ರೋಹಿಣಿ-ರೂಪಾ ವಿರುದ್ಧ ಕಾನೂನು ‌ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

Public TV
1 Min Read
ROHINI SINDHURI AND D.ROOPA

ಬೆಂಗಳೂರು : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್‌ ಅಧಿಕಾರಿ ರೂಪಾ (Roopa) ನಡುವಿನ ಕಿತ್ತಾಟದಕ್ಕೆ ಸಿಎಂ ಬೊಮ್ಮಾಯಿ (CM Bommai) ಅಸಮಾಧಾನ ಹೊರ ಹಾಕಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ಬಹಿರಂಗವಾಗಿ ಮಾತನಾಡುವುದು,ಕಿತ್ತಾಡುವುಸು ಶೋಭೆ ತರುವುದಿಲ್ಲ ಅಂತ ಆಕ್ರೋಶ ಹೊರ ಹಾಕಿದ್ದಾರೆ.

ಇದರ ಜೊತೆ ಇಬ್ಬರು ಅಧಿಕಾರಿಗಳ ವಿರುದ್ದ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಸಿಂಧೂರಿ ಮತ್ತು ರೂಪಾ ನಡುವಿನ ಕಿತ್ತಾಟದ ಬಗ್ಗೆ ಸಿಎಂ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಇಬ್ಬರು ಅಧಿಕಾರಿಗಳ ವರ್ತನೆಯಿಂದ ಸರ್ಕಾರಕ್ಕೆ ಮುಜುಗರ ಆಗ್ತಿದೆ. ಹೀಗಾಗಿ ಇವರ ವಿರುದ್ದ ಕ್ರಮ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಏನು ಸಾಧ್ಯವೋ ಅದರಂತೆ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇಬ್ಬರು ಅಧಿಕಾರಿಗಳಿಗೆ ನೊಟೀಸ್ ನೀಡಲು ಸಿಎಂ ಸೂಚನೆ ನೀಡಿದ್ದು, ಇಬ್ಬರಿಂದ ಉತ್ತರ ಬಂದ ಬಳಿಕ ಕ್ರಮ ತೆಗೆದುಕೊಳ್ಳುವಂತೆ ಸಿಎಂ‌ ನಿರ್ದೇಶನ ನೀಡಿದ್ದಾರೆ.

AragaJnanendra

ಅಧಿಕಾರಿಗಳ ನಡುವಿನ ಕಿತ್ತಾಟದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಪ್ರತಿಕ್ರಿಯಿಸಿದ್ದು, ಅಧಿಕಾರಿಗಳ ಈ ವರ್ತನೆಗಳಿಂದ ನನಗೆ ಬಹಳ ಬೇಸರವಾಗಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಜನ ದೇವಮಾನವರೆಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲಾ ಅಧಿಕಾರಿಗಳಿಗೂ ಅಪಮಾನವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

ಈಗಾಗಲೇ ಪೊಲೀಸ್ ಮಾಹಾನಿರ್ದೇಶಕರೊಂದಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಲಾಗಿದೆ. ಕಾನೂನು ಚೌಕಟ್ಟಿನೊಳಗೆ ಏನು ಕ್ರಮಕೈಗೊಳ್ಳಬೇಕೋ ಅದನ್ನು ಸಿಎಂ ತೆಗೆದುಕೊಳ್ಳುತ್ತಾರೆ. ಈ ಹಿಂದೆ ಸಹ ಈ ಇಬ್ಬರಿಗೆ ನೋಟಿಸ್ ನೀಡಲಾಗಿತ್ತು. ಅಷ್ಟಾದರೂ ಇದು ಮುಂದುವರೆದಿದೆ ಎಂದಿದ್ದಾರೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ – ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿದ್ದೇ ಕಾರಣ: ತನಿಖಾ ವರದಿ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
1 Comment

Leave a Reply

Your email address will not be published. Required fields are marked *