Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಕೆಗಳಷ್ಟೇ ಅಲ್ಲ,ಸಲಹೆಗಳು ಕೊಡುವ ಕೆಲಸವೂ ಮಾಧ್ಯಮಗಳಿಂದಾಗಲಿ: ಮಾಧುಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟೀಕೆಗಳಷ್ಟೇ ಅಲ್ಲ,ಸಲಹೆಗಳು ಕೊಡುವ ಕೆಲಸವೂ ಮಾಧ್ಯಮಗಳಿಂದಾಗಲಿ: ಮಾಧುಸ್ವಾಮಿ

Bengaluru City

ಟೀಕೆಗಳಷ್ಟೇ ಅಲ್ಲ,ಸಲಹೆಗಳು ಕೊಡುವ ಕೆಲಸವೂ ಮಾಧ್ಯಮಗಳಿಂದಾಗಲಿ: ಮಾಧುಸ್ವಾಮಿ

Public TV
Last updated: November 16, 2022 11:11 pm
Public TV
Share
3 Min Read
madhuswamy anantnag
SHARE

ಬೆಂಗಳೂರು: ಟೀಕೆಗಳು ಮಾಡುವುದಷ್ಟೇ ಮಾಧ್ಯಮಗಳ(Media) ಕೆಲಸವೆಂದು ಪರಿಭಾವಿಸದೇ ಆಡಳಿತ ವ್ಯವಸ್ಥೆಗೆ ಸೂಕ್ತ ಸಲಹೆ-ಸೂಚನೆಗಳು, ಮಾರ್ಗದರ್ಶನ ಕೊಡುವ ಕೆಲಸಗಳು ಮಾಧ್ಯಮಗಳಿಂದಾಗಬೇಕು. ಇದು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಅಗತ್ಯವಾಗಿದೆ ಎಂದು ಕಾನೂನು ಮತ್ತು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ(JC Madhuswamy) ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ನಗರದ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ “ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ” ವಿಚಾರಸಂಕಿರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಗಳು ಮತ್ತು ಆಡಳಿತ ವ್ಯವಸ್ಥೆ ತಪ್ಪು ಮಾಡಿದಲ್ಲಿ ಅವಹೇಳನ ಮಾಡದೇ ಅದನ್ನು ಅತ್ಯಂತ ನವೀರಾಗಿ ತಿದ್ದಿ ಹೇಳುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಇದುವರೆಗೆ ಏನಾಗಿದೆ? ಏನಾಗಬೇಕಾಗಿತ್ತು ಎನ್ನುವುದರ ಕುರಿತು ವಿಶ್ಲೇಷಣೆ ಮಾಡಿ ಸರ್ಕಾರಗಳಿಗೆ ಚಾಟಿ ಬಿಸಿ ಎಚ್ಚರಿಸುವ ಕೆಲಸಗಳನ್ನು ಮಾಡಬೇಕು ಎಂದು ಹೇಳಿದ ಸಚಿವ ಮಾಧುಸ್ವಾಮಿ ಅವರು ರಾಷ್ಟ್ರನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂಬ ಅಂಶವನ್ನು ವಿವಿಧ ರೀತಿಯ ಉದಾರಣೆಗಳ ಮೂಲಕ ತಿಳಿಯಪಡಿಸಿದರು.

press club function

ರಾಷ್ಟ್ರ ನಿರ್ಮಾಣವೆಂದರೇ ಕೇವಲ ದೊಡ್ಡ ದೊಡ್ಡ ಕೈಗಾರಿಗಳ ಅಭಿವೃದ್ಧಿಯಲ್ಲ. ಜಾತಿ-ಮತ, ಪಂಥ, ಸಂಸ್ಕೃತಿ ಸೇರಿದಂತೆ ವೈವಿಧ್ಯತೆಯನ್ನೇ ಜೀವಾಳವಾಗಿಸಿಕೊಂಡಿರುವ ಎಲ್ಲವನ್ನು ಮತ್ತು ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಮುನ್ನಡೆಯುತ್ತಾ ಎಲ್ಲ ರಂಗಗಳಲ್ಲಿ ಸಮಗ್ರ ಅಭಿವೃದ್ಧಿ ಸಾಧಿಸುವುದಾಗಿದೆ ಎಂದು ಅವರು ವಿವರಿಸಿದರು. ನಿಷ್ಪಕ್ಷಪಾತ ವರದಿಗಾರಿಕೆ ಮತ್ತು ಮಾಧ್ಯಮಗಳ ವರದಿ ಹಾಗೂ ನಿರೀಕ್ಷೆಗಳ ಕುರಿತು ಸಹ ಅವರು ಮಾತನಾಡಿದರು.

ಹಿರಿಯ ಪತ್ರಕರ್ತರಾದ ರಾಜಾ ಶೈಲೇಶಚಂದ್ರಗುಪ್ತ ಅವರು ಮಾತನಾಡಿ, ಜನರ ಭಾವನೆಗಳಿಗೆ ಕನ್ನಡಿ ಹಿಡಿಯುವ ಕೆಲಸ ಮಾಧ್ಯಮಗಳು ಮಾಡಬೇಕು. ಮಾಧ್ಯಮಗಳ ಮೇಲೆ ನಿರೀಕ್ಷೆಗಳು ಹೆಚ್ಚಾಗಿದ್ದು, ಅವುಗಳು ಈಡೇರಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಲೋಪಗಳಾಗದೇ ನಿರೀಕ್ಷೆಗಳು ನಿಜವಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಮಾಧ್ಯಮಗಳು ಇರುವ ಅವಕಾಶಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು. ಇದನ್ನೂ ಓದಿ: ಪೋಲೆಂಡ್‌ಗೆ ಕ್ಷಿಪಣಿ ಹಾರಿಸಿ ಉಕ್ರೇನ್ ಎಡವಟ್ಟು

ಹಿರಿಯ ಪತ್ರಕರ್ತರಾದ ಡಾ.ಆರ್.ಪೂರ್ಣಿಮಾ ಅವರು ಮಾತನಾಡಿ, ಭಾರತದಲ್ಲಿ ಪತ್ರಿಕಾರಂಗ ಹುಟ್ಟಿದ್ದೇ ರಾಷ್ಟ್ರೀಯ ಚಳವಳಿ ಸಂದರ್ಭದಲ್ಲಿ. ಸ್ವಾತಂತ್ರ್ಯ ಚಳವಳಿಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಮತ್ತು ಬ್ರಿಟೀಷರ ವಿರುದ್ಧ ಜನರು ಸಂಘಟಿತರಾಗಿ ಹೋರಾಟಕ್ಕಿಳಿಯುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದು. ಪತ್ರಿಕಾರಂಗವನ್ನು ರಾಷ್ಟ್ರೀಯ ಚಳವಳಿ ಅತ್ಯಂತ ಸಮರ್ಪಕವಾಗಿ ಬಳಸಿಕೊಂಡಿತು ಎಂದರು.

ಜರ್ನಲಿಸ್ಟ್ ಆ್ಯಕ್ಟಿವಿಸ್ಟ್ ಕೂಡ ಹೌದು ಎಂದು ಹೇಳಿದ ಅವರು ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವ ಕೆಲಸವನ್ನು ಮಾಧ್ಯಮ ಪ್ರತಿನಿಧಿಗಳು ಮಾಡಬೇಕು ಎಂದರು.

ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿರುವ ಅನಿಷ್ಠಗಳ ಕುರಿತು ಆಡಳಿತ ವ್ಯವಸ್ಥೆ ಎಚ್ಚರಿಸುವುದು ಮತ್ತು ಲಿಂಗ ಸಮಾನತೆ ಕುರಿತು ತಿಳಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಜನಪರ ದೃಷ್ಟಿಕೋನವನ್ನಿಟ್ಟುಕೊಂಡು ಕಾರ್ಯನಿರ್ವಹಿಸುವುದು ನಮ್ಮ ಆದ್ಯತೆಯಾಗಬೇಕು ಎಂದರು.

ಗೌರವ ಉಪಸ್ಥಿತರಿದ್ದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರು ಮಾತನಾಡಿ, ನೈತಿಕತೆ, ಮೌಲ್ಯಗಳನ್ನು ಉಳಿಸಿ ಬೆಳೆಸುವ ಮತ್ತು ಮುಂದಿನ ಪೀಳಿಗೆಗೆ ತಿಳಿಸುವ ಮಹತ್ತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದರು.

ಸದೃಢ ರಾಷ್ಟ್ರನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದ ಅವರು ಮಾಧ್ಯಮಗಳ ಜವಾಬ್ದಾರಿ ಮತ್ತು ಅಲ್ಲಿನ ಒತ್ತಡದ ಕುರಿತು ತಿಳಿಸುವುದರ ಜೊತೆಗೆ ಇಲಾಖೆಯ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸಿಕ ಪತ್ರಿಕೆಗಳ ಸಂಪಾದಕರಾಗಿ ಗುಣಮಟ್ಟದ ಮಾಸಿಕ ಪತ್ರಿಕೆ ಹೊರತರುವಲ್ಲಿ ವಹಿಸುವ ಶ್ರಮ ಮತ್ತು ಅನುಭವಗಳನ್ನು ಬಿಚ್ಚಿಟ್ಟರು. ಇದನ್ನೂ ಓದಿ: ‘ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಿಸಿದ ನಟ ಅನಂತ್ ನಾಗ್

ಖ್ಯಾತ ಚಲನಚಿತ್ರ ನಟ ಅನಂತನಾಗ್ ಅವರು ಪ್ರಧಾನ ಭಾಷಣ ಮಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿಗಳಾದ ಸಿ.ರೂಪಾ, ಸದಸ್ಯರಾದ ಶಿವಾನಂದ ತಗಡೂರು, ಕೆ.ಕೆ.ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೂಡ್ಲಿ ಗುರುರಾಜ್, ಗೋಪಾಲ್ ಯಡಗೆರೆ, ಸಿ.ಕೆ.ಮಹೇಂದ್ರ, ಜಗನ್ನಾಥ ಬಾಳ, ಕೆ.ವಿ.ಶಿವಕುಮಾರ, ದೇವಿಂದ್ರಪ್ಪ ಕಪನೂರು, ನಾಗಾರ್ಜುನ ದ್ವಾರಕನಾಥ, ಲಕ್ಷ್ಮೀನಾರಾಯಣ ಎಸ್., ಬದ್ರುದ್ದೀನ್ ಕೆ., ಕೆ.ಎಂ.ಶಿವರಾಜು ಸೇರಿದಂತೆ ಹಿರಿಯ ಪತ್ರಕರ್ತರು ಇದ್ದರು.

Live Tv
[brid partner=56869869 player=32851 video=960834 autoplay=true]

TAGGED:bengalurujc madhuswamymediaPress clubಪ್ರೆಸ್ ಕ್ಲಬ್ಬೆಂಗಳೂರುಮಾಧುಸ್ವಾಮಿಮಾಧ್ಯಮ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
10 minutes ago
Official India to host its first MotoGP race in 2023 at the Buddh International Circuit
Automobile

ಯುಪಿ ಸರ್ಕಾರದ ಜೊತೆ ಸಹಿ – 2027ಕ್ಕೆ ಭಾರತದಲ್ಲಿ MotoGP ರೇಸ್‌?

Public TV
By Public TV
36 minutes ago
Mitchell Santner
Cricket

ವಿಶ್ವಕಪ್‌ನಿಂದ ಶ್ರೀಲಂಕಾ ಔಟ್‌ – ನ್ಯೂಜಿಲೆಂಡ್‌ ಸೆಮಿ ಆಸೆ ಜೀವಂತ

Public TV
By Public TV
1 hour ago
Narendra Modi Israel Parliament speech
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲ್ ಜೊತೆ ಸದಾ ನಿಲ್ಲುತ್ತದೆ: ಮೋದಿ

Public TV
By Public TV
1 hour ago
Retired BBMP officer commits suicide due to fear of CBI
Bengaluru City

ಸಿಬಿಐ ಭಯಕ್ಕೆ ನಿವೃತ್ತ ಬಿಬಿಎಂಪಿ ಅಧಿಕಾರಿ ಆತ್ಮಹತ್ಯೆ?

Public TV
By Public TV
2 hours ago
Sirsi Marikamba Jatre
Districts

ಶಿರಸಿ ಮಾರಿಕಾಂಬಾ ದೇವಿಯ ಮಹಾ ರಥೋತ್ಸವಕ್ಕೆ ಅದ್ಧೂರಿ ಚಾಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?