ಭುವನೇಶ್ವರ: ಒಡಿಶಾ ರೈಲು ದುರಂತಕ್ಕೆ (Odisha Train Accident) ಕೋಮು ಬಣ್ಣ (Communal Colour) ನೀಡುವವರ ವಿರುದ್ಧ ಒಡಿಶಾ ಪೊಲೀಸರು ಭಾನುವಾರ ಎಚ್ಚರಿಕೆ ನೀಡಿದ್ದಾರೆ.
It has come to notice that some social media handles are mischievously giving communal colour to the tragic train accident at Balasore. This is highly unfortunate.
Investigation by the GRP, Odisha into the cause and all other aspects of the accident is going on.
— Odisha Police (@odisha_police) June 4, 2023
ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಬಾಲಸೋರ್ ಅಪಘಾತದ ಕುರಿತು ಪ್ರಚೋದನಕಾರಿ ಪೋಸ್ಟ್ಗಳನ್ನು ಹರಡುತ್ತಿದ್ದಾರೆ. ಇದು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ವಿಚಾರವಾಗಿದೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ. ಇದನ್ನೂ ಓದಿ: ರೈಲು ಡಿಕ್ಕಿಯಾದ ಶಬ್ದಕ್ಕೆ ಹೆದರಿ ಬಿಗಿಯಾಗಿ ಕಿಟಕಿ ಸರಳುಗಳನ್ನು ಹಿಡಿದು ಬಚಾವಾದೆ – ದುರಂತದಲ್ಲಿ ಬದುಕುಳಿದವನ ಮಾತು
ಪ್ರಾಥಮಿಕ ತನಿಖೆಯಲ್ಲಿ ಅಪಘಾತದ ಟ್ರ್ಯಾಕ್ ಮ್ಯಾನೇಜ್ಮೆಂಟ್ ಸಿಸ್ಟಮ್ನಲ್ಲಿನ ವೈಫಲ್ಯ ಇರುವುದು ಗೊತ್ತಾಗಿದೆ. ಇಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಮ್ (Railway Interlock System) ಸಮಸ್ಯೆ ಅವಘಡಕ್ಕೆ ಕಾರಣವಾಗಿರಬಹುದು. ತನಿಖೆ ಪೂರ್ಣಗೊಂಡ ಬಳಿಕ ಸ್ಪಷ್ಟವಾದ ಕಾರಣ ತಿಳಿದು ಬರಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ.
ಈ ಹಿಂದೆ ಇಂಟರ್ಲಾಕಿಂಗ್ ಸಮಸ್ಯೆಯ ವರದಿ ನೀಡಿಯೂ ಸಹ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯ ಮಾಡಿದ್ದಾರೆ. ರೈಲ್ವೇ ಹಳಿಗಳ ತಪಾಸಣೆಯಲ್ಲಿನ ಕೊರತೆ, ಆದ್ಯತೆಯ ಕಾರ್ಯಗಳಿಗೆ ಮೀಸಲಾದ ರೈಲ್ವೆ ನಿಧಿಯನ್ನು ಬಳಸಿಲ್ಲ. ಈ ಕಾರಣಗಳು ಅವಘಡಕ್ಕೆ ಕಾರಣವಾಗಿರುವ ಸಾಧ್ಯತೆಗಳಿದೆ ಎಂಬ ಆರೋಪಗಳು ಕೇಳಿಬಂದಿವೆ. ಶುಕ್ರವಾರ ಸಂಭವಿಸಿದ್ದ ದುರಂತದಲ್ಲಿ 275 ಜನ ಸಾವಿಗೀಡಾಗಿದ್ದರು. 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದನ್ನೂ ಓದಿ: ಇಂಟರ್ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್