೆಸುವ ಮತ್ತು ಮುಂದಿನ ಪೀಳಿಗೆಗೆ ತಿಳಿಸುವ ಮಹತ್ತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದರು.

ಸದೃಢ ರಾಷ್ಟ್ರನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದ ಅವರು ಮಾಧ್ಯಮಗಳ ಜವಾಬ್ದಾರಿ ಮತ್ತು ಅಲ್ಲಿನ ಒತ್ತಡದ ಕುರಿತು ತಿಳಿಸುವುದರ ಜೊತೆಗೆ ಇಲಾಖೆಯ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸಿಕ ಪತ್ರಿಕೆಗಳ ಸಂಪಾದಕರಾಗಿ ಗುಣಮಟ್ಟದ ಮಾಸಿಕ ಪತ್ರಿಕೆ ಹೊರತರುವಲ್ಲಿ ವಹಿಸುವ ಶ್ರಮ ಮತ್ತು ಅನುಭವಗಳನ್ನು ಬಿಚ್ಚಿಟ್ಟರು. ಇದನ್ನೂ ಓದಿ: ‘ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಿಸಿದ ನಟ ಅನಂತ್ ನಾಗ್

ಖ್ಯಾತ ಚಲನಚಿತ್ರ ನಟ ಅನಂತನಾಗ್ ಅವರು ಪ್ರಧಾನ ಭಾಷಣ ಮಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿಗಳಾದ ಸಿ.ರೂಪಾ, ಸದಸ್ಯರಾದ ಶಿವಾನಂದ ತಗಡೂರು, ಕೆ.ಕೆ.ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೂಡ್ಲಿ ಗುರುರಾಜ್, ಗೋಪಾಲ್ ಯಡಗೆರೆ, ಸಿ.ಕೆ.ಮಹೇಂದ್ರ, ಜಗನ್ನಾಥ ಬಾಳ, ಕೆ.ವಿ.ಶಿವಕುಮಾರ, ದೇವಿಂದ್ರಪ್ಪ ಕಪನೂರು, ನಾಗಾರ್ಜುನ ದ್ವಾರಕನಾಥ, ಲಕ್ಷ್ಮೀನಾರಾಯಣ ಎಸ್., ಬದ್ರುದ್ದೀನ್ ಕೆ., ಕೆ.ಎಂ.ಶಿವರಾಜು ಸೇರಿದಂತೆ ಹಿರಿಯ ಪತ್ರಕರ್ತರು ಇದ್ದರು.

Live Tv
[brid partner=56869869 player=32851 video=960834 autoplay=true]

TAGGED:bengalurujc madhuswamymediaPress clubಪ್ರೆಸ್ ಕ್ಲಬ್ಬೆಂಗಳೂರುಮಾಧುಸ್ವಾಮಿಮಾಧ್ಯಮ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
2 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
2 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
3 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
3 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
3 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?