Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್: ಹುಬ್ಬಳ್ಳಿ ಸಾರಿಗೆ ವಿಭಾಗಕ್ಕೆ 23 ಕೋಟಿ ರೂ. ಆದಾಯ ನಷ್ಟ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಲಾಕ್‍ಡೌನ್: ಹುಬ್ಬಳ್ಳಿ ಸಾರಿಗೆ ವಿಭಾಗಕ್ಕೆ 23 ಕೋಟಿ ರೂ. ಆದಾಯ ನಷ್ಟ!

Corona

ಲಾಕ್‍ಡೌನ್: ಹುಬ್ಬಳ್ಳಿ ಸಾರಿಗೆ ವಿಭಾಗಕ್ಕೆ 23 ಕೋಟಿ ರೂ. ಆದಾಯ ನಷ್ಟ!

Public TV
Last updated: May 5, 2020 9:04 pm
Public TV
Share
2 Min Read
HBL KSRTC BUS copy
SHARE

ಹುಬ್ಬಳ್ಳಿ: ಲಾಕ್‍ಡೌನ್ ಪರಿಣಾಮವಾಗಿ ಸಾರ್ವಜನಿಕ ಸಾರಿಗೆ ಸ್ಥಗಿತಗೊಂಡಿದ್ದರಿಂದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ  ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಸಾರಿಗೆ ವಿಭಾಗಕ್ಕೆ ಅಂದಾಜು ರೂ. 23 ಕೋಟಿ ರೂ. ಆದಾಯ ನಷ್ಟ ಉಂಟಾಗಿದೆ.

ಹುಬ್ಬಳ್ಳಿ ವಿಭಾಗದಲ್ಲಿ ನಾಲ್ಕು ಬಸ್ ಘಟಕಗಳಲ್ಲಿ ಒಟ್ಟು 462 ಬಸ್ಸುಗಳು ಹಾಗೂ 2,173 ಸಿಬ್ಬಂದಿಗಳಿದ್ದಾರೆ. ವಿಭಾಗದ ಬಸ್ಸುಗಳು ಪ್ರತಿದಿನ 1.90 ಲಕ್ಷ ಕಿ.ಮೀ ಗಳಷ್ಟು ಕ್ರಮಿಸಿ ವಿವಿಧ ರಿಯಾಯಿತಿ ಪಾಸು ಪ್ರಯಾಣಿಕರು ಸೇರಿದಂತೆ 1.45 ಲಕ್ಷ ಸಾರ್ವಜನಿಕ ಪ್ರಯಾಣಿಕರು ಹಾಗೂ 45 ಸಾವಿರ ವಿದ್ಯಾರ್ಥಿಗಳಿಗೆ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸುವ ಮೂಲಕ ಸಂಸ್ಥೆಗೆ 45 ರಿಂದ 50 ಲಕ್ಷ ರೂ. ಸಾರಿಗೆ ಆದಾಯ ಸಂಗ್ರಹಣೆ ಆಗುತ್ತಿತ್ತು.

HBL KSRTC BUS a copy

ಮಾರ್ಚ್ ತಿಂಗಳಲ್ಲಿ 9ರ ವರೆಗೂ ಬಸ್ಸುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿರಲಿಲ್ಲ. ಆದ್ದರಿಂದ ಆದಾಯ ಸಂಗ್ರಹಣೆ ನಿರೀಕ್ಷೆಯಿತ್ತು. ನಂತರದಲ್ಲಿ ಕೊರೊನಾ ಮತ್ತು ಹೋಳಿ ಕಾರಣ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಕುಸಿಯತೊಡಗಿತು. ಪರಿಣಾಮ ಮಾರ್ಚ್ 22ರ ವರೆಗೂ ಬಸ್ಸುಗಳ ಸಂಖ್ಯೆಯೂ ಸಹ ದಿನದಿಂದ ದಿನಕ್ಕೆ ಕ್ಷೀಣಿಸತೊಡಗಿ 23 ರಿಂದ ಶೂನ್ಯಕ್ಕಿಳಿಯಿತು.

ಮಾರ್ಚ್ ತಿಂಗಳಿನಲ್ಲಿ ಭಾಗಶಃ ಬಸ್ ಕಾರ್ಯಾಚರಣೆಯಾಗಿದ್ದರಿಂದ ನಿರೀಕ್ಷಿತ ಸಾರಿಗೆ ಆದಾಯದಲ್ಲಿ 5.50 ಕೋಟಿ ರೂ. ಗಳಷ್ಟು ಕೊರತೆಯಾಗಿತ್ತು. ಆದರೆ ಏಪ್ರಿಲ್ ತಿಂಗಳಲ್ಲಿ ಯಾವುದೇ ಬಸ್ಸು ರಸ್ತೆಗಿಳಿಯದಿರುವುದರಿಂದಾಗಿ 17.50 ರೂ. ಕೋಟಿ ಆದಾಯ ನಷ್ಟ ಉಂಟಾಗಿರುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ್ ತಿಳಿಸಿದ್ದಾರೆ.

HBL BUS STOP

ಲಾಕ್‍ಡೌನ್ ಅವಧಿಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡಿದ್ದರೂ ಸಹ ಬಸ್ಸುಗಳ ತುರ್ತು ನಿರ್ವಹಣೆ ಮತ್ತು ಸಂಸ್ಥೆಯ ಆಸ್ತಿಗಳ ರಕ್ಷಣೆಯಂತಹ ಕಾರ್ಯಗಳನ್ನು ನಿರಂತರವಾಗಿ ನಿರ್ವಹಿಸಲೇಬೇಕಾಗಿತ್ತು. ವಿಭಾಗೀಯ ಕಚೇರಿ ಹಾಗೂ ಘಟಕ ಪೆಟ್ರೋಲಿಂಗ್ ತಂಡದ ಅಧಿಕಾರಿಗಳು ಪ್ರತಿದಿನ ಎಲ್ಲಾ ಘಟಕಗಳು ಮತ್ತು ಪ್ರಮುಖ ಬಸ್ ನಿಲ್ದಾಣಗಳ ಗಸ್ತು ತೆಗರದುಕೊಳ್ಳುತ್ತಿದ್ದಾರೆ. ಘಟಕದಲ್ಲೂ ತುರ್ತು ನಿರ್ವಹಣಾ ತಂಡದಲ್ಲಿ ಮೂರು ಪಾಳಿಯಲ್ಲಿ ಇಬ್ಬರು-ಮೂವರಂತೆ ಚಾಲಕರು, ತಾಂತ್ರಿಕ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ನಿರಂತರವಾಗಿ ಎಲ್ಲಾ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

hbl jagadish shettar 1

ಬಿಸಿಲಿನ ಅತಿಯಾದ ತಾಪಮಾನದಿಂದ ಆಕಸ್ಮಿಕ ಬೆಂಕಿ ಅನಾಹುತ, ಮತ್ತಿತರ ಅವಘಡಗಳಿಂದ ಬಸ್ಸುಗಳನ್ನು ಸಂರಕ್ಷಿಸಲು ನಿತ್ಯ ಜಲಾಭಿಷೇಕ ಮಾಡಲಾಗುತ್ತಿದೆ. ಅಲ್ಲಲ್ಲಿ ನೀರು ತುಂಬಿದ ಬ್ಯಾರಲ್ ಗಳು ಹಾಗೂ ಬಕೆಟ್‍ಗಳನ್ನಿಡಲಾಗಿದೆ. ಎಲ್ಲಾ ಘಟಕಗಳಲ್ಲಿ ಬೆಂಕಿ ನಂದಿಸುವ ಉಪಕರಣಗಳನ್ನು ಅಳವಡಿಸಿದ್ದಾರೆ. ಅಲ್ಲದೇ ಉಪಕರಣಗಳ ಸಮಯೋಚಿತ ಉಪಯೋಗದ ಬಗ್ಗೆ ಭದ್ರತಾ ಮತ್ತು ತಾಂತ್ರಿಕ ಸಿಬ್ಬಂದಿಗಳಿಗೆ ತರಬೇತಿಯನ್ನು ಸಹ ನೀಡಲಾಗಿದೆ. ಎಲ್ಲಾ ಬಸ್ಸುಗಳ ಬ್ಯಾಟರಿ ಬಾಕ್ಸ್ ಗಳನ್ನು ಸ್ವಚ್ಚಗೊಳಿಸಲಾಗಿದೆ. ಬಹುದಿನಗಳಿಂದ ಬಸ್ಸುಗಳು ನಿಂತಲ್ಲೇ ನಿಂತಿರುವುದರಿಂದ, ಬ್ಯಾಟರಿ ಡೆಡ್ ಆಗುವುದನ್ನು ತಡೆಯುವುದಕ್ಕಾಗಿ ದಿನ ಬಿಟ್ಟು ದಿನ ಇಂಜಿನ್ ಚಾಲೂ ಮಾಡಿ ಕೆಲ ಅಡಿಗಳವರೆಗೆ ಚಾಲನೆ ಮಾಡಿ ಸುಸ್ಥಿತಿಯಲ್ಲಿರುವ ಬಗ್ಗೆ ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಸಾರ್ವಜನಿಕ ಸಾರಿಗೆ ಪುನರಾರಂಭಿಸಲು ಸರ್ಕಾರದ ಆದೇಶ ಬಂದ ಕೂಡಲೆ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಎಲ್ಲಾ ಮುಂಜಾಗೃತಾ ಕ್ರಮಗಳೊಂದಿಗೆ ಬಸ್ಸುಗಳನ್ನು ರಸ್ತೆಗಿಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ.

TAGGED:hublikarnatakaksrtcLockdownPublic TransportTransport Revenueಕರ್ನಾಟಕಕೆಎಸ್‍ಆರ್‍ಟಿಸಿಲಾಕ್‍ಡೌನ್ವಾಯುವ್ಯ ಸಾರಿಗೆಸಾರಿಗೆ ಆದಾಯಸಾರ್ವಜನಿಕರ ಸಾರಿಗೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Yatnal
Bengaluru City

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

Public TV
By Public TV
22 minutes ago
Indian rupee
Latest

ಮಧ್ಯಪ್ರಾಚ್ಯ ಸಂಘರ್ಷ; ಡಾಲರ್‌ ಎದುರು ದಾಖಲೆಯ 92.52 ಕ್ಕೆ ಕುಸಿದ ರೂಪಾಯಿ ಮೌಲ್ಯ

Public TV
By Public TV
25 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
34 minutes ago
US and Israeli attacks in Tehran
Latest

US-Israel-Iran War: ಕಚ್ಚಾತೈಲ ಬೆಲೆ ಏರಿಕೆ – ಬ್ಯಾರಲ್‌ಗೆ 100 ಡಾಲರ್‌ ಗಡಿ ದಾಟಿದ ಬೆಲೆ

Public TV
By Public TV
56 minutes ago
Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
1 hour ago
RAILWAY TRACK
Bengaluru City

ಷೇರು ಮಾರುಕಟ್ಟೆಯಲ್ಲಿ ಲಾಸ್ – ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?