Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ

Districts

ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ

Public TV
Last updated: September 4, 2025 10:51 pm
Public TV
Share
3 Min Read
DK Shivakumar Bidadi Township
SHARE

ರಾಮನಗರ: ಬಿಡದಿ ಟೌನ್‌ಶಿಪ್ (Bidadi Township) ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು ಕುಮಾರಸ್ವಾಮಿ. ಇದನ್ನು ನಾನು ಡಿನೋಟಿಫಿಕೇಷನ್ ಮಾಡಿ ಯಡಿಯೂರಪ್ಪರಂತೆ (BS Yediyurappa) ಜೈಲಿಗೆ ಹೋಗಲು ತಯಾರಿಲ್ಲ. ಕಾನೂನು ಚೌಕಟ್ಟಿನಲ್ಲಿ ರೈತರಿಗೆ ನೆರವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ಭೂಸ್ವಾಧೀನ ವಿರೋಧಿಸಿ ರಾಮನಗರದ (Ramanagara) ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಹೊರಗಡೆಯಿಂದ ಬಂದವನಲ್ಲ. ನಾನು ಕೂಡ ನಿಮ್ಮ ಜಿಲ್ಲೆಯವನೇ. ಬಿಡದಿ ಕೈಗಾರಿಕಾ ಪ್ರದೇಶ ಮಾಡಿದಾಗ ಯಾವ ಸರ್ಕಾರ ಅಧಿಕಾರದಲ್ಲಿತ್ತು ಎಂಬುದು ರೈತರಿಗೆ ತಿಳಿದಿದೆ. ಇದರಿಂದ 16 ಸಾವಿರ ಎಕರೆ ಭೂಮಿ ಹೋಯಿತು. ಟೊಯೋಟೊ ಸೇರಿದಂತೆ ಒಂದಷ್ಟು ಕಂಪನಿಗಳು ಈ ಭಾಗಕ್ಕೆ ಬಂದವು. ಈ ಹಿಂದೆ ಕೈಗಾರಿಕಾ ಪ್ರದೇಶವಾದಾಗ ನನ್ನದೂ ಸಹ 12 ಎಕರೆ ಜಮೀನು ಹೋಗಿದೆ. ಆಗ ಪರಿಹಾರವನ್ನು 8 ಲಕ್ಷಕ್ಕೆ ಮೀರಿ ನೀಡಿಯೇ ಇಲ್ಲ ಎಂದರು. ಇದನ್ನೂ ಓದಿ: ಸಮೀರ್‌ ವಿಡಿಯೋದಲ್ಲಿ ಬಳಸಿದ್ದ ಒಂದು ಪದಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಜಪ್ತಿ ಮಾಡಿದ್ದಾರೆ: ಮಟ್ಟಣ್ಣನವರ್‌

Bidadi Township Farmers Protest

ನಿಮಗೆ ಉತ್ತಮ ಪರಿಹಾರ ನೀಡಲು ಸುಮಾರು 10 ಸಾವಿರ ಕೋಟಿ ರೂ. ಸಾಲ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಮ್ಮ ಒಂದು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅವಶ್ಯಕತೆ ನಮಗಿಲ್ಲ. ಸ್ವಾಧೀನವಾಗಿರುವ ಭೂಮಿಯನ್ನು ಕಾನೂನು ಚೌಕಟ್ಟು ಮೀರಿ ಕೈ ಬಿಡುವ ಹಂತದಲ್ಲಿ ನಾನಿಲ್ಲ. ಕುಮಾರಸ್ವಾಮಿ ಅವರ ಧರ್ಮಪತ್ನಿಯವರು ಹಾಗೂ ಮಗ ಸೇರಿದಂತೆ ಶೇ.70 ರಷ್ಟು ಮಂದಿ ಪರಿಹಾರ ನೀಡಿ ಎಂದು ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಶೇ.30 ರಷ್ಟು ಮಂದಿ ಮಾತ್ರ ಒಪ್ಪಿಗೆ ನೀಡಿಲ್ಲ. ಆದರೆ ನಾನು ನಿಮ್ಮ ಪರವಾಗಿ ಏನು ತೀರ್ಮಾನ ತೆಗೆದುಕೊಳ್ಳಬೇಕು, ಯಾವ ರೀತಿ ಸಹಾಯ ಮಾಡಬೇಕು ಎಂದು ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಾಗಲಕೋಟೆಯ ಮಹಿಳೆಗೆ ಮದುವೆಯಾಗೋದಾಗಿ ಹೇಳಿ 5.50 ಲಕ್ಷ ವಂಚನೆ – ನೈಜೀರಿಯನ್‌ ಪ್ರಜೆ ಅರೆಸ್ಟ್‌

ಈ ವೇಳೆ ಶಾಸಕ ಬಾಲಕೃಷ್ಣ ಅವರು ರೈತರ ಪರವಿಲ್ಲ ಎಂದು ಪ್ರತಿಭಟನಾ ನಿರತ ರೈತರು ಆಕ್ಷೇಪ ವ್ಯಕ್ತಪಡಿಸಿದಾಗ, ಬಾಲಕೃಷ್ಣ ನಿಮ್ಮ ಪರವಾಗಿ ಎಷ್ಟು ಹೋರಾಟ ಮಾಡಿದ್ದಾರೆ ಎಂಬುದು ನನಗೆ ತಿಳಿದಿದೆ. ನನ್ನ ಹಿಂದೆ ಬಿದ್ದು ರೈತರ ಪರವಾಗಿ ಮಾತನಾಡಿದ್ದಾರೆ. ನಿಮ್ಮ ಭೂಮಿಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಹಿಂದೆ ಸಹಿ ಹಾಕಿದವರು ನಿಮ್ಮ ಪರವಾಗಿದ್ದಾರಾ? ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 1 ಕೋಟಿ ರೂ. ಪರಿಹಾರ ನಿಗದಿ ಮಾಡಿದವರು ನಿಮ್ಮ ಪರವಾಗಿದ್ದಾರಾ? ಅವರುಗಳು ಯಾರೂ ನಿಮ್ಮ ಪರವಾಗಿಲ್ಲ. ರೈತರಿಗೆ ಉತ್ತಮ ಪರಿಹಾರ ದೊರೆಯಬೇಕು ಎಂದು ಹೋರಾಟ ಮಾಡುತ್ತಿರುವ ಶಾಸಕ ಬಾಲಕೃಷ್ಣ ನಿಮ್ಮ ಪರವಾಗಿದ್ದಾರೆ. ನಿಮ್ಮ ಪರವಾಗಿ ಇವರಷ್ಟು ಹೋರಾಟವನ್ನು ಬೇರೆ ಯಾರೂ ಸಹ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ – ಒಟ್ಟು ಆಸ್ತಿ ಎಷ್ಟು?

ಡಿಎಲ್‌ಎಫ್ ಕಂಪನಿಯವರು ಈ ಪ್ರದೇಶವನ್ನು ತೆಗೆದುಕೊಂಡರು. ಆ ನಂತರ ಇಲ್ಲಿನ ವೃಷಭಾವತಿ ನೀರು ಸೇರಿದಂತೆ ಇತರೆ ಸಂಗತಿಗಳನ್ನು ಗಮನಿಸಿ ನಮ್ಮಿಂದ ಟೌನ್‌ಶಿಪ್ ಮಾಡಲು ಸಾಧ್ಯವಿಲ್ಲ ಎಂದು ಯೋಜನೆ ಕೈ ಬಿಟ್ಟರು. 9,600 ಎಕರೆ ಪ್ರದೇಶದಲ್ಲಿ ಸುಮಾರು 912 ಎಕರೆ ಪ್ರದೇಶವನ್ನು ಕೈಗಾರಿಕೆಗೆ ಎಂದು ನೀಡಲಾಯಿತು. ಎಕರೆಗೆ 1 ಕೋಟಿ ರೂ. ಹಾಗೂ ಅದಕ್ಕಿಂತ ಹೆಚ್ಚು ಪರಿಹಾರ ಹಣವನ್ನು ನಿಗದಿಪಡಿಸಲಾಯಿತು. ಆಗ ಯಾರೂ ಸಹ ವಿರೋಧ ಮಾಡಲಿಲ್ಲ. ಈಗ ಏಕೆ ವಿರೋಧ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಯಾದಗಿರಿ | ಹವಾಮಾನ ಬದಲಾವಣೆ – ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್

ಕುಮಾರಸ್ವಾಮಿ ಕೃಷ್ಣಾದಲ್ಲಿ ಸಭೆ ನಡೆಸಿ ಭೂಸ್ವಾಧೀನ ಕೈ ಬಿಡುವುದಾಗಿ ತಿಳಿಸಿದ್ದರು. ಅದರಂತೆ ನೀವು ಮಾಡಿ ಎಂದು ರೈತರು ಹೇಳಿದಾಗ, ಅವೆಲ್ಲ ಸುಳ್ಳು. ಯಾರೂ ಸಹ ಭೂಸ್ವಾಧೀನ ಕೈಬಿಡಲಿಲ್ಲ. ಈಗ ಅವರು ದೊಡ್ಡ ಸ್ಥಾನದಲ್ಲಿ ಇದ್ದಾರೆ. ಅವರಿಂದಲೇ ಭೂಸ್ವಾಧೀನವನ್ನು ಬಿಡಿಸಿಕೊಳ್ಳಿ ಎಂದರು. ಬಿಡಿಎಗೆ ಎಂದು ಭೂಸ್ವಾಧೀನ ಮಾಡಿಕೊಳ್ಳಲಾಯಿತು. ಈ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಗಿದೆ. ಆ ನಂತರ ಯಾವುದೇ ಬೆಳವಣಿಗೆ ಆಗಿಲ್ಲ. ನಾನು ಹೊಸದಾಗಿ ಭೂಸ್ವಾಧೀನ ಮಾಡಿಕೊಳ್ಳುತ್ತಿಲ್ಲ. ನೈಸ್ ಯೋಜನೆಯ ಭೂಮಿಯನ್ನು ಏಕೆ ವಜಾ ಮಾಡಲು ಆಗಲಿಲ್ಲ? ಏಕೆಂದರೆ ಕಾನೂನಿನ ಪ್ರಕಾರವೇ ನಾವು ಮುಂದುವರೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ ಬೆನ್ನಲ್ಲೇ ದುಬಾರಿಯಾಗಲಿದೆ ಆರ್‌ಸಿಬಿ ಟಿಕೆಟ್‌ ದರ

TAGGED:Bidadi TownshipBS YediyurappacongressdenotificationDK Shivakumarramanagaraಕಾಂಗ್ರೆಸ್ಡಿಕೆ ಶಿವಕುಮಾರ್ಡಿನೋಟಿಫಿಕೇಶನ್ಬಿಎಸ್ ಯಡಿಯೂರಪ್ಪಬಿಡದಿ ಟೌನ್‌ಶಿಪ್‌ರಾಮನಗರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
11 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
47 minutes ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
51 minutes ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
55 minutes ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
1 hour ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?