ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ವಿಜಯಪುರ (Vijayapura) ಜಿಲ್ಲೆಯ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.
- Advertisement 2
ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ(21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಬಿಎಲ್ಡಿಇ ನರ್ಸಿಂಗ್ ಕಾಲೇಜ್ನಲ್ಲಿ ಎರಡನೇ ವರ್ಷದ ನರ್ಸಿಂಗ್ ನಲ್ಲಿ ಓದುತ್ತಿದ್ದಳು. ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ. ಇದನ್ನೂ ಓದಿ: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ – 45ಕ್ಕೂ ಹೆಚ್ಚು ಕಡೆ NIA ದಾಳಿ
- Advertisement 3
- Advertisement 4
ಈ ವಿಚಾರದಿಂದ ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: CRPF ನನ್ನ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದೆ – ಸುಕೇಶ್ ಚಂದ್ರಶೇಖರ್ ಆರೋಪ