Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಂತಕರ ಮುಂದಿನ ಟಾರ್ಗೆಟ್ ನಾನು, ನಂತ್ರ ಭಗವಾನ್: ನಿಡುಮಾಮಿಡಿ ಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಂತಕರ ಮುಂದಿನ ಟಾರ್ಗೆಟ್ ನಾನು, ನಂತ್ರ ಭಗವಾನ್: ನಿಡುಮಾಮಿಡಿ ಶ್ರೀ

Bengaluru City

ಹಂತಕರ ಮುಂದಿನ ಟಾರ್ಗೆಟ್ ನಾನು, ನಂತ್ರ ಭಗವಾನ್: ನಿಡುಮಾಮಿಡಿ ಶ್ರೀ

Public TV
Last updated: September 17, 2017 4:09 pm
Public TV
Share
3 Min Read
NIDUMAMIDI
SHARE

ಬೆಂಗಳೂರು: ಹಂತಕರು ಒಟ್ಟು ಐವರು ವಿಚಾರವಂತರ ಹತ್ಯೆಯ ಗುರಿ ಇಟ್ಟುಕೊಂಡಿದ್ದು, ಅದರಲ್ಲಿ ಕಲ್ಬುರ್ಗಿ ಹಾಗೂ ಗೌರಿ ಹತ್ಯೆ ಆಗಿದೆ. ಈಗ ಅವರ ಮುಂದಿನ ಹಿಟ್ ಲಿಸ್ಟ್‍ನಲ್ಲಿ ನಾನು ಇರಬಹುದು ಮುಂದೆ ಭಗವಾನ್ ಇರಬಹುದು ಎಂದು ನಿಡುಮಾಮಿಡಿ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಗೌರಿ ಲಂಕೇಶ್ ಅವರಿಗೆ ಪರಿಯಾರ್ ಪ್ರಶಸ್ತಿ ಸಮಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೌರಿ ಹತ್ಯೆಯನ್ನು ಸಂಭ್ರಮಿಸುವವರನ್ನು ನೋಡಿದಾಗಲೇ ಹಂತಕರು ಯಾರು ಅನ್ನೋದು ತಿಳಿಯುತ್ತದೆ. ಕಲ್ಬುರ್ಗಿ ಅವರದ್ದು ಧಾರ್ಮಿಕ ಹತ್ಯೆ ಹಾಗೂ ಗೌರಿ ಅವರದ್ದು ರಾಜಕೀಯ ಹತ್ಯೆ. ಮುಂದೆ ನನ್ನನ್ನೇ ಟಾರ್ಗೆಟ್ ಮಾಡಲಾಗಿದೆ ಅನ್ನೋದು ನನಗೆ ಗೊತ್ತಿದೆ. ನನಗೆ ಸಾಕಷ್ಟು ಜನ ಹೇಳಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.

ಅನಂತಮೂರ್ತಿಯವರ ಪುಸ್ತಕದ ಒಂದು ಮಾತನ್ನು ಕಲ್ಬುರ್ಗಿ ಅವರು ಸಭೆಯಲ್ಲಿ ಉಲ್ಲೇಖ ಮಾಡಿದ್ದರು. ಅದೇ ಅವರ ಹತ್ಯೆಗೆ ಕಾರಣವಾಯಿತು. ಕಲ್ಬುರ್ಗಿ ಮತ್ತು ಗೌರಿಯ ಹಂತಕರು ಹಿಂದು ಭಯೋತ್ಪಾದಕರಾಗಿದ್ದಾರೆ. ರಾಘವೇಶ್ವರ ಶ್ರೀ ವಿರುದ್ಧ ತನಿಖೆ ನಡೆಯುತ್ತಿದೆ ಹಾಗೂ ಎಲ್ಲಾ ಆಯಾಮದಿಂದಲೂ ತನಿಖೆ ನಡೆಯುತ್ತಿದೆ. ಅಷ್ಟಕ್ಕೆ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸೋದು ಸರಿಯಿಲ್ಲ ಎಂದು ನಿಡುಮಾಮಿಡಿ ಸ್ವಾಮೀಜಿ ಹೇಳಿದರು.

ವಿಚಾರವಾದಿಗಳ ವೇದಿಕೆಯಲ್ಲಿ ಗೌರಿ ಹಂತಕರನ್ನು ಹಿಡಿಯಲು ರಾಜ್ಯ ಸರ್ಕಾರಕ್ಕೆ ಡೆಡ್‍ಲೈನ್ ಕೊಟ್ಟು ಮುಂದಿನ ವಿಜಯದಶಮಿಯೊಳಗೆ ಹಂತಕರನ್ನು ಹಿಡಿಯಬೇಕೆಂದು ಆಗ್ರಹಿಸಿದೆ. ಹಂತಕರನ್ನು ಹಿಡಿಯದೆ ಇದ್ದರೆ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಒಪ್ಪಿಕೊಂಡು ರಾಜ್ಯ ಜನರ ಮುಂದೆ ಕ್ಷಮೆ ಯಾಚಿಸಬೇಕು ಎಂದು ಸ್ವಾಮೀಜಿ ತಿಳಿಸಿದರು.

ಗೌರಿ ಮತ್ತು ಕಲ್ಬುರ್ಗಿ ಹಂತಕರು ಯಾರು ಎನ್ನುವುದಕ್ಕೆ ನಿಡುಮಾಮಿಡಿ ಶ್ರೀ ಪ್ರಣವಾನಂದ ಸ್ವಾಮೀಜಿ ಕಡೆ ಬೊಟ್ಟು ಮಾಡಿದ್ದಾರೆ. ಕಲ್ಬುರ್ಗಿ ಹತ್ಯೆಗೆ ಹದಿನೈದು ದಿನದ ಮುಂಚೆ ಪ್ರಣವಾನಂದ ಸ್ವಾಮೀಜಿ ಸುದ್ದಿಗೋಷ್ಟಿ ಕರೆದು ಐದು ಜನರ ಪ್ರಾಣ ತೆಗೆಯುತ್ತೇನೆ ಎಂದಿದ್ದರು. ಈಗ ಇಬ್ಬರ ಕೊಲೆಯಾಗಿದೆ. ಮುಂದೆ ನಾನು ಮತ್ತು ಭಗವಾನ್ ಲಿಸ್ಟ್ ನಲ್ಲಿದ್ದೇವೆ ಎಂದು ಸ್ವಾಮಿಜಿ ಹೇಳಿದರು.

ಪ್ರಣವಾನಂದ ಕೊಲೆಯ ಪ್ರಾಯೋಜಕರು ಅವರನ್ನು ವಿಚಾರಣೆ ಮಾಡಿದರೆ ಹಂತಕರು ಗೊತ್ತಾಗಲಿದ್ದಾರೆ. ಐವರು ವಿಚಾರವಾದಿಗಳನ್ನು ಹತ್ಯೆ ಮಾಡೋದಾಗಿ ಹೇಳಿದರೂ ಯಾಕೆ ಸರ್ಕಾರ ಕ್ರಮ ಕೈಗೊಂಡಿಲ್ಲ ಆಗಲೇ ಎಲ್ಲರ ಲಿಸ್ಟ್ ರೆಡಿಯಾಗಿದೆ ಹಂತಕರು ಕರ್ನಾಟಕದವರು. ಆದರೆ ಬಾಡಿಗೆ ಕೊಲೆಗಾರರನ್ನು ತಂದಿರಬಹುದು. ಗೌರಿ ಹತ್ಯೆಗೆ ನ್ಯಾಯ ಸಿಗಲಿದೆ ಅನ್ನೋ ನಂಬಿಕೆ ನನಗಿಲ್ಲ ಎಂದರು.

ವರ್ಷಕ್ಕೊಂದು ವಿಚಾರವಾದಿಗಳು ಸಾಯುತ್ತಾರೆ. ಇಂದು ಗೌರಿ ನಾಳೆ ನಾನು ನಾಡಿದ್ದು ಭಗವಾನ್ ಅದರಾಚೆ ಅಗ್ನಿ ಶ್ರೀಧರ್. ಬಿಜೆಪಿಗೆ ಮೋದಿ ಸರ್ಕಾರಕ್ಕೆ ಹಿಂಸೆ ಅನಿವಾರ್ಯ. ಹಿಂಸೆಯ ಮೂಲಕವೇ ರಾಜಕೀಯ ಪ್ರಾಬಲ್ಯ ಸ್ಥಾಪಿಸಲು ಹೊರಟಿದ್ದಾರೆ. ಹಿಂದುತ್ವದ ಬಗ್ಗೆ ಮಾತಾನಾಡಿದವರನ್ನು ಬಿಡಲ್ಲ ಅವರನ್ನು ಕೊಲ್ಲುತ್ತೇವೆ ಅನ್ನೋ ಸಂದೇಶವನ್ನು ಇವರಿಬ್ಬರನ್ನು ಹತ್ಯೆ ಮಾಡುವುದರ ಮೂಲಕ ನೀಡಿದ್ದಾರೆ ಎಂದು ಆರೋಪಿಸಿದರು.

ಭಾರತದಲ್ಲಿ ವಧಾ ಸಂಸ್ಕೃತಿ ವಿಜೃಂಭಿಸುತ್ತಿದೆ. ಸನಾತನ ಧರ್ಮ ಪುನಶ್ಚೇತನಗೊಂಡಾಗೆಲ್ಲ ವಧಾ ಸಂಸ್ಕೃತಿ ಹತ್ಯೆ ಮಾಡುವ ಸಂಸ್ಕೃತಿ ಬರುತ್ತದೆ. ಹಿಂದೆ “ಭಟ್ಟ” ಅನ್ನೋ ಹೆಸರಿನ ವ್ಯಕ್ತಿಯಿಂದ ಬೆದರಿಕೆ ಬಂದಿತ್ತು. ಈ ಬಗ್ಗೆ ಮಠದಿಂದ ಠಾಣೆಗೂ ದೂರು ಕೊಡಲಾಗಿದೆ ಹಾಗೂ ಹಿಂದುತ್ವದ ಬಗ್ಗೆ ಮಾತಾನಾಡೋ ನಿನ್ನನ್ನು ಉಳಿಸಲ್ಲ, ಖಾವಿ ಕಳಚಿ ಓಡಿಸುತ್ತೇವೆ ಅಂತಾ ಬೆದರಿಕೆ ಹಾಕಿದ್ದಾರೆ. ಮಠಕ್ಕೆ ಬನ್ನಿ ಮಾತಾನಾಡೋಣ ಅಂತಾ ಹೇಳಿದೆ ಆದರೆ ಯಾರು ಬಂದಿಲ್ಲ. ಕೆಲದಿನದ ಹಿಂದೆ ನಡೆದ ಘಟನೆ ಇದು ಈ ಬಗ್ಗೆ ದೂರು ನೀಡಲಾಗಿದೆ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು.

ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಎಲ್ಲಾ ಧರ್ಮದ ದೇವರ ಭಾವಚಿತ್ರ ತೆಗೆಯಬೇಕು. ಕಚೇರಿಗಳಲ್ಲಿ ಧಾರ್ಮಿಕ ಆಚರಣೆ ಸಂಪ್ರದಾಯಗಳನ್ನು ಅನುಸರಿಸೋದನ್ನು ನಿಷೇಧಿಸಬೇಕೆಂದು ಸರ್ಕಾರಕ್ಕೆ ವಿಚಾರವಾದಿಗಳ ವೇದಿಕೆ ಒತ್ತಾಯ ಮಾಡಿದೆ.

TAGGED:bengaluruGauri LankeshkalburgiKillersNidumamidi swamijiPublic TVಕಲ್ಬುರ್ಗಿಗೌರಿ ಲಂಕೇಶ್ನಿಡುಮಾಮಿಡಿ ಸ್ವಾಮಿಜಿಪಬ್ಲಿಕ್ ಟಿವಿಬೆಂಗಳೂರುಹಂತಕರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
1 minute ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
5 minutes ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
21 minutes ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
49 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
50 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?