Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Karnataka

30 ದೇಶಗಳ ಅನಿವಾಸಿ ಕನ್ನಡಿಗರಿಂದ ಇಂದು ‘ಎನ್ಆರ್‌ಐ ಅಪೀಲ್ ಡೇ’ ಟ್ವಿಟ್ಟರ್ ಅಭಿಯಾನ

Public TV
Last updated: January 2, 2022 2:39 pm
Public TV
Share
3 Min Read
nri appeal day
SHARE

ಬೆಂಗಳೂರು: ತಮಗಿರುವ ಸಮಸ್ಯೆಗಳು ಹಾಗೂ ಬಹುಕಾಲದಿಂದ ಈಡೇರದ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು 30ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ ಅನಿವಾಸಿಗಳು ಪ್ರತಿನಿಧಿಸುವ ನೂರಕ್ಕೂ ಹೆಚ್ಚಿನ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಮತ್ತೊಮ್ಮೆ ಟ್ವಿಟರ್ ಮತ್ತು ಇ-ಮೇಲ್ ಅಭಿಯಾನ ನಡೆಸಲು ಅನಿವಾಸಿ ಕನ್ನಡಿಗರು ಮುಂದಾಗಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ (ಭಾರತೀಯ ಕಾಲಮಾನ) ಟ್ವಿಟರ್ ಅಭಿಯಾನಕ್ಕೆ ಏಕಕಾಲದಲ್ಲಿ ಚಾಲನೆ ನೀಡಿ ಸರಣಿ ಮನವಿ ಮತ್ತು ಬೇಡಿಕೆಗಳನ್ನು ಇಡಲಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್‌ ಸ್ಫೋಟ – ಬೆಂಗಳೂರಿನಲ್ಲಿ ಲಾಕ್‌ಡೌನ್‌ ಸುಳಿವು ನೀಡಿದ ಸಚಿವ ಆರ್‌.ಅಶೋಕ್‌

BASAVARJ BOMMAI 7

ತಮ್ಮ ಕುಟುಂಬದ ಜವಾಬ್ದಾರಿ ಹೊತ್ತು ಉದ್ಯೋಗ ಹರಸಿ ವಿದೇಶಕ್ಕೆ ತೆರಳಿದರೂ ಹುಟ್ಟೂರು ಮತ್ತು ರಾಜ್ಯದ ಆಗುಹೋಗುಗಳ ಬಗ್ಗೆ ಕಾಳಜಿ ತೋರಿಸುವವರು ಅನಿವಾಸಿ ಕನ್ನಡಿಗರು. ರಾಜ್ಯದಲ್ಲಿ ನೆರೆ, ಬರ ಸೇರಿದಂತೆ ಯಾವುದೇ ಸಂಕಷ್ಟ ಬಂದೊದಗಿದರೂ ತತ್‌ಕ್ಷಣ ಸಹಾಯಹಸ್ತ ಚಾಚುವವರೇ ಲಕ್ಷಾಂತರ ಅನಿವಾಸಿಗಳು. ಆದರೆ ಆಶ್ಚರ್ಯವೆಂದರೆ ಈ ಅನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುವವರೇ ಇಲ್ಲ. ಬಹುಕಾಲದಿಂದ ಅವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಾ ಇದ್ದರೂ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಕೊರೊನಾ ಸಂಕಷ್ಟ ಸಂದರ್ಭದಲ್ಲಂತೂ ಇವರ ಗೋಳನ್ನು ಕೇಳುವವರೇ ಇರಲಿಲ್ಲ. ಇದೇ ಕಾರಣಕ್ಕೆ ಇದೀಗ ಅನಿವಾಸಿಗಳು ಒಗ್ಗಟ್ಟಾಗಿ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಲೆಂದೇ ಒಂದು ದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ. ಇಂದು ‘ಎನ್ಆರ್‌ಐ ಅಪೀಲ್ ಡೇ’ಯಾಗಿ ‌ಆಚರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನದ ಮೂಲಕ ವಿಶಿಷ್ಟ ರೀತಿಯಲ್ಲಿ ಕರ್ನಾಟಕ ಸರ್ಕಾರವನ್ನು ಎಚ್ಚರಿಸಲಿದ್ದಾರೆ. ಈ ಬಾರಿಯಾದರೂ ತಮ್ಮನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು, ಮಂತ್ರಿಗಳು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಮುಖ್ಯಮಂತ್ರಿಗಳೇ ಅನಿವಾಸಿ ಕನ್ನಡಿಗರ ಬೇಡಿಕೆಯನ್ನು ಈಡೇರಿಸಿ ????#NRIappealDay @CMofKarnataka @BSBommai @cskarnataka@MBPatil @siddaramaiah @DKShivakumar @GaneshKarnik @NiraniMurugesh @drashwathcn @publictvnews @tv9kannada @varthabharati pic.twitter.com/HMfllqyCRQ

— Kannadigas Federation (@IKFederation) January 2, 2022

2021ರ ಜನವರಿ‌ 2ರಂದು ಮೊದಲ ಬಾರಿ ‘ಎನ್ಆರ್‌ಐ ಅಪೀಲ್ ಡೇ’ ಯಶಸ್ವೀ ಟ್ವಿಟ್ಟರ್ ಅಭಿಯಾನ ನಡೆಸಿ ಮುಖ್ಯಮಂತ್ರಿ ಯಡಿಯೂರಪ್ಪನವರ ಗಮನಸೆಳೆದಿದ್ದ ಅನಿವಾಸಿ ಕನ್ನಡಿಗರಿಗೆ ‘ಖಂಡಿತಾ ನಿಮ್ಮ ಬೇಡಿಕೆ ಈಡೇರಿಸುವೆ’ ಎಂಬ ಭರವಸೆ ಸಿಕ್ಕಿದ್ದರೂ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿಕೊಡಲು ಮತ್ತೊಮ್ಮೆ ಟ್ವಿಟ್ಟರ್ ಅಭಿಯಾನ ನಡೆಸಲೇಬೇಕಾದ ಅನಿವಾರ್ಯತೆ ಇದೆ. ಇದನ್ನೂ ಓದಿ: ದೇವರೊಂದಿಗೆ ದೇವರಾದ ಪುನೀತ್ ರಾಜ್‌ಕುಮಾರ್

BS Yediyurappa

13 ವರ್ಷಗಳ ಹಿಂದೆ ರಾಜ್ಯ ಸರ್ಕಾರ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಕ್ಷೇಮಾಭಿವೃಧ್ಧಿಯಗಾಗಿ ಸ್ಥಾಪಿತವಾದ ಸಮಿತಿಯೇ ಕನ್ನಡಿಗರ ಅನಿವಾಸಿ ಭಾರತೀಯ ಸಮಿತಿ. ಸಿಎಂ ಅವರ ನೇರ ನಿಯಂತ್ರಣಕ್ಕೆ ಒಳಪಡುವ ಈ ಸಮಿತಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬಂದರೂ ಮುಖ್ಯಮಂತ್ರಿಗಳೇ ಇದರ ಅಧ್ಯಕ್ಷರು. ಮುಖ್ಯಮಂತ್ರಿಗಳಿಗೆ ಸರ್ಕಾರದ ಇತರ ಗಂಭೀರ ಜವಾಬ್ದಾರಿಗಳಿರುವ ಕಾರಣ ಉಪಾಧ್ಯಕ್ಷರೇ ಈ ಸಮಿತಿಗೆ ಬೆನ್ನೆಲುಬು. ಆದರೆ ಕಳೆದ ನಾಲ್ಕು ವರ್ಷಗಳಿಂದ ಈ ಸಮಿತಿಗೆ ಉಪಾಧ್ಯಕ್ಷರೇ ಇಲ್ಲದೇ ಅನಾಥವಾಗಿದೆ.

Will bring this to the attention of the government. https://t.co/ywydB8wFK3

— M B Patil (@MBPatil) January 2, 2022

ಅನಿವಾಸಿ ಕನ್ನಡಿಗರಿಗೆ ಅದರಲ್ಲೂ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವ ಅನಿವಾಸಿಗಳಿಗೆ ವಿಮಾನ ನಿಲ್ದಾಣದಲ್ಲಿ ವಿನಾಕಾರಣ ಕಿರುಕುಳ ನೀಡುವ ಹಲವು ದೂರುಗಳು ನಿರಂತರವಾಗಿ ಬರುತ್ತಿವೆ. ಅಧಿಕಾರಿಗಳು ತಪಾಸಣೆಯ ಹೆಸರಿನಲ್ಲಿ ಪ್ರಯಾಣಿಕರ ಲಗೇಜು ಮಾತ್ರವಲ್ಲದೇ ದಿನಬಳಕೆಯ ವಸ್ತುಗಳನ್ನೂ ವಶಪಡಿಸಿಕೊಂಡು ವಿಚಾರಣೆ ನಡೆಸುವುದು ಕಂಡುಬರುತ್ತಿದೆ. ಈ ರೀತಿ ಬೇಜವಾಬ್ದಾರಿತನದಿಂದ ವರ್ತಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ವಿನಾಕಾರಣ ಕಿರುಕುಳ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಅನಿವಾಸಿ ಕನ್ನಡಿಗರ ಬೇಡಿಕೆ.

Sir,

This has been a long pending genuine demand and needs your immediate positive action. There is an urgent need to address this issue.@BSBommai @NRIFORUMGOK #NRIappealday https://t.co/U8j4dBIKEA

— Capt Ganesh Karnik ???????? (@GaneshKarnik) January 1, 2022

ಅನಿವಾಸಿ ಕನ್ನಡಿಗರ ಗುರುತಿನ ಚೀಟಿಯಾಗಿ ಜಾರಿಗೆ ಬಂದ ‘Norka Card’ ವಿತರಣೆಯಾಗದೆ ಉಳಿದಿದ್ದು, ಪ್ರತಿಯೊಬ್ಬ ಅನಿವಾಸಿ ಕನ್ನಡಿಗರಿಗೂ ವಿತರಣೆಯಾಗಿ ಉಪಯುಕ್ತವಾಗಿರಬೇಕು. ಅದೇ ರೀತಿ ಅನಿವಾಸಿ ಕನ್ನಡಿಗರು ಹೆಚ್ಚಿನ ಸಂದ್ರತೆಯಲ್ಲಿರುವ ದೇಶದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು. ಆ ಮೂಲಕ ಕನ್ನಡ ಪಾಠ ಶಾಲೆ, ಕನ್ನಡ ಕಲೆ ಸಂಸ್ಕೃತಿಯ ನಿರಂತರ ಪಸರುವಿಕೆಗೆ ನಾಂದಿಯಾಗಬೇಕು. ಈ ರೀತಿಯ ಹಲವು ಬೇಡಿಕೆಗಳನ್ನು ಈಡೇರಿಸಲು ವಿಶ್ವದಾದ್ಯಂತ ಅನಿವಾಸಿ ಕನ್ನಡಿಗರಿಂದ ಏಕಕಾಲದಲ್ಲಿ ಅಭಿಯಾನ ನಡೆಯಲಿದೆ.

TAGGED:karnatakaNRI Appeal Daytwitter campaignಎನ್‍ಆರ್‍ಐ ಅಪೀಲ್ ಡೇಕರ್ನಾಟಕಟ್ವಿಟರ್‌ ಅಭಿಯಾನ
Share This Article
Facebook Whatsapp Whatsapp Telegram

Cinema Updates

Yash
ʻರಾಕಿ ಭಾಯ್‌ʼ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; KGF-3 ಬಗ್ಗೆ ಬಿಗ್‌ ಹಿಂಟ್‌ ಕೊಟ್ಟ ಹೊಂಬಾಳೆ ಫಿಲ್ಮ್ಸ್
2 hours ago
Sanjay Dutt 4
ನಮ್ಮ ದೇಶದ ತಾಕತ್ ಏನಂತ ಪ್ರಪಂಚಕ್ಕೆ ಗೊತ್ತಾಗಿದೆ: ಸಂಜಯ್ ದತ್
15 hours ago
narendra modi with sudeep
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
18 hours ago
ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
2 days ago

You Might Also Like

Shehbaz Sharif
Latest

ದೇಹದಲ್ಲಿ ಒಂದು ತೊಟ್ಟು ರಕ್ತ ಇರೋವರೆಗೂ ಯುದ್ಧ ಮಾಡ್ತೀನಿ – ಮೈ ಪರಚಿಕೊಂಡ ಪಾಕ್‌ ಪ್ರಧಾನಿ

Public TV
By Public TV
60 minutes ago
Baramulla Family 1
Latest

ಪಾಕ್‌ನ ಶೆಲ್‌ ತುಣುಕು ಅಮ್ಮನ ಮುಖವನ್ನೇ ಸೀಳಿತು – ʻಪಬ್ಲಿಕ್‌ ಟಿವಿʼ ಬಳಿ ಬಾರಾಮುಲ್ಲಾ ಜನರ ಅಳಲು

Public TV
By Public TV
2 hours ago
Subbanna Ayyappan
Crime

ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು – ಕಾವೇರಿ ನದಿಯಲ್ಲಿ ಶವ ಪತ್ತೆ

Public TV
By Public TV
2 hours ago
Cyber Crime
Chikkamagaluru

ಡಿಜಿಟಲ್ ಅರೆಸ್ಟ್ – 37 ಲಕ್ಷ ಕಳೆದುಕೊಂಡ ಮಾಜಿ ನೌಕರ!

Public TV
By Public TV
2 hours ago
ajit doval wang yi
Latest

ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸುತ್ತದೆ: ಅಜಿತ್‌ ದೋವಲ್‌ಗೆ ಫೋನ್‌ ಕರೆಯಲ್ಲಿ ಚೀನಾ ಸ್ಪಷ್ಟನೆ

Public TV
By Public TV
9 hours ago
nagrota indian army
Latest

ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?