Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ

Dharwad

ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ

Public TV
Last updated: September 25, 2024 8:20 am
Public TV
Share
3 Min Read
Hubballi ESI Hospital Case
SHARE

ಹುಬ್ಬಳ್ಳಿ: ಗಣೇಶ ಹಬ್ಬ (Ganesha Festival) ಮುಗಿದ ಮೇಲೆ ಹುಬ್ಬಳ್ಳಿಯಲ್ಲಿ (Hubballi) ವಿವಾದ ಕಿಡಿಯೊಂದು ಹೊತ್ತಿಕೊಂಡಿದೆ. ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿದ ಸರ್ಕಾರಿ ನೌಕರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹುಬ್ಬಳ್ಳಿ ಇಎಸ್‌ಐ ಆಸ್ಪತ್ರೆಯಲ್ಲಿ (ESI Hospital) ಗಣೇಶ ವಿವಾದದ ಹಿಂದೆ ಹಲವಾರು ಅನುಮಾನ ಹುಟ್ಟಿಕೊಳ್ಳುತ್ತಿವೆ. ಆಸ್ಪತ್ರೆ ಅಧೀಕ್ಷಕರ ನಡೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಾರಿ ರಾಜ್ಯದಲ್ಲಿ ವಿವಿಧ ಕಡೆ ಗಣೇಶ ಹಬ್ಬದಲ್ಲಿ ಗಲಾಟೆಯಾಗಿದೆ. ಕೆಲವು ಕಡೆ ವಿವಾದ ಸಹ ಆಗಿದೆ. ಆದರೆ ಹುಬ್ಬಳ್ಳಿ ಧಾರವಾಡದಲ್ಲಿ ಮಾತ್ರ ಅತ್ಯಂತ ಶಾಂತಿಯುತವಾಗಿ ಗಣೇಶ ಹಬ್ಬ ನಡೆದಿದೆ. ಈಗ ಹಬ್ಬ ಮುಗಿದ ಮೇಲೆ ಗಣೇಶ ವಿವಾದ ಕಿಡಿ ಎದ್ದಿದೆ. ಗಣೇಶ ಚತುರ್ಥಿಯಂದು ವಿವಾದ ಮೈಮೇಲೆ ಎಳೆದುಕೊಂಡಿದ್ದ ಹುಬ್ಬಳ್ಳಿ ಇಎಸ್‌ಐ ಆಸ್ಪತ್ರೆ ಆಡಳಿತ ಮಂಡಳಿ ಈಗ ಮತ್ತೆ ವಿವಾದಾತ್ಮಕ ನಡೆಯಿಂದ ಸುದ್ದಿಯಾಗಿದೆ. ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಹತ್ಯೆ

ಹುಬ್ಬಳ್ಳಿ ಕಾರವಾರ ರಸ್ತೆಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿತ್ತು. ಆದರೆ ಈ ಬಾರಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದ ಹಿನ್ನೆಲೆ ಆಸ್ಪತ್ರೆ ಆವರಣದಲ್ಲಿದ್ದ ಶಾಶ್ವತ ಮೂರ್ತಿಗೆ ಪೂಜೆ ನಡೆಸಲಾಗುತ್ತಿತ್ತು. ಇದಕ್ಕೆ ಆಸ್ಪತ್ರೆ ಮುಖ್ಯಸ್ಥ ಯೂನಿಸ್ ನಜ್ಮಿ ಕಾರಣ. ಅವರು ಮುಸ್ಲಿಂ ಎನ್ನುವ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿಲ್ಲ ಅಂತ ಆರೋಪ ಸಹ ಕೇಳಿ ಬಂದಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಬಿಜೆಪಿ ಸದಸ್ಯರು ಆಸ್ಪತ್ರೆಗೆ ನುಗ್ಗಿ ತಾವೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದ್ದರು. ಅಲ್ಲದೆ ಅಧೀಕ್ಷಕ ನಜ್ಮಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು. ಇದಾದ ಬಳಿಕ ಎಲ್ಲವೂ ಸರಿಯಾಯಿತು ಎನ್ನುವಷ್ಟರಲ್ಲಿ ಆಸ್ಪತ್ರೆ ಅಧೀಕ್ಷಕ ನಜ್ಮಿ ಮತ್ತೊಂದು ವರ್ತನೆ ತೋರಿದ್ದಾರೆ. ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿರುವ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಇದು ಹಿಂದೂಪರ ಸಂಘಟನೆಯ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ

ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಮಯದಲ್ಲಿ ಕೋಮು ಗಲಭೆಯ ಸೃಷ್ಟಿ ಪ್ರಯತ್ನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸರ್ಕಾರದ ಸಿಬ್ಬಂದಿಯಾಗಿ ಹಿಂದೂಪರ ಸಂಘಟನೆಗಳ ಜೊತೆಗೆ ಸೇರಿ ಗಣೇಶ ಮೂರ್ತಿ ಕೂರಿಸಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ಆಗಬಾರದು ಎಂದು ಶುಶ್ರೂಷಾಧಿಕಾರಿ ಜಗದೀಶ್ ಎನ್ನುವವರಿಗೆ ಕಳೆದ 20ರಂದು ನೋಟಿಸ್ ನೀಡಲಾಗಿದೆ. ಏಳು ದಿನ ಉತ್ತರ ನೀಡಲು ಅವಕಾಶ ನೀಡಲಾಗಿದೆ. ಇನ್ನೂ ಈ ವಿಷಯ ಹೊರಗಡೆ ಬಾರದಂತೆ ಎಚ್ಚರಿಕೆ ಸಹ ನೀಡಲಾಗಿದೆಯಂತೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಅಧೀಕ್ಷಕ ನಜ್ಮಿ ಸಂಪರ್ಕಿಸಿದಾಗ, ಇದು ನಮ್ಮ ಆಡಳಿತಾತ್ಮಕ ವಿಷಯ, ನಮ್ಮ ಮೇಲಿನ ಅಧಿಕಾರಿಗಳ ಗಮನಕ್ಕೆ ತಂದೇ ನೋಟಿಸ್ ನೀಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹಜ್‌ ಯಾತ್ರೆಯ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ – ಪಾಕ್‌ಗೆ ಸೌದಿ ಎಚ್ಚರಿಕೆ

ಒಟ್ಟಿನಲ್ಲಿ ಇಎಸ್‌ಐ ಆಸ್ಪತ್ರೆ ಅಧೀಕ್ಷಕ ನಜ್ಮಿ ನಡೆ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಹಬ್ಬದ ಆಚರಣೆ ಮಾಡಿದ ಸಿಬ್ಬಂದಿಗೆ ಧರ್ಮ ಸಂಕಟ ಎದುರಾಗಿದೆ. ಈ ನೋಟಿಸ್ ಮತ್ಯಾವ ರೂಪಪಡೆದುಕೊಳ್ಳಲಿದೆ ಎಂಬುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ತಿರುಮಲನ ಸನ್ನಿಧಿಗೆ 2 ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು

TAGGED:ESI HospitalGanesha idolHindu Organisationhubballiಇಎಸ್‍ಐ ಆಸ್ಪತ್ರೆಗಣೇಶ ಪ್ರತಿಷ್ಠಾಪನೆಹಿಂದೂ ಸಂಘಟನೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

Raichuru Drain Death
Districts

ಅರೆಬರೆ ಕಾಮಗಾರಿ ಮಾಡಿದ್ದ ಚರಂಡಿಯಲ್ಲಿ ಬಿದ್ದು ವೃದ್ಧೆ ಸಾವು

Public TV
By Public TV
4 minutes ago
Chikkaballapura Congress Leader Threat To Municipal Commissioner
Bengaluru City

ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ- ಕ್ರಮಕ್ಕೆ ಜೆಡಿಎಸ್ ಒತ್ತಾಯ

Public TV
By Public TV
5 minutes ago
HD Revanna
Districts

ಈ ಗಿರಾಕಿ ಎಲ್ಲಿದ್ದ? ಇವ್ನಿಗೆ ನಾನು ಹೆದರುತ್ತೀನಾ – ಶಿವಲಿಂಗೇಗೌಡ ವಿರುದ್ಧ ರೇವಣ್ಣ ಕೆಂಡಾಮಂಡಲ

Public TV
By Public TV
14 minutes ago
Ramalinga Reddy 1
Bengaluru City

ಬಿಜೆಪಿಯವರು ನಕಲಿ ರಾಮನ ಭಕ್ತರು, ನಾವು ನಿಜವಾದ ಭಕ್ತರು: ರಾಮಲಿಂಗಾರೆಡ್ಡಿ

Public TV
By Public TV
26 minutes ago
SharanPrakash Patil
Bengaluru City

ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಮಾಡಲು ಸಿಎಂ-ಡಿಸಿಎಂ ಜತೆ ರಾಹುಲ್ ಚರ್ಚೆ; ಶರಣು ಪ್ರಕಾಶ್ ಪಾಟೀಲ್

Public TV
By Public TV
47 minutes ago
Ashok Pattan
Bengaluru City

ಸಿಎಂ-ಡಿಸಿಎಂರನ್ನ ಮಾತುಕತೆಗೆ ರಾಹುಲ್ ಗಾಂಧಿ ದೆಹಲಿಗೆ ಕರೆದಿದ್ದಾರೆ: ಅಶೋಕ್ ಪಟ್ಟಣ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?