ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದ ಬಗ್ಗೆ ಇದೀಗ ‘ಪುಷ್ಪ’ (Pushpa) ನಟಿ ರಶ್ಮಿಕಾ ಮಂದಣ್ಣ (Rashmika Mandanna) ರಿಯಾಕ್ಟ್ ಮಾಡಿದ್ದಾರೆ. ಅಪಘಾತದಲ್ಲಿ 240ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಅವರ ನಿಧನದ ಬಗ್ಗೆ ರಶ್ಮಿಕಾ ಸಂತಾಪ ಸೂಚಿಸಿದ್ದಾರೆ.
ಚೆನ್ನೈ-ಕೊರೊಮಂಡೆಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ (Odisha Train Tragedy) ಯಶವಂತಪುರ ಪ್ಯಾಸೆಂಜರ್ ರೈಲು ಹಾಗೂ ಸರಕು ಸಾಗಾಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಇದನ್ನೂ ಓದಿ:ಒಡಿಶಾದಲ್ಲಿ ಭೀಕರ ರೈಲು ದುರಂತ: ಯಶ್, ಸುಮಲತಾ ಸೇರಿದಂತೆ ಹಲವರ ಸಂತಾಪ
ಇದೀಗ ರಶ್ಮಿಕಾ ಮಂದಣ್ಣ ಸಹ ಈ ಕುರಿತು ಟ್ವೀಟ್ ಮಾಡಿದ್ದು, ಒಡಿಶಾ ರೈಲು ದುರಂತದ ಸುದ್ದಿ ತಿಳಿದು ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ನಿಧನ ಹೊಂದಿದವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದೇನೆ ಎಂದು ನಟಿ ಬರೆದುಕೊಂಡಿದ್ದಾರೆ.