ಚಿಕ್ಕಮಗಳೂರು: ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಎನ್ಆರ್ ಪುರ ಠಾಣೆಯ ಪೊಲೀಸ್ ಜೀಪಿಗೆ ಕೊಪ್ಪದ ಪೊಲೀಸರು ದಂಡ ವಿಧಿಸಿದ್ದಾರೆ.
ಎನ್ಆರ್ ಪುರ ಠಾಣೆಯ ಸಿಪಿಐ ಜೀಪು ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಗಸ್ತಿನಲ್ಲಿದ್ದ ಪೊಲೀಸರು ವಾಹನ ಲಾಕ್ ಮಾಡಿದ್ದರು. ಬಳಿಕ ಪಿಎಸ್ಐ 500 ರೂ. ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯ ಕೊಲೆ – ಕಿಲಾಡಿ ಸೊಸೆ, ಪ್ರಿಯಕರ ಅರೆಸ್ಟ್
500 ದಂಡ ಕಟ್ಟಿ ಚಾಲಕ ವಾಹನವನ್ನು ಬಿಡಿಸಿಕೊಂಡು ಹೋಗಿದ್ದಾರೆ. ಕೊಪ್ಪ ಪಿಎಸ್ಐ ಬಸವರಾಜ್ ಕಾರ್ಯಕ್ಕೆ ಚಿಕ್ಕಮಗಳೂರು ಜನ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಪಿಎಸ್ಐ ಸಾರಿದ್ದಾರೆ ಎಂದು ಕೊಂಡಾಡಿದ್ದಾರೆ. ಇದನ್ನೂ ಓದಿ: ಎನ್.ಆರ್ಪುರ | ಸ್ಮಶಾನವಿಲ್ಲದೇ ಭದ್ರಾ ನದಿಯ ನಡುಗಡ್ಡೆಯಲ್ಲಿ ಶವಸಂಸ್ಕಾರ – 20 ವರ್ಷಗಳಿಂದ ಸಮಸ್ಯೆಗೆ ಸಿಗದ ಮುಕ್ತಿ