ಭುವನೇಶ್ವರ: ವಿದ್ಯಾರ್ಥಿನಿಯೊಬ್ಬಳು ಮುಖ್ಯೋಪಾಧ್ಯಾಯರ ಕಿರುಕುಳ ತಾಳಲಾರದೇ ಹಾಸ್ಟೆಲ್ ಕಟ್ಟಡದ ಮೇಲಿಂದ ಜಿಗಿದು ಸಾವನ್ನಪ್ಪಿದ ಘಟನೆ ಒಡಿಶಾದ ಸುಂದರ್ಗಢ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಶ್ಯಾಮ್ ಸುಂದರ್ ಪಟೇಲ್ ಬಂಧಿತ ಆರೋಪಿ. ಲೆಫ್ರಿಪಾಡಾ ಬ್ಲಾಕ್ನಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ 10ನೇ ತರಗತಿ ಓದುತ್ತಿದ್ದಳು. ಆದರೆ ಶ್ಯಾಮ್ ಸುಂದರ್ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ಮುಖ್ಯೋಪಾಧ್ಯಾಯರು ಕಿರುಕುಳ ನೀಡುತ್ತಿದ್ದಾರೆ ಎಂದು ತನ್ನ ಮನೆಯವರಿಗೆ ತಿಳಿಸಿದ್ದಳು.
ಮುಖ್ಯೋಪಾಧ್ಯಾಯರ ಲೈಂಗಿಕ ಕಿರುಕುಳ ತಾಳಲಾರದೇ ಮನನೊಂದ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಟೆರೇಸ್ನಿಂದ ಜಿಗಿದಿದ್ದಾಳೆ. ಪರಿಣಾಮವಾಗಿ ತಲೆಗೆ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಸುಂದರ್ಗಢ್ ಜಿಲ್ಲಾ ಪ್ರಧಾನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಕೇಸ್ – ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ಗೆ ಹೃದಯಾಘಾತ
ಆರಂಭದಲ್ಲಿ ಶಾಲೆಯ ಅಧಿಕಾರಿಗಳು ಘಟನೆಯನ್ನು ಅಪಘಾತ ಎಂದು ಹೇಳಿದ್ದಾರೆ. ಆದರೆ ಇದು ಲೈಂಗಿಕ ಕಿರುಕುಳದ ಪರಿಣಾಮವಾಗಿದೆ ಎಂದು ಎಸ್ಪಿ ಹೇಳಿದರು. ಜೊತೆಗೆ ಈ ಬಗ್ಗೆ ಶಾಲೆಯ ಹಲವಾರು ವಿದ್ಯಾರ್ಥಿಗಳು ಸಹ ಮುಖ್ಯೋಪಾಧ್ಯಾಯರಿಂದ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮುಖ್ಯೋಪಾಧ್ಯಾಯರು ಮತ್ತು ವಾರ್ಡನ್ ಅವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಕಾಂಗ್ರೆಸ್ ಹೊಂದಿದೆ: ರಾಹುಲ್ ಗಾಂಧಿ