ಇಸ್ಲಾಂಬಾದ್: ಕಳ್ಳರಿಗೆ ಅಧಿಕಾರರ ಚುಕ್ಕಾಣಿಯನ್ನು ನೀಡುವುದಕ್ಕಿಂತ ಪರಮಾಣು ಬಾಂಬ್ ಹಾಕುವುದು ಉತ್ತಮ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಪಾಕಿಸ್ತಾನ ಹಾಗೂ ನೂತನ ಸರ್ಕಾರದ ಬಗ್ಗೆ ವಿಚಿತ್ರವಾದ ಹೇಳಿಕೆಯನ್ನು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ ಅಧ್ಯಕ್ಷರು ಕೂಡ ದೇಶವನ್ನು ಲೂಟಿ ಮಾಡುತ್ತಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದೇನೆ. ಇಂತಹವರಿಗೆ ಅಧಿಕಾರ ಹಸ್ತಾಂತರಿಸುವುದಕ್ಕಿಂತ ಪಾಕಿಸ್ತಾನಕ್ಕೆ ಪರಮಾಣು ಬಾಂಬ್ ಹಾಕುವುದು ಉತ್ತಮ ಎಂದು ಹೇಳಿದರು.
ಹಿಂದಿನ ಆಡಳಿತಗಾರರ ಭ್ರಷ್ಟಾಚಾರದ ಕಥೆಗಳನ್ನು ಹೇಳುವ ಪ್ರಬಲ ವ್ಯಕ್ತಿಗಳು ಇತರರ ವಿರುದ್ಧ ಆರೋಪಗಳನ್ನು ಮಾಡುವ ಬದಲಿಗೆ ತಮ್ಮ ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಚಿಂತಿಸಬೇಕು ಎಂದ ಅವರು, ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಳ್ಳರು ಪ್ರತಿಯೊಂದು ಸಂಸ್ಥೆ ನ್ಯಾಯಾಂಗ ವ್ಯವಸ್ಥೆಯನ್ನು ನಾಶ ಪಡಿಸುತ್ತಿದ್ದಾರೆ. ಈ ಬಗ್ಗೆ ಯಾವ ಅಧಿಕಾರಿಯೂ ಪ್ರಕರಣದ ತನಿಖೆ ಮಾಡಲಾಗುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಿಂದಿ ಅಥವಾ ಯಾವುದೋ ಭಾಷೆಯನ್ನು ಹೇರುವ ಪ್ರಶ್ನೆಯೇ ಇಲ್ಲ: TN ರಾಜ್ಯಪಾಲ ಆರ್.ಎನ್.ರವಿ
ಈ ಹಿಂದೆ ಪ್ರಧಾನಿ ಶೆಹಬಾಜ್ ಷರೀಫ್ ಮಾತನಾಡಿ, ಇಮ್ರಾನ್ ಖಾನ್ ಅವರು ಸರ್ಕಾರಿ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಭಾಷಣ ಮಾಡುವ ಮೂಲಕ ಪಾಕಿಸ್ತಾನದ ಜನರ ಮನಸ್ಸಿನಲ್ಲಿ ವಿಷವನ್ನು ಬಿತ್ತುತ್ತಿದ್ದಾರೆ. ಕಳ್ಳರು, ಡಕಾಯಿತರು ಎಂದು ಪದೇ ಪದೇ ಕರೆಯುವ ಮೂಲಕ ರಾಷ್ಟ್ರವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಕೃಷ್ಣಮೃಗ ಬೇಟೆಗಾರರಿಂದ 3 ಪೊಲೀಸರ ಹತ್ಯೆ – 1 ಕೋಟಿ ರೂ. ಪರಿಹಾರ ಫೋಷಿಸಿದ ಸಿಎಂ