ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆ್ಯಂಟಿ- ಹೈಜಾಕ್‌ ಅಣುಕು ಪ್ರದರ್ಶನ

Public TV
2 Min Read
NSG conducts extensive anti hijack drill at Bengaluru airport 1

ಬೆಂಗಳೂರು: ಭದ್ರತೆ ಮತ್ತು ತುರ್ತು ಪ್ರತಿಕ್ರಿಯೆಯ ಪ್ರೋಟೋಕಾಲ್‌ನ ಭಾಗವಾಗಿ ರಾಷ್ಟ್ರೀಯ ಭದ್ರತಾ ಪಡೆ (NSG) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಆ್ಯಂಟಿ-ಹೈಜಾಕ್ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು.

ಜೂನ್ 24, ಸೋಮವಾರ ರಾತ್ರಿ 8 ಗಂಟೆಗೆ ಆರಂಭಗೊಂಡು, ಮಧ್ಯರಾತ್ರಿ ಮುಕ್ತಾಯಗೊಂಡ ಈ ಅಣುಕು ಪ್ರದರ್ಶನವು ನೈಜ-ಸಮಯದ ಸಂವಹನ ವ್ಯವಸ್ಥೆ, ಸುಧಾರಿತ ಕಣ್ಗಾವಲು ಉಪಕರಣಗಳು ಮತ್ತು ಅತ್ಯಾಧುನಿಕ ಭಯೋತ್ಪಾದನಾ-ವಿರೋಧಿ ಕ್ರಮಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವಲ್ಲಿ ಎನ್ಎಸ್‌ಜಿಯ ಸಮರ್ಪಣೆಯನ್ನು ಉದಾಹರಿಸುತ್ತದೆ.

ಈ ಅಣುಕು ಪ್ರದರ್ಶನವು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ನಿರ್ಣಾಯಕ ನಿಲುವು ಹೊಂದಿರುತ್ತದೆ. ವಿಮಾನ ನಿಲ್ದಾಣದ ಯುದ್ಧತಂತ್ರದ ಸಿದ್ಧತೆಯನ್ನು ನಿರ್ಣಯಿಸಲು ಮತ್ತು ಸುಧಾರಿಸಲು ವಿನ್ಯಾಸಗೊಳಿಸಲಾದ ವಿವಿಧ ಸನ್ನಿವೇಶಗಳನ್ನು ಒಳಗೊಂಡಿತ್ತು.

NSG conducts extensive anti hijack drill at Bengaluru airport 2

ಅಪಹರಿಸಿದ ವಿಮಾನ ಏರ್‌ಪೋರ್ಟ್‌ಗೆ ಬಂದು ಇಳಿದ ಕೃತಕ ಸನ್ನಿವೇಶವನ್ನು ನಿರ್ಮಾಣ ಮಾಡಲಾಗಿತ್ತು. ಇದು ಏರೋಡ್ರೋಮ್ ಎಮರ್ಜೆನ್ಸಿ ಮ್ಯಾನೇಜ್‌ಮೆಂಟ್ ಕಮಿಟಿ (ಎಇಎಂಸಿ) ಅನ್ನು ತಕ್ಷಣವೇ ಸಕ್ರಿಯಗೊಳಿಸಿತು. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಭಾರತ ಸರ್ಕಾರ, ಸಿಐಎಸ್‌ಎಫ್, ಗ್ರೌಂಡ್ ಹ್ಯಾಂಡ್ಲಿಂಗ್ ಏಜೆನ್ಸಿಗಳು, ಸಿಟಿ ಆಸ್ಪತ್ರೆಗಳು, ಭಾರತೀಯ ವಾಯುಪಡೆ (ಐಎಎಫ್), ಪೊಲೀಸ್, ಟ್ರಾಫಿಕ್ ಪೊಲೀಸ್, ಏರ್ ಟ್ರಾಫಿಕ್ ಸರ್ವೀಸಸ್ ಕಂಟ್ರೋಲ್ (ಎಟಿಸಿ), ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಸ್ಥಳೀಯ ಸಮುದಾಯಗಳು, ನಾಗರಿಕ ಸಂಘ ಸಂಸ್ಥೆಗಳು, ವಾಯುಯಾನ ಸಂಸ್ಥೆಗಳು ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳು ಸೇರಿದಂತೆ ಪ್ರಮುಖ ಪಾಲುದಾರರ ಸಹಯೋಗದಲ್ಲಿ ಈ ಅಣುಕು ಪ್ರದರ್ಶನವನ್ನು ಆಯೋಜಿಸಲಾಗಿತ್ತು.  ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ತರಬೇತಿ ಪಡೆದ ಸಮಾಲೋಚಕರು, ವಿಮಾನ ಆಗಮನದ ನಂತರ ಹೈಜಾಕರ್ಸ್‌ನೊಂದಿಗೆ ಸಂಧಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಹಿಸುವ ಗುರಿ ಹೊಂದಿರುತ್ತಾರೆ. ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ರಾಷ್ಟ್ರೀಯ ಭದ್ರತಾ ಪಡೆಯು (NSG) ಮಧ್ಯಪ್ರವೇಶಿಸಲು ಮುಂದಾಗುತ್ತದೆ. ಬೆದರಿಕೆಯ ಮುಂಜಾಗರುಕತೆ ಮತ್ತು ಪರಿಣಾಮಕಾರಿ ನಿಯಂತ್ರಣದಲ್ಲಿ ಕಡಿಮೆ ಹಾನಿ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಪ್ರಮುಖವಾಗಿ ಇರಿಸಲಾಗುತ್ತದೆ.

NSG conducts extensive anti hijack drill at Bengaluru airport 3

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಅವರು ಅಣುಕು ಪ್ರದರ್ಶನದ ಮಹತ್ವವನ್ನು ಉಲ್ಲೇಖಿಸುತ್ತಾ, “ಈ ನೈಜ-ಸಮಯದ ಸಿಮ್ಯುಲೇಟೆಡ್ ಆಂಟಿ-ಹೈಜಾಕ್ ಅಣುಕು ಪ್ರದರ್ಶನ ನಡೆಸುವುದು ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಇದು ನಮ್ಮ ಪ್ರತಿಕ್ರಿಯೆ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪರೀಕ್ಷಿಸಲು, ಅಂತರ್‌-ಇಲಾಖೆಯ ಸಮನ್ವಯವನ್ನು ಹೆಚ್ಚಿಸಲು ಮತ್ತು ನೈಜ-ಜೀವನದ ಸನ್ನಿವೇಶಗಳಿಗೆ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಅಣುಕು ಪ್ರದರ್ಶನವನ್ನು ಸಾಧ್ಯವಾಗಿಸಿದ ಎಲ್ಲಾ ಆಂತರಿಕ ಮತ್ತು ಬಾಹ್ಯ ವ್ಯಕ್ತಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಅವರ ಸಾಮೂಹಿಕ ಪ್ರಯತ್ನ ನಮ್ಮ ಸಾಮರ್ಥ್ಯ ಮತ್ತು ಕಾರ್ಯಾಚರಣೆಯನ್ನು ಮೌಲ್ಯೀಕರಿಸುತ್ತದೆ. ಈ ನಿರಂತರ ಸುಧಾರಣೆ ಮತ್ತು ಬಿಕ್ಕಟ್ಟಿನ ಸಿದ್ಧತೆಗೆ ನಮ್ಮ ಬದ್ಧತೆ ತೋರುತ್ತದೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಇಂತಹ ಪೂರ್ವಭಾವಿ ಉಪಕ್ರಮಗಳು ಅಗತ್ಯವಾಗಿದೆ ಎಂದರು.

ಇಂಟರ್ನ್ಯಾಷನಲ್ ಸಿವಿಲ್ ಏವಿಯೇಷನ್ ಆರ್ಗನೈಸೇಶನ್ ಮತ್ತು ಡಿಜಿಸಿಎ ನಿಯಮಗಳಿಗೆ ಅನುಸಾರವಾಗಿ ಬೆಂಗಳೂರು ಏರ್‌ಪೋರ್ಟ್‌ನ ಭದ್ರತಾ ಕ್ರಮಗಳು ಮತ್ತು ತುರ್ತು ಪ್ರತಿಕ್ರಿಯೆ ಸಾಮರ್ಥ್ಯವನ್ನು ಹೆಚ್ಚಿಸಲು ನಡೆಯುತ್ತಿರುವ ಬದ್ಧತೆಯೊಂದಿಗೆ ಈ ಅಣುಕು ಪ್ರದರ್ಶನ ಹೊಂದಿಕೆಯಾಗುತ್ತಿದೆ. ಯಾವುದೇ ಪರಿಸ್ಥಿತಿ ಅಥವಾ ಸನ್ನಿವೇಶದಲ್ಲಿ ಎಲ್ಲಾ ವಿಮಾನ ನಿಲ್ದಾಣ ಬಳಕೆದಾರರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಸುರಕ್ಷಿತ ವಾತಾವರಣವನ್ನು ಒದಗಿಸುವ ಗುರಿಯನ್ನು ಹೊಂದಿದೆ.

 

Share This Article