Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶಕ್ಕಾಗಿ ಕುಟುಂಬದಿಂದ ದೂರವಿದ್ದೇವೆ: ನರ್ಸ್ ಸುಗಂಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ದೇಶಕ್ಕಾಗಿ ಕುಟುಂಬದಿಂದ ದೂರವಿದ್ದೇವೆ: ನರ್ಸ್ ಸುಗಂಧ

Belgaum

ದೇಶಕ್ಕಾಗಿ ಕುಟುಂಬದಿಂದ ದೂರವಿದ್ದೇವೆ: ನರ್ಸ್ ಸುಗಂಧ

Public TV
Last updated: April 19, 2020 6:08 pm
Public TV
Share
2 Min Read
blg nurse mother 1
SHARE

– ಮಗಳನ್ನು ನೋಡಿದ ತಕ್ಷಣ ಕಷ್ಟ ಮರೆತುಹೋಯ್ತು
– ಕೊರೊನಾ ಮುಕ್ತ ಭಾರತಕ್ಕೆ ಪಣ
– ದಯವಿಟ್ಟು ಪರಿಸ್ಥಿತಿಯನ್ನು ಅರಿತು ಮನೆಯಲ್ಲಿರಿ

ಬೆಳಗಾವಿ: 21 ದಿನಗಳ ಬಳಿಕ ಮಗಳನ್ನು ಸೇರಿದ ನರ್ಸ್ ಸುಗಂಧ ಅವರು ಪಬ್ಲಿಕ್ ಟಿವಿ ಜೊತೆ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಮಗಳನ್ನು ಬಿಟ್ಟಿರೋದು ಕಷ್ಟವಾಯ್ತು ಆದ್ರೆ ಕೊರೊನಾ ವಿರುದ್ಧ ಹೋರಾಡೋದು ನಮ್ಮ ಕರ್ತವ್ಯ, ದೇಶಕ್ಕಾಗಿ ಕುಟುಂಬದಿಂದ ವೈದ್ಯಕೀಯ ಸಿಬ್ಬಂದಿಯೆಲ್ಲಾ ದೂರವಿದ್ದೇವೆ ಎಂದು ಹೇಳಿದ್ದಾರೆ.

blg nurse mother 1 1

ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಗಂಧ ಅವರು, ಮಗಳನ್ನು ನೋಡಿದ ತಕ್ಷಣ ಪಟ್ಟ ಕಷ್ಟವೆಲ್ಲ ಮರೆತುಹೋಯ್ತು. ಕೊರೊನಾ ಡ್ಯೂಟಿಯಲ್ಲಿದ್ದಕ್ಕೆ ವೈದ್ಯರು ಹಾಗೂ ನರ್ಸ್‍ಗಳನ್ನು ಕ್ವಾರಂಟೈನಲ್ಲಿ ಇಟ್ಟಿದ್ದರು. ಈಗ ನಾವೆಲ್ಲಾ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಬಂದಿದ್ದೇವೆ. ಮನೆಯವರನ್ನು ನೋಡಿ ಖುಷಿಯಾಯ್ತು. ನನ್ನ ಮಗಳು ನನ್ನನ್ನು ಹೆಚ್ಚು ಹಚ್ಚಿಕೊಂಡಿದ್ದಾಳೆ. ಅವಳನ್ನು ಹೆಚ್ಚು ನಾನೇ ನೋಡಿಕೊಳ್ಳುತ್ತಿದ್ದೆ. ಇದೇ ಮೊದಲ ಬಾರಿಗೆ ನಾನು ಇಷ್ಟು ದಿನ ಅವಳನ್ನು ಬಿಟ್ಟು ದೂರ ಇದ್ದಿದ್ದು. ಅವಳು ಕೂಡ ನಾನಿಲ್ಲದೇ ಕಷ್ಟಪಟ್ಟಿದ್ದಾಳೆ. ನನ್ನಂತೆ ಸಾಕಷ್ಟು ಮಂದಿ ನರ್ಸಗಳಿಗೆ, ವೈದ್ಯಕೀಯ ಸಿಬ್ಬಂದಿಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ. ಆದರೆ ನಾವೆಲ್ಲಾ ಕೊರೊನಾ ಮುಕ್ತ ಭಾರತವನ್ನು ಮಾಡಲು ಪಣತೊಟ್ಟಿದ್ದೇವೆ. ಮಕ್ಕಳಿದ್ದಾರೆ ಎಂದು ಕರ್ತವ್ಯ ಬಿಟ್ಟು ಮನೆಯಲಿದ್ದರೆ ನಾವು ವೈದ್ಯಕೀಯ ಸಿಬ್ಬಂದಿ ಆಗಿರೋದಕ್ಕೆ ಅರ್ಥವಿಲ್ಲ. ದೇಶಕ್ಕಾಗಿ ವೈದ್ಯಕೀಯ ಸಿಬ್ಬಂದಿ ಹೋರಾಡುತ್ತಿದ್ದೇವೆ ಎಂದು ತಮ್ಮ ಕರ್ತವ್ಯ, ಜವಾಬ್ದಾರಿಗಳ ಬಗ್ಗೆ ಹೇಳಿದರು.

blg nurse daughter

ಕ್ವಾರಂಟೈನ್‍ನಲ್ಲಿದ್ದಾಗ ತುಂಬಾ ಕಷ್ಟವಾಗಿತ್ತು. ಅತ್ತ ಡ್ಯೂಟಿ ಕೂಡ ಮಾಡುವಂತಿರಲಿಲ್ಲ. ಇತ್ತ ಮನೆಗೂ ಹೋಗುವಂತಿರಲಿಲ್ಲ. ಮಗಳು, ಕುಟುಂಬದವರು ತುಂಬಾ ನೆನಪಾಗುತ್ತಿದ್ದರು. ಮಗಳು ನನಗೋಸ್ಕರ ಕಷ್ಟಪಡುತ್ತಿರೋದನ್ನು ತಿಳಿದು ಮನಸಲ್ಲೇ ತುಂಬಾ ದುಃಖವಾಗುತ್ತಿತ್ತು. 21 ದಿನಗಳು ಕಳೆದು ಮನೆಗೆ ಹೋಗಿ ಮಗಳನ್ನು ನೋಡಿದಾಗ ಮಾತನಾಡೋಕೆ ಆಗಲಿಲ್ಲ. ಅವಳನ್ನು ನೋಡಿದ ಖುಷಿಗೆ ಕಣ್ಣಿರು ಬಂದುಬಿಟ್ಟಿತು. ಅವಳನ್ನು ಎತ್ತಿಕೊಂಡು ಮುದ್ದಾಡಿದೆ ಎಂದು ಖುಷಿಯನ್ನು ಹಂಚಿಕೊಂಡರು.

blg nurse daughter 2

ದೇವರ ಕೃಪೆಯಿಂದ ಕ್ವಾರಂಟೈನಲ್ಲಿದ್ದ ಯಾವ ಸಿಬ್ಬಂದಿಗೂ ಸೋಂಕು ತಗುಲಿರಲಿಲ್ಲ. ಎಲ್ಲರಿಗೂ ತಪಾಸಣೆ ನಡೆಸಿ ವರದಿ ಬಂದ ಬಳಿಕವೇ ಎಲ್ಲರನ್ನು ಮನೆಗೆ ಕಳುಹಿಸಿದ್ದಾರೆ. ಮತ್ತೆ ಸೋಮವಾರದಿಂದ ನಾವು ಕರ್ತವ್ಯಕ್ಕೆ ತೆರೆಳಲಿದ್ದೇವೆ. ಸದ್ಯ ಜನರಲ್ ವಾರ್ಡಿಗೆ ಡ್ಯೂಟಿ ಹಾಕಿದ್ದಾರೆ. ರೊಟೆಷನಲ್ ಶಿಫ್ಟ್ ಹಾಕುತ್ತಿರುತ್ತಾರೆ. ಪದೇ ಪದೇ ಕೊರೊನಾ ವಾರ್ಡಿಗೆ ಡ್ಯೂಟಿ ಹಾಕಲ್ಲ. ಸಿಬ್ಬಂದಿ ಕಡಿಮೆ ಇದ್ದರೆ ಮಾತ್ರ ಹಾಕುತ್ತಾರೆ. ಆಗ ಮತ್ತೆ ನಮ್ಮನ್ನು ಕ್ವಾರಂಟೈನ್‍ನಲ್ಲಿ ಇಡುತ್ತಾರೆ ಎಂದು ಸುಗಂಧ ಅವರು ತಿಳಿಸಿದರು.

BLG Baby B

ವೈದ್ಯಕೀಯ ಸಿಬ್ಬಂದಿ, ಪೊಲೀಸರು ಕಷ್ಟಪಟ್ಟು ಕೊರೊನಾವನ್ನು ತಡೆಗಟ್ಟಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮದವರು ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಇಷ್ಟೆಲ್ಲಾ ಮಾಡುತ್ತಿದ್ದರೂ ಜನರು ಅರ್ಥ ಮಾಡಿಕೊಳ್ಳುತ್ತಿಲ್ಲ. ದಯವಿಟ್ಟು ಪರಿಸ್ಥಿತಿ ಅರ್ಥ ಮಾಡಿಕೊಂಡು ಮನೆಯಲ್ಲಿಯೇ ಇರಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಸರ್ಕಾರಿ ನಿಯಮವನ್ನು ಪಾಲಿಸಿ ಸೋಂಕಿನಿಂದ ದೂರವಿದ್ದು, ಸುರಕ್ಷಿತವಾಗಿರಿ ಎಂದು ಸುಗಂಧ ಅವರು ಮನವಿ ಮಾಡಿಕೊಂಡರು.

ಜನರು ಮಾಡುತ್ತಿರುವುದನ್ನು ನೋಡಿದರೆ ಸಿಟ್ಟು ಬರುತ್ತಿದೆ. ಪೊಲೀಸರು ಹೊಡೆಯುತ್ತಾರೆ ಎಂದು ಜನರು ದೂರುತ್ತಿದ್ದಾರೆ. ಇವರು ಹೊರಗೆ ಬಾರದೇ ಮನೆಯಲ್ಲಿದ್ದರೆ ಯಾರೂ ಅವರಿಗೆ ಹೊಡೆಯಲ್ಲ. ಅಗತ್ಯವಿದ್ದರೆ ಮಾತ್ರ ಹೊರಗೆ ಬನ್ನಿ, ಸುಮ್ಮನೆ ಬಂದು ಸೋಂಕಿಗೆ ತುತ್ತಾಗಬೇಡಿ. ನಿಮಗಾಗಿ ನಾವು ಕಷ್ಟಪಡುತ್ತಿದ್ದೇವೆ, ನಮಗಾಗಿ ನೀವು ಮನೆಯಲ್ಲಿ ಇರಿ. ಪೊಲೀಸರಿಗೆ, ವೈದ್ಯಕೀಯ ವರ್ಗಕ್ಕೆ ಸಹಕರಿಸಿ. ಈ ಕೊರೊನಾವನ್ನು ಜೊತೆಗೂಡಿ ನಿರ್ಮೂಲನೆ ಮಾಡೋಣ ಎಂದು ನರ್ಸ್ ಸುನಂದಾ ಕರೆ ನೀಡಿದ್ದಾರೆ.

TAGGED:belagaviCorona VirusdaughterMedical staffmothernursePublic TVQuarantineಕೊರೊನಾ ವೈರಸ್ಕ್ವಾರಂಟೈನ್ತಾಯಿನರ್ಸ್ಪಬ್ಲಿಕ್ ಟಿವಿಬೆಳಗಾವಿಮಗಳುವೈದ್ಯಕೀಯ ಸಿಬ್ಬಂದಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Ashok Pattan
Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
By Public TV
2 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
8 minutes ago
Accident 4
Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
By Public TV
16 minutes ago
Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
28 minutes ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
36 minutes ago
mumbai murder
Crime

ಮುಂಬೈನಲ್ಲಿ ತನ್ನ ಲವ್ವರ್‌ನ ಟೀನೇಜ್‌ ಗರ್ಲ್‌ಫ್ರೆಂಡ್‌ ಮುಖಕ್ಕೆ ಗುಂಡು ಹಾರಿಸಿ ಕೊಂದ ಯುವತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?