Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ

Districts

ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ

Public TV
Last updated: September 4, 2025 10:51 pm
Public TV
Share
3 Min Read
DK Shivakumar Bidadi Township
SHARE

ರಾಮನಗರ: ಬಿಡದಿ ಟೌನ್‌ಶಿಪ್ (Bidadi Township) ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು ಕುಮಾರಸ್ವಾಮಿ. ಇದನ್ನು ನಾನು ಡಿನೋಟಿಫಿಕೇಷನ್ ಮಾಡಿ ಯಡಿಯೂರಪ್ಪರಂತೆ (BS Yediyurappa) ಜೈಲಿಗೆ ಹೋಗಲು ತಯಾರಿಲ್ಲ. ಕಾನೂನು ಚೌಕಟ್ಟಿನಲ್ಲಿ ರೈತರಿಗೆ ನೆರವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ಭೂಸ್ವಾಧೀನ ವಿರೋಧಿಸಿ ರಾಮನಗರದ (Ramanagara) ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಹೊರಗಡೆಯಿಂದ ಬಂದವನಲ್ಲ. ನಾನು ಕೂಡ ನಿಮ್ಮ ಜಿಲ್ಲೆಯವನೇ. ಬಿಡದಿ ಕೈಗಾರಿಕಾ ಪ್ರದೇಶ ಮಾಡಿದಾಗ ಯಾವ ಸರ್ಕಾರ ಅಧಿಕಾರದಲ್ಲಿತ್ತು ಎಂಬುದು ರೈತರಿಗೆ ತಿಳಿದಿದೆ. ಇದರಿಂದ 16 ಸಾವಿರ ಎಕರೆ ಭೂಮಿ ಹೋಯಿತು. ಟೊಯೋಟೊ ಸೇರಿದಂತೆ ಒಂದಷ್ಟು ಕಂಪನಿಗಳು ಈ ಭಾಗಕ್ಕೆ ಬಂದವು. ಈ ಹಿಂದೆ ಕೈಗಾರಿಕಾ ಪ್ರದೇಶವಾದಾಗ ನನ್ನದೂ ಸಹ 12 ಎಕರೆ ಜಮೀನು ಹೋಗಿದೆ. ಆಗ ಪರಿಹಾರವನ್ನು 8 ಲಕ್ಷಕ್ಕೆ ಮೀರಿ ನೀಡಿಯೇ ಇಲ್ಲ ಎಂದರು. ಇದನ್ನೂ ಓದಿ: ಸಮೀರ್‌ ವಿಡಿಯೋದಲ್ಲಿ ಬಳಸಿದ್ದ ಒಂದು ಪದಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಜಪ್ತಿ ಮಾಡಿದ್ದಾರೆ: ಮಟ್ಟಣ್ಣನವರ್‌

Bidadi Township Farmers Protest

ನಿಮಗೆ ಉತ್ತಮ ಪರಿಹಾರ ನೀಡಲು ಸುಮಾರು 10 ಸಾವಿರ ಕೋಟಿ ರೂ. ಸಾಲ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಮ್ಮ ಒಂದು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅವಶ್ಯಕತೆ ನಮಗಿಲ್ಲ. ಸ್ವಾಧೀನವಾಗಿರುವ ಭೂಮಿಯನ್ನು ಕಾನೂನು ಚೌಕಟ್ಟು ಮೀರಿ ಕೈ ಬಿಡುವ ಹಂತದಲ್ಲಿ ನಾನಿಲ್ಲ. ಕುಮಾರಸ್ವಾಮಿ ಅವರ ಧರ್ಮಪತ್ನಿಯವರು ಹಾಗೂ ಮಗ ಸೇರಿದಂತೆ ಶೇ.70 ರಷ್ಟು ಮಂದಿ ಪರಿಹಾರ ನೀಡಿ ಎಂದು ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಶೇ.30 ರಷ್ಟು ಮಂದಿ ಮಾತ್ರ ಒಪ್ಪಿಗೆ ನೀಡಿಲ್ಲ. ಆದರೆ ನಾನು ನಿಮ್ಮ ಪರವಾಗಿ ಏನು ತೀರ್ಮಾನ ತೆಗೆದುಕೊಳ್ಳಬೇಕು, ಯಾವ ರೀತಿ ಸಹಾಯ ಮಾಡಬೇಕು ಎಂದು ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಾಗಲಕೋಟೆಯ ಮಹಿಳೆಗೆ ಮದುವೆಯಾಗೋದಾಗಿ ಹೇಳಿ 5.50 ಲಕ್ಷ ವಂಚನೆ – ನೈಜೀರಿಯನ್‌ ಪ್ರಜೆ ಅರೆಸ್ಟ್‌

ಈ ವೇಳೆ ಶಾಸಕ ಬಾಲಕೃಷ್ಣ ಅವರು ರೈತರ ಪರವಿಲ್ಲ ಎಂದು ಪ್ರತಿಭಟನಾ ನಿರತ ರೈತರು ಆಕ್ಷೇಪ ವ್ಯಕ್ತಪಡಿಸಿದಾಗ, ಬಾಲಕೃಷ್ಣ ನಿಮ್ಮ ಪರವಾಗಿ ಎಷ್ಟು ಹೋರಾಟ ಮಾಡಿದ್ದಾರೆ ಎಂಬುದು ನನಗೆ ತಿಳಿದಿದೆ. ನನ್ನ ಹಿಂದೆ ಬಿದ್ದು ರೈತರ ಪರವಾಗಿ ಮಾತನಾಡಿದ್ದಾರೆ. ನಿಮ್ಮ ಭೂಮಿಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಹಿಂದೆ ಸಹಿ ಹಾಕಿದವರು ನಿಮ್ಮ ಪರವಾಗಿದ್ದಾರಾ? ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 1 ಕೋಟಿ ರೂ. ಪರಿಹಾರ ನಿಗದಿ ಮಾಡಿದವರು ನಿಮ್ಮ ಪರವಾಗಿದ್ದಾರಾ? ಅವರುಗಳು ಯಾರೂ ನಿಮ್ಮ ಪರವಾಗಿಲ್ಲ. ರೈತರಿಗೆ ಉತ್ತಮ ಪರಿಹಾರ ದೊರೆಯಬೇಕು ಎಂದು ಹೋರಾಟ ಮಾಡುತ್ತಿರುವ ಶಾಸಕ ಬಾಲಕೃಷ್ಣ ನಿಮ್ಮ ಪರವಾಗಿದ್ದಾರೆ. ನಿಮ್ಮ ಪರವಾಗಿ ಇವರಷ್ಟು ಹೋರಾಟವನ್ನು ಬೇರೆ ಯಾರೂ ಸಹ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ – ಒಟ್ಟು ಆಸ್ತಿ ಎಷ್ಟು?

ಡಿಎಲ್‌ಎಫ್ ಕಂಪನಿಯವರು ಈ ಪ್ರದೇಶವನ್ನು ತೆಗೆದುಕೊಂಡರು. ಆ ನಂತರ ಇಲ್ಲಿನ ವೃಷಭಾವತಿ ನೀರು ಸೇರಿದಂತೆ ಇತರೆ ಸಂಗತಿಗಳನ್ನು ಗಮನಿಸಿ ನಮ್ಮಿಂದ ಟೌನ್‌ಶಿಪ್ ಮಾಡಲು ಸಾಧ್ಯವಿಲ್ಲ ಎಂದು ಯೋಜನೆ ಕೈ ಬಿಟ್ಟರು. 9,600 ಎಕರೆ ಪ್ರದೇಶದಲ್ಲಿ ಸುಮಾರು 912 ಎಕರೆ ಪ್ರದೇಶವನ್ನು ಕೈಗಾರಿಕೆಗೆ ಎಂದು ನೀಡಲಾಯಿತು. ಎಕರೆಗೆ 1 ಕೋಟಿ ರೂ. ಹಾಗೂ ಅದಕ್ಕಿಂತ ಹೆಚ್ಚು ಪರಿಹಾರ ಹಣವನ್ನು ನಿಗದಿಪಡಿಸಲಾಯಿತು. ಆಗ ಯಾರೂ ಸಹ ವಿರೋಧ ಮಾಡಲಿಲ್ಲ. ಈಗ ಏಕೆ ವಿರೋಧ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಯಾದಗಿರಿ | ಹವಾಮಾನ ಬದಲಾವಣೆ – ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್

ಕುಮಾರಸ್ವಾಮಿ ಕೃಷ್ಣಾದಲ್ಲಿ ಸಭೆ ನಡೆಸಿ ಭೂಸ್ವಾಧೀನ ಕೈ ಬಿಡುವುದಾಗಿ ತಿಳಿಸಿದ್ದರು. ಅದರಂತೆ ನೀವು ಮಾಡಿ ಎಂದು ರೈತರು ಹೇಳಿದಾಗ, ಅವೆಲ್ಲ ಸುಳ್ಳು. ಯಾರೂ ಸಹ ಭೂಸ್ವಾಧೀನ ಕೈಬಿಡಲಿಲ್ಲ. ಈಗ ಅವರು ದೊಡ್ಡ ಸ್ಥಾನದಲ್ಲಿ ಇದ್ದಾರೆ. ಅವರಿಂದಲೇ ಭೂಸ್ವಾಧೀನವನ್ನು ಬಿಡಿಸಿಕೊಳ್ಳಿ ಎಂದರು. ಬಿಡಿಎಗೆ ಎಂದು ಭೂಸ್ವಾಧೀನ ಮಾಡಿಕೊಳ್ಳಲಾಯಿತು. ಈ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಗಿದೆ. ಆ ನಂತರ ಯಾವುದೇ ಬೆಳವಣಿಗೆ ಆಗಿಲ್ಲ. ನಾನು ಹೊಸದಾಗಿ ಭೂಸ್ವಾಧೀನ ಮಾಡಿಕೊಳ್ಳುತ್ತಿಲ್ಲ. ನೈಸ್ ಯೋಜನೆಯ ಭೂಮಿಯನ್ನು ಏಕೆ ವಜಾ ಮಾಡಲು ಆಗಲಿಲ್ಲ? ಏಕೆಂದರೆ ಕಾನೂನಿನ ಪ್ರಕಾರವೇ ನಾವು ಮುಂದುವರೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ ಬೆನ್ನಲ್ಲೇ ದುಬಾರಿಯಾಗಲಿದೆ ಆರ್‌ಸಿಬಿ ಟಿಕೆಟ್‌ ದರ

TAGGED:Bidadi TownshipBS YediyurappacongressdenotificationDK Shivakumarramanagaraಕಾಂಗ್ರೆಸ್ಡಿಕೆ ಶಿವಕುಮಾರ್ಡಿನೋಟಿಫಿಕೇಶನ್ಬಿಎಸ್ ಯಡಿಯೂರಪ್ಪಬಿಡದಿ ಟೌನ್‌ಶಿಪ್‌ರಾಮನಗರ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
5 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
5 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
6 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
6 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
7 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?