Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ

Bengaluru City

ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ

Public TV
Last updated: November 25, 2022 7:45 pm
Public TV
Share
3 Min Read
bommai 1
SHARE

ಬೆಂಗಳೂರು: ಮಹಿಳಾ ಆಯೋಗದಿಂದ (Women’s Commission) ಸ್ವೀಕಾರವಾದ ದೂರುಗಳನ್ನು 7-8 ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ (Investigation) ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಸಿಎಂ ಶುಕ್ರವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ ಜಾಗೃತಿ ಮೂಡಿಸುವುದು ಅಗತ್ಯ. ಅನ್ಯಾಯ ಆಗುವ ಮೂಲದಿಂದಲೇ ಅರಿವು ಮೂಡಿಸಬೇಕು ಎಂದರು.

BASAVARAJ BOMMAI 2

ಮಹಿಳಾ ಆಯೋಗಕ್ಕೆ ಇನ್ನಷ್ಟು ಅಧಿಕಾರದ ಜೊತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಸಿದ್ಧವಿದೆ. ಇದಲ್ಲದೆ ಕಲ್ಯಾಣ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ. ಮಹಿಳೆಯರ ಪೌಷ್ಟಿಕತೆ ಹೆಚ್ಚಿಸಲು ಕ್ರಮ ವಹಿಸಿದೆ. ಕೆಲಸ ಮಾಡುವ ಗರ್ಭಿಣಿಯರಿಗೆ ವಿಶೇಷ ಸ್ಥಳ ನಿಗದಿ, 5 ಪ್ರಮುಖ ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳೆಯರಿಗೆ ಹಾಸ್ಟೆಲ್, ಐಐಎಂ ತರಬೇತಿ, ಎಲಿವೆಟ್ ಯೋಜನೆಯಡಿ ಸ್ಟಾರ್ಟ್ಅಪ್‌ಗೆ ಅವಕಾಶ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀ ಸಾಮಾರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

5 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗ ನೀಡುವ ಕೆಲಸ ಮಾಡಲಾಗುತ್ತಿದೆ. 7,500 ಸ್ತ್ರೀಶಕ್ತಿ ಸಂಘಗಳಿವೆ. ಅಮೃತ ಯೋಜನೆಯಡಿ 1 ಲಕ್ಷ ರೂ. ನೀಡಿ ಸ್ವಯಂ ಉದ್ಯೋಗ ನೀಡಲಾಗಿದೆ. ಮಹಿಳೆಯರಿಗೆ ವಿಶೇಷ ಕ್ಲಾಸ್ ರೂಮ್ ನಿರ್ಮಾಣ, ಆಶಾ ಕಾರ್ಯಕರ್ತೆಯರು ಹಾಗೂ ಅಡುಗೆ ಮಾಡುವವರ ಗೌರವಧನ ಹೆಚ್ಚಳ ಮಾಡಿದ್ದೇವೆ. ಎನ್.ಪಿ.ಎಸ್ ಯೋಜನೆ ಮರುಪ್ರಾರಂಭವಾಗಿದೆ. ಈ ವರ್ಷ 4,000 ಹೊಸ ಅಂಗನವಾಡಿ ನಿರ್ಮಾಣವಾಗುತ್ತಿದೆ. ಮಹಿಳೆಯರಿಗೆ ಎಲ್ಲಾ ಹಂತದ ನೆರವು ಒದಗಿಸಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾಗುತ್ತದೆ ಎಂದರು.

 

Basavaraj Bommai

ನಿರ್ಭಯ ಅಡಿ ಬೆಂಗಳೂರಿನಲ್ಲಿ 7,500 ಕೃತಕ ಬುದ್ಧಿಮತ್ತೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ರಾತ್ರಿ ವೇಳೆ ಕೆಲಸ ಮುಗಿಸಿ ಬರುವ ಮಹಿಳೆಯರಿಗೆ ಇದು ಸುರಕ್ಷತೆ ಒದಗಿಸುತ್ತದೆ. ಮಹಿಳಾ ಪೊಲೀಸ್ ಒಳಗೊಂಡ ಪಿಂಕ್ ಹೊಯ್ಸಳ ವಾಹನಗಳು ಮಹಿಳೆಯರನ್ನು ರಕ್ಷಿಸಲು ಸಂಚರಿಸುತ್ತವೆ. ಅಲ್ಪಾವಧಿ ಸ್ವಯಂ ರಕ್ಷಣಾ ತರಬೇತಿಯನ್ನು ಶಾಲಾ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ನೀಡಲಾಗುತ್ತಿದೆ ಎಂದರು.

ಉಳಿತಾಯ ಸಂಸ್ಕೃತಿ:
ವಿಶ್ವದಲ್ಲಿ ಎಲ್ಲಾ ರಾಷ್ಟ್ರಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಆದರೆ ಭಾರತದಲ್ಲಿ ಮಹಿಳೆಯರ ಉಳಿತಾಯ ಸಂಸ್ಕೃತಿಯಿಂದಾಗಿ, ಅಡುಗೆ ಮನೆಯಲ್ಲಿ ಜೀರಿಗೆ ಡಬ್ಬದಲ್ಲಿ ಇಡುವ ಹಣವೇ ದೇಶದ ಆರ್ಥಿಕತೆ ರಕ್ಷಣೆ ಮಾಡಿದೆ. ತಾಯಿ ಗರ್ಭದಿಂದ ಭೂತಾಯಿ ಗರ್ಭದವರೆಗೆ ಇರುವ ನಮ್ಮ ಬದುಕಿನಲ್ಲಿ ಮಹಿಳೆಯರಿಗೆ ಗೌರವ, ಸಮಾನತೆ ನೀಡಬೇಕು. ದೇಶ ಕಟ್ಟಲು ತಾಯಂದಿರನ್ನು ಸಶಕ್ತ ಮಾಡುವುದು ಬಹಳ ಮುಖ್ಯ. ಈ ಅರಿವಿನಿಂದ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

BASAVARAJ BOMMAI 10

ಮಹಿಳೆಯರ ಗೌರವ ಪುನಃ ಸ್ಥಾಪನೆಯಾಗಬೇಕು:
ಒಂದೆಡೆ ಕಾನೂನು ರಚನೆ, ಶಿಸ್ತಿನ ಕ್ರಮ ತೆಗೆದುಕೊಳ್ಳುವುದು, ಆಯೋಗ ಕೆಲಸ ಮಾಡುವುದು ಇಂದಿನ ದಿನಗಳಲ್ಲಿ ಅತ್ಯಂತ ಅವಶ್ಯಕ. ಅದರ ಜೊತೆಗೆ ಸಮಾಜದಲ್ಲಿ ಮೌಲ್ಯಗಳ ಪರಿವರ್ತನೆ ಆಗುವುದು ಅಗತ್ಯವಿದೆ. ಸಮಾಜದಲ್ಲಿ ಮೊದಲು ಮಹಿಳೆಯರಿಗೆ ಸಿಗುತ್ತಿದ್ದ ಗೌರವ ಪುನಃ ಸ್ಥಾಪನೆಯಾಗಬೇಕು. ಇದಾದರೆ ಸಮಾನತೆ ಅವಕಾಶಗಳು ತೆರೆದುಕೊಳ್ಳುತ್ತವೆ. ಈ ಕೆಲಸವನ್ನು ಆಯೋಗ ಮಾಡಬೇಕು ಎಂದರು.

ಕಠಿಣ ಕಾನೂನು ಕ್ರಮ:
ಎಲ್ಲಾ ಸಮಾಜದಲ್ಲಿ ವ್ಯಾಗ್ರ ಚಿಂತನೆಗಳಿರುವ ವ್ಯಕ್ತಿಗಳಿದ್ದಾರೆ. ಅವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಅಮಾನವೀಯವಾಗಿ ಮಹಿಳೆಯರ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ ಅತ್ಯಾಚಾರ ಆಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ರಾಕ್ಷಸ ಕೃತ್ಯ. ಉಗ್ರ ಕಾನೂನು ಇದ್ದರೂ, ಶಿಕ್ಷೆಗೆ ಒಳಪಟ್ಟಿದ್ದರೂ, ಆದರೆ ಆ ಕಾನೂನು ಅಪರಾಧಗಳನ್ನು ತಡೆಹಿಡಿಯಲು ಸಫಲವಾಗಿಲ್ಲ. ಸಾಮಾಜಿಕ ಚಿಂತನೆ ಬದಲಾವಣೆಯ ಜೊತೆಗೆ ಕಠಿಣ ಕಾನೂನು ಕ್ರಮ ಕೂಡ ಅವಶ್ಯಕ. ಮಹಿಳಾ ಆಯೋಗಕ್ಕೆ ಶಕ್ತಿ ತುಂಬುವ ಕೆಲಸ ಆಗಬೇಕು ಎಂದರು. ಇದನ್ನೂ ಓದಿ: ಹಿರಿಯ ನಟ ದ್ವಾರಕೀಶ್‌ಗೆ ಗೌರವ ಡಾಕ್ಟರೇಟ್

Basavaraj Bommai 9

ಜನ್ಮಪೂರ್ವದ ಸಂಬಂಧ:
ಈ ಭೂಮಿ ಮೇಲೆ ಜನ್ಮ ಪೂರ್ವದ ಸಂಬಂಧ ತಾಯಿಯೊಂದಿಗೆ ಇರುತ್ತದೆ. ತಾಯಿತನ ಎಲ್ಲಕ್ಕಿಂತ ಶ್ರೇಷ್ಠ. ತಾಯಿಯ ಪ್ರೀತಿ ಮಿತಿ ಇಲ್ಲದ್ದು, ನೂರಕ್ಕೆ ನೂರು ಶುದ್ಧವಾಗಿರುತ್ತದೆ. ಹೀಗಾಗಿ ಹೆಣ್ಣು ಮಕ್ಕಳು ಶ್ರೇಷ್ಠ ಎಂದರು.

ಸಮಾನತೆ:
ಹೆಣ್ಣಿಗೆ ನಿಸರ್ಗ, ಪುರಾಣ, ಇತಿಹಾಸ ದೊಡ್ಡ ಸ್ಥಾನ ಕೊಟ್ಟಿದ್ದರೂ ಸಮಾಜ ಕೊಡುತ್ತಿಲ್ಲ. ಸಮಾಜ ಯಾವಾಗ ಮಹಿಳೆಯರಿಗೆ ಗೌರವ, ಸಮಾನತೆ ಕೊಡುತ್ತದೆಯೋ ಅಂದು ಮಹಿಳೆಗೆ ಸಮಾನ ಅವಕಾಶಗಳು ದೊರೆಯುತ್ತವೆ ಎಂದರು.

Basavaraj Bommai 7

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಶಾಸಕಿ ರೂಪಾಲಿ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಂಜುಳಾ ಹಾಗೂ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: ಗುತ್ತಿಗೆದಾರರ ಸಂಘದಲ್ಲಿ ಒಳ ರಾಜಕೀಯ – ಇಕ್ಕಟ್ಟಿನಲ್ಲಿ ಇಂಧನ ಇಲಾಖೆ

Live Tv
[brid partner=56869869 player=32851 video=960834 autoplay=true]

TAGGED:Basavaraj BommaiinvestigationwomenWomen's commissionತನಿಖೆಬಸವರಾಜ ಬೊಮ್ಮಾಯಿಮಹಿಳಾ ಆಯೋಗಮಹಿಳೆಯರು
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
14 minutes ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
25 minutes ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
31 minutes ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
1 hour ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
2 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?