Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರು ಇರ್ಲಿಲ್ಲ ಅಂತ ವಿಷ ಕೊಟ್ಟಿದ್ದಾರೆ, ಬಡವರು ಸತ್ತಾಗೆಲ್ಲ ಮೋದಿ ಮೌನವಾಗಿರ್ತಾರೆ – ರಾಹುಲ್‌ ಗಾಂಧಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೀರು ಇರ್ಲಿಲ್ಲ ಅಂತ ವಿಷ ಕೊಟ್ಟಿದ್ದಾರೆ, ಬಡವರು ಸತ್ತಾಗೆಲ್ಲ ಮೋದಿ ಮೌನವಾಗಿರ್ತಾರೆ – ರಾಹುಲ್‌ ಗಾಂಧಿ ಕಿಡಿ

Latest

ನೀರು ಇರ್ಲಿಲ್ಲ ಅಂತ ವಿಷ ಕೊಟ್ಟಿದ್ದಾರೆ, ಬಡವರು ಸತ್ತಾಗೆಲ್ಲ ಮೋದಿ ಮೌನವಾಗಿರ್ತಾರೆ – ರಾಹುಲ್‌ ಗಾಂಧಿ ಕಿಡಿ

Public TV
Last updated: January 2, 2026 3:12 pm
Public TV
Share
3 Min Read
NARENDRA MODI RAHUL GANDHI
SHARE

– ಕಲುಷಿತ ನೀರು ಸೇವಿಸಿ ಸಾವು ಪ್ರಕರಣ; ಬಿಜೆಪಿಗೆ ತರಾಟೆ

ನವದೆಹಲಿ/ಭೋಪಾಲ್: ಇಂದೋರ್‌ನಲ್ಲಿ ನೀರು ಇರಲಿಲ್ಲ ಹಾಗಾಗಿ ಕುಡಿಯೋಕೆ ವಿಷ ಹಂಚಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ದೇಶದ ನಂ.1 ಸ್ವಚ್ಛ ನಗರಿ ಆಗಿರುವ ಇಂದೋರ್‌ನಲ್ಲಿ ಕಲುಷಿತ ನೀರು (Contaminated Water) ಸೇವಿಸಿ 14 ಮಂದಿ ಸಾವನ್ನಪ್ಪಿದ್ದ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಆಡಳಿತಾರೂಢ ಬಿಜೆಪಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಆಡಳಿತ ಗಾಢ ನಿದ್ರೆಯಲ್ಲಿದೆ. ಇಂದೋರ್‌ನಲ್ಲಿ ನೀರು ಇರಲಿಲ್ಲ, ಆದ್ದರಿಂದ ವಿಷ ಹಂಚಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

इंदौर में पानी नहीं, ज़हर बंटा और प्रशासन कुंभकर्णी नींद में रहा।

घर-घर मातम है, गरीब बेबस हैं – और ऊपर से BJP नेताओं के अहंकारी बयान। जिनके घरों में चूल्हा बुझा है, उन्हें सांत्वना चाहिए थी; सरकार ने घमंड परोस दिया।

लोगों ने बार-बार गंदे, बदबूदार पानी की शिकायत की – फिर भी…

— Rahul Gandhi (@RahulGandhi) January 2, 2026

ಈಗ ಅಲ್ಲಿನ ಪ್ರತಿ ಮನೆಯಲ್ಲೂ ಶೋಕ ಮಡುಗಟ್ಟಿದೆ. ಬಡವರು ಅಸಹಾಯಕರಾಗಿದ್ದಾರೆ. ಆದ್ರೆ ಬಿಜೆಪಿ ನಾಯಕರು (BJP Leaders) ದುರಹಂಕಾರದ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಮನೆ ದೀಪ ಆರಿಹೋದವರಿಗೆ ಸಾಂತ್ವನ ಹೇಳುವುದನ್ನ ಬಿಟ್ಟು, ಧಿಮಾಕಿನ ಹೇಳಿಕೆಗಳನ್ನ ನೀಡುತ್ತಿದೆ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಸೇವನೆಯಿಂದ ಸಾವಿನ ಸಂಖ್ಯೆ 14ಕ್ಕೆ ಏರಿಕೆ – 200 ಮಂದಿ ಆಸ್ಪತ್ರೆಗೆ ದಾಖಲು

ಪ್ರಶ್ನೆಗಳ ಸುರಿಮಳೆ
ಕಲುಷಿತ ಹಾಗೂ ದುರ್ವಾಸನೆ ಬೀರುವ ನೀರಿನ ಬಗ್ಗೆ ಜನರು ಪದೇ ಪದೇ ದೂರು ನೀಡುತ್ತಾ ಬಂದಿದ್ದರು. ಆದ್ರೆ ಸರ್ಕಾರ ಅವರ ದೂರುಗಳನ್ನ ಏಕೆ ಆಲಿಸಿಲ್ಲ? ಕುಡಿಯೋ ನೀರಿನೊಂದಿಗೆ ಕೊಳಚೆ ನೀರು ಹೇಗೆ ಬೆರೆತುಹೋಯಿತು? ಸಕಾಲದಲ್ಲಿ ಏಕೆ ನೀರು ಸರಬರಾಜು ಮಾಡಲಿಲ್ಲ? ಜವಾಬ್ದಾರಿಯುತ ಅಧಿಕಾರಿಗಳು ಮತ್ತು ನಾಯಕರ ವಿರುದ್ಧ ಕ್ರಮ ಕೈಗೊಳ್ಳೋದು ಯಾವಾಗ? ಎಂದು ಪ್ರಶ್ನೆಗಳ ಮಳೆ ಸುರಿಸಿದ್ದಾರೆ. ಇದನ್ನೂ ಓದಿ: ಮುಂಬೈ-ಅಹಮದಾಬಾದ್ ಬುಲೆಟ್ ಟ್ರೈನ್ ಯೋಜನೆಗೆ ಮಹತ್ವದ ಮೈಲುಗಲ್ಲು

drinking water1 0

ಬಡವರು ಸತ್ತಾಗಲೆಲ್ಲ ಮೋದಿ ಮೌನ
ಇವು ಕ್ಷುಲ್ಲಕ ಪ್ರಶ್ನೆಗಳಲ್ಲ, ಪ್ರತಿಯೊಬ್ಬರ ಹೊಣೆಗಾರಿಕೆಯನ್ನು ಸೂಚಿಸುತ್ತದೆ. ಶುದ್ಧ ನೀರು ಪೂರೈಕೆ ಔದಾರ್ಯವಲ್ಲ, ಅದು ಬದುಕುವ ಹಕ್ಕು. ಆದ್ರೆ ಬಿಜೆಪಿ ಡಬಲ್ ಎಂಜಿನ್‌ ಸರ್ಕಾರದ ನಿರ್ಲಕ್ಷ್ಯ ಆಡಳಿತ ಜನರ ಹಕ್ಕುಗಳನ್ನ ಸಂಪೂರ್ಣ ನಾಶಪಡಿಸಿದೆ. ಮಧ್ಯಪ್ರದೇಶ ಈಗ ದುರಾಡಳಿತದ ಕೇಂದ್ರಬಿಂದುವಾಗಿದೆ. ಕೆಮ್ಮಿನ ಸಿರಪ್‌ನಿಂದ ಸಾವುಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ಇಲಿಗಳಿಂದ ಮಕ್ಕಳ ಸಾವು, ಈಗ ಒಳಚರಂಡಿ ಕಲುಷಿತ ನೀರು ಕುಡಿದು ಸಾವು ಸಂಭವಿಸಿದೆ. ಬಡವರು ಸತ್ತಾಗಲೆಲ್ಲಾ ಮೋದಿ (Narendra Modi) ಮೌನವಾಗಿರುತ್ತಾರೆ ಎಂದು ಕುಟುಕಿದ್ದಾರೆ.

ಸಾವು 14ಕ್ಕೆ ಏರಿಕೆ
ಇಂದೋರ್‌ನ (Indore) ಭಾಗೀರಥಪುರದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 200 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 1,400ಕ್ಕೂ ಅಧಿಕ ಜನರು ವಾಂತಿ, ಭೇದಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಸ್ವೀಟ್‌ ಕೊಡ್ತೀನಿ ಅಂತ ಕರೆಸಿ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಮಹಿಳೆ!

bjp flag

ಕಳೆದ 8 ವರ್ಷಗಳಿಂದ ಇಂದೋರ್ ಭಾರತದ ಅತ್ಯಂತ ಸ್ವಚ್ಛ ನಗರವೆಂದು ಖ್ಯಾತಿ ಪಡೆದಿದೆ. ಈಗ ಅದೇ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಜನ ಸಾವನ್ನಪ್ಪುತ್ತಿದ್ದ ಚರ್ಚೆಗೆ ಗ್ರಾಸವಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಯೋಗಾಲಯದಲ್ಲಿ ನೀರಿನ ಪರೀಕ್ಷೆ ನಡೆದಿದ್ದು, ಕಲುಷಿತ ನೀರಿನಿಂದಾಗಿ ಜನರು ಅಸ್ವಸ್ಥರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮೂವರು ಸಸ್ಪೆಂಡ್‌, ಓರ್ವ ಅಧಿಕಾರಿ ಡಿಸ್‌ಮಿಸ್‌
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಅಧಿಕಾರಿಗಳನ್ನ ಅಮಾನತುಗೊಳಿಸಲಾಗಿದೆ. ಒಬ್ಬ ಅಧಿಕಾರಿಯನ್ನ ಕೆಲಸದಿಂದಲೇ ವಜಾಗೊಳಿಸಲಾಗಿದೆ. ಮೂವರು ಸದಸ್ಯರ ಸಮಿತಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಈ ಮಧ್ಯೆ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ. ಇದನ್ನೂ ಓದಿ: ಜನಾರ್ದನ್ ರೆಡ್ಡಿ ಮೇಲೆ ಗುಂಡು ಹಾರಿತು, ಒಬ್ಬ ಪೆಟ್ರೋಲ್ ಬಾಂಬ್ ಎಸೆದ: ಶ್ರೀರಾಮುಲು ಗಂಭೀರ ಆರೋಪ 

TAGGED:BJP governmentcontaminated waterMadhya Pradeshnarendra modiRahul Gandhiಇಂದೋರ್ಕಲುಷಿತ ನೀರುನರೇಂದ್ರ ಮೋದಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
11 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
18 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
41 minutes ago
Chikkaballapura Car Accident
Chikkaballapur

ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

Public TV
By Public TV
43 minutes ago
RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
2 hours ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?