ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಪ್ರತಿಕೃತಿಯನ್ನು ಮಾಡಿ ಕಿಡಿಗೇಡಿಗಳು ಅದನ್ನು ನೇಣು ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಗರದ ಫೋರ್ಟ್ ರಸ್ತೆಯ ಮಸೀದಿಯ ಬಳಿಯ ನಡುರಸ್ತೆಯಲ್ಲೇ ಎರಡು ಬದಿಯ ಕಟ್ಟಡಗಳಿಗೆ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇಣು ಹಾಕಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ನಡು ರಸ್ತೆಯಲ್ಲೇ ಪ್ರತಿಕೃತಿಗೆ ನೇಣು ಹಾಕಿದ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ನಿನ್ನೆ ತಡರಾತ್ರಿ ಅಪರಿಚಿತ ಕಿಡಿಗೇಡಿಗಳು ಈ ಕೃತ್ಯವನ್ನ ಎಸಗಿದ್ದಾರೆ. ಇದನ್ನೂ ಓದಿ: ಬೇರೆಯವರು ತಾಳಿಕಟ್ಟಿದವರ ಬಳಿ ಹೋಗಿ ಲವ್ ಲೆಟರ್ ಬರೆದರೆ ಆಗುತ್ತಾ : ಸಿಎಂ ಇಬ್ರಾಹಿಂ
ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲಿಸರು ಭೇಟಿ ನೀಡಿ ಹಗ್ಗ ಕಟ್ಟಿ ನೇತು ಹಾಕಿದ್ದ ಪ್ರತಿಕೃತಿ ತೆರವುಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಮಾರ್ಕೆಟ್ ಪೊಲೀಸರು ಸುತ್ತಲಿನ ಪ್ರದೇಶದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್
ಬೆಳಗಾವಿಯ ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.