ಯುವಕನ ಮರ್ಮಾಂಗ ಕತ್ತರಿಸಿದ ಮಹಿಳೆ ಪ್ರಕರಣಕ್ಕೆ ಟ್ವಿಸ್ಟ್

Public TV
1 Min Read
ODISHA TWIST

ಭುವನೇಶ್ವರ್: ಒಡಿಶಾದ ಕೆಯೊಂಜ್ಹಾರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಯುವಕನ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ.

ಯುವಕನ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಡೌಗಾನ್ ಗ್ರಾಮದ 24 ವರ್ಷದ ಕಮಲ ಪತ್ರ ಎಂಬ ಮಹಿಳೆಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಂಡಿದ್ದೇವು. ಅಲ್ಲದೇ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಘಟನೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಜೇಮ್ಸ್ ಟೊಪ್ಪೊ ಮಾಹಿತಿ ನೀಡಿದ್ದಾರೆ.

ODISHA TWIST 1

ಏನಿದು ಘಟನೆ?
24 ವರ್ಷದ ರಾಜೇಂದ್ರ ನಾಯಕ್ ಜರಾಬೆದ ಗ್ರಾಮದ ನಿವಾಸಿ. ಅಲ್ಲದೇ ಬಡೌಗಾನ್ ಗ್ರಾಮದ ಕಮಲ ಪತ್ರ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ರಾಜೇಂದ್ರ ಚೆನ್ನೈ ಮೂಲದ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಅಲ್ಲದೇ ಅಲ್ಲಿಯೂ ಸಹ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದ. ಊರಿಗೆ ಬಂದಾಗಲೆಲ್ಲಾ ಕಮಲಾಳ ಮನೆಗೆ ಭೇಟಿ ನೀಡುತ್ತಿದ್ದ.

ಕಳೆದ ಮಂಗಳವಾರ ಮತ್ತು ಬುಧವಾರವೂ ಕಮಲಾಳ ಮನೆಗೆ ತೆರಳಿದ್ದ. ಈ ವೇಳೆ ಚೆನ್ನೈ ಮಹಿಳೆಯೊಂದಿಗೆ ಮಾತನಾಡುತ್ತಿರುವಾಗ ಕಮಲಾ ಕೈಗೆ ಸಿಕ್ಕಿಬಿದ್ದಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಿಗೆದ್ದ ಕಮಲ ಮನೆಯಲ್ಲಿ ಮಲಗಿದ್ದ ರಾಜೇಂದ್ರನ ಮರ್ಮಾಂಗವನ್ನು ಕತ್ತರಿಸಿ ಸೇಡು ತೀರಿಸಿಕೊಂಡಿದ್ದಳು.

ODISHA TWIST 2

ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರನನ್ನು ಮೊದಲು ಹರಿಚಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ನಂತರ ಕೆಯೊಂಜ್ಹಾರ್ ಜಿಲ್ಲಾಸ್ಪತ್ರೆಗೆ ರವಾನಿಸಿದ್ದರು. ಆದರೆ  ಹೆಚ್ಚಿನ ಚಿಕಿತ್ಸೆಗಾಗಿ ಕಟಕ್‍ನ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಯುವಕನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *