Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ

Dharwad

ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ

Public TV
Last updated: September 25, 2024 8:20 am
Public TV
Share
3 Min Read
Hubballi ESI Hospital Case
SHARE

ಹುಬ್ಬಳ್ಳಿ: ಗಣೇಶ ಹಬ್ಬ (Ganesha Festival) ಮುಗಿದ ಮೇಲೆ ಹುಬ್ಬಳ್ಳಿಯಲ್ಲಿ (Hubballi) ವಿವಾದ ಕಿಡಿಯೊಂದು ಹೊತ್ತಿಕೊಂಡಿದೆ. ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿದ ಸರ್ಕಾರಿ ನೌಕರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹುಬ್ಬಳ್ಳಿ ಇಎಸ್‌ಐ ಆಸ್ಪತ್ರೆಯಲ್ಲಿ (ESI Hospital) ಗಣೇಶ ವಿವಾದದ ಹಿಂದೆ ಹಲವಾರು ಅನುಮಾನ ಹುಟ್ಟಿಕೊಳ್ಳುತ್ತಿವೆ. ಆಸ್ಪತ್ರೆ ಅಧೀಕ್ಷಕರ ನಡೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಾರಿ ರಾಜ್ಯದಲ್ಲಿ ವಿವಿಧ ಕಡೆ ಗಣೇಶ ಹಬ್ಬದಲ್ಲಿ ಗಲಾಟೆಯಾಗಿದೆ. ಕೆಲವು ಕಡೆ ವಿವಾದ ಸಹ ಆಗಿದೆ. ಆದರೆ ಹುಬ್ಬಳ್ಳಿ ಧಾರವಾಡದಲ್ಲಿ ಮಾತ್ರ ಅತ್ಯಂತ ಶಾಂತಿಯುತವಾಗಿ ಗಣೇಶ ಹಬ್ಬ ನಡೆದಿದೆ. ಈಗ ಹಬ್ಬ ಮುಗಿದ ಮೇಲೆ ಗಣೇಶ ವಿವಾದ ಕಿಡಿ ಎದ್ದಿದೆ. ಗಣೇಶ ಚತುರ್ಥಿಯಂದು ವಿವಾದ ಮೈಮೇಲೆ ಎಳೆದುಕೊಂಡಿದ್ದ ಹುಬ್ಬಳ್ಳಿ ಇಎಸ್‌ಐ ಆಸ್ಪತ್ರೆ ಆಡಳಿತ ಮಂಡಳಿ ಈಗ ಮತ್ತೆ ವಿವಾದಾತ್ಮಕ ನಡೆಯಿಂದ ಸುದ್ದಿಯಾಗಿದೆ. ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಹತ್ಯೆ

ಹುಬ್ಬಳ್ಳಿ ಕಾರವಾರ ರಸ್ತೆಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿತ್ತು. ಆದರೆ ಈ ಬಾರಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದ ಹಿನ್ನೆಲೆ ಆಸ್ಪತ್ರೆ ಆವರಣದಲ್ಲಿದ್ದ ಶಾಶ್ವತ ಮೂರ್ತಿಗೆ ಪೂಜೆ ನಡೆಸಲಾಗುತ್ತಿತ್ತು. ಇದಕ್ಕೆ ಆಸ್ಪತ್ರೆ ಮುಖ್ಯಸ್ಥ ಯೂನಿಸ್ ನಜ್ಮಿ ಕಾರಣ. ಅವರು ಮುಸ್ಲಿಂ ಎನ್ನುವ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿಲ್ಲ ಅಂತ ಆರೋಪ ಸಹ ಕೇಳಿ ಬಂದಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಬಿಜೆಪಿ ಸದಸ್ಯರು ಆಸ್ಪತ್ರೆಗೆ ನುಗ್ಗಿ ತಾವೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದ್ದರು. ಅಲ್ಲದೆ ಅಧೀಕ್ಷಕ ನಜ್ಮಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು. ಇದಾದ ಬಳಿಕ ಎಲ್ಲವೂ ಸರಿಯಾಯಿತು ಎನ್ನುವಷ್ಟರಲ್ಲಿ ಆಸ್ಪತ್ರೆ ಅಧೀಕ್ಷಕ ನಜ್ಮಿ ಮತ್ತೊಂದು ವರ್ತನೆ ತೋರಿದ್ದಾರೆ. ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿರುವ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಇದು ಹಿಂದೂಪರ ಸಂಘಟನೆಯ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ

ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಮಯದಲ್ಲಿ ಕೋಮು ಗಲಭೆಯ ಸೃಷ್ಟಿ ಪ್ರಯತ್ನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸರ್ಕಾರದ ಸಿಬ್ಬಂದಿಯಾಗಿ ಹಿಂದೂಪರ ಸಂಘಟನೆಗಳ ಜೊತೆಗೆ ಸೇರಿ ಗಣೇಶ ಮೂರ್ತಿ ಕೂರಿಸಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ಆಗಬಾರದು ಎಂದು ಶುಶ್ರೂಷಾಧಿಕಾರಿ ಜಗದೀಶ್ ಎನ್ನುವವರಿಗೆ ಕಳೆದ 20ರಂದು ನೋಟಿಸ್ ನೀಡಲಾಗಿದೆ. ಏಳು ದಿನ ಉತ್ತರ ನೀಡಲು ಅವಕಾಶ ನೀಡಲಾಗಿದೆ. ಇನ್ನೂ ಈ ವಿಷಯ ಹೊರಗಡೆ ಬಾರದಂತೆ ಎಚ್ಚರಿಕೆ ಸಹ ನೀಡಲಾಗಿದೆಯಂತೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಅಧೀಕ್ಷಕ ನಜ್ಮಿ ಸಂಪರ್ಕಿಸಿದಾಗ, ಇದು ನಮ್ಮ ಆಡಳಿತಾತ್ಮಕ ವಿಷಯ, ನಮ್ಮ ಮೇಲಿನ ಅಧಿಕಾರಿಗಳ ಗಮನಕ್ಕೆ ತಂದೇ ನೋಟಿಸ್ ನೀಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹಜ್‌ ಯಾತ್ರೆಯ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ – ಪಾಕ್‌ಗೆ ಸೌದಿ ಎಚ್ಚರಿಕೆ

ಒಟ್ಟಿನಲ್ಲಿ ಇಎಸ್‌ಐ ಆಸ್ಪತ್ರೆ ಅಧೀಕ್ಷಕ ನಜ್ಮಿ ನಡೆ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಹಬ್ಬದ ಆಚರಣೆ ಮಾಡಿದ ಸಿಬ್ಬಂದಿಗೆ ಧರ್ಮ ಸಂಕಟ ಎದುರಾಗಿದೆ. ಈ ನೋಟಿಸ್ ಮತ್ಯಾವ ರೂಪಪಡೆದುಕೊಳ್ಳಲಿದೆ ಎಂಬುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ತಿರುಮಲನ ಸನ್ನಿಧಿಗೆ 2 ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು

TAGGED:ESI HospitalGanesha idolHindu Organisationhubballiಇಎಸ್‍ಐ ಆಸ್ಪತ್ರೆಗಣೇಶ ಪ್ರತಿಷ್ಠಾಪನೆಹಿಂದೂ ಸಂಘಟನೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

ಸಾಂದರ್ಭಿಕ ಚಿತ್ರ
Bagalkot

10 ವರ್ಷದ ಬಳಿಕ ಚಾಲುಕ್ಯ ಉತ್ಸವ – ಜ. 19 ರಂದು ಚಾಲನೆ

Public TV
By Public TV
1 minute ago
Bengaluru Kempegowda International Airport 4
Bengaluru City

2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ – ದಾಖಲೆ ಬರೆದ ಬೆಂಗಳೂರು ವಿಮಾನ ನಿಲ್ದಾಣ

Public TV
By Public TV
21 minutes ago
Bengaluru Techie Women 3
Bengaluru City

ಟೆಕ್ಕಿ ಕೊಲೆ ಕೇಸ್ – ಆರೋಪಿಗೆ ಶರ್ಮಿಳಾ ಮೇಲೆ ಲವ್‌ ಶುರುವಾಗಿದ್ದು ಹೇಗೆ?

Public TV
By Public TV
56 minutes ago
Eshwar Khandre
Bengaluru City

ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಈಶ್ವರ ಖಂಡ್ರೆ ಸಂತಾಪ

Public TV
By Public TV
56 minutes ago
Three held hostage by cybercriminals in Cambodia rescued returned to Belgavi
Belgaum

ಕಾಂಬೋಡಿಯದಲ್ಲಿ ಸೈಬರ್‌ ವಂಚಕರಿಂದ ಟಾರ್ಚರ್‌ – ಮೂವರ ರಕ್ಷಣೆ, ಬೆಳಗಾವಿಗೆ ವಾಪಸ್‌

Public TV
By Public TV
58 minutes ago
Eshwar Khandre
Bidar

ಡಾ.ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ – ವದಂತಿಗಳಿಗೆ ಕಿವಿಗೊಡದಂತೆ ಈಶ್ವರ್‌ ಖಂಡ್ರೆ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?