ಮಾಹಿತಿ ಕೇಳಲು ಹೋದ ರೈತರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಅಧಿಕಾರಿ

Public TV
1 Min Read
glb officer awaz

ಕಲಬುರಗಿ: ಕೃಷಿ ಹೊಂಡದ ಮಾಹಿತಿ ಕೇಳಲು ಹೋದ ರೈತರಿಗೆ ಅಧಿಕಾರಿಯೋರ್ವ ಅವಾಚ್ಯ ಪದಗಳಿಂದ ನಿಂದಿಸಿದ ಘಟನೆ ಜಿಲ್ಲೆಯ ಅಫಜಲಪುರ್ ತಾಲೂಕಿನ ಕೃಷಿ ಇಲಾಖೆಯಲ್ಲಿ ನಡೆದಿದೆ.

ತಾಲೂಕಿನ ಚಿಂಚೋಳಿ ಗ್ರಾಮದ ರೈತರು ನಾವು ದಾಖಲಾತಿ ನೀಡಿದ್ದರೂ ನಮ್ಮ ಜಮೀನಿನಲ್ಲಿ ಮಾತ್ರ ಯಾಕೆ ಕೃಷಿ ಹೊಂಡ ನಿರ್ಮಿಸಿಲ್ಲ ಅಂತಾ ಅಧಿಕಾರಿಯನ್ನು ಪ್ರಶ್ನಿಸಿದ್ದಾರೆ. ಇದರಿಂದ ಕೊಪಗೊಂಡ ಅಧಿಕಾರಿ ನಿಮ್ಮ ಫಾರಂ ರಿಜಕ್ಟ್ ಮಾಡಿ ಹರಿದು ಹಾಕಿದ್ದೇನೆ. ಸಿಒಡಿ-ಸಿಬಿಐ ಅಲ್ಲದೇ ಯಾರಿಗಾದರೂ ಕರೆದುಕೊಂಡು ಬನ್ನಿ ನಾನು ನೋಡ್ಕೊತೀನಿ ಅಂತ ಅವಾಚ್ಯ ಶಬ್ಧಗಳಿಂದ ರೈತರಿಗೆ ನಿಂದಿಸಿದ್ದಾನೆ.

glb officer awaz 1

ಅಧಿಕಾರಿ ಅಸಭ್ಯ ವರ್ತನೆಗೆ ರೈತರು ಬೇಸತ್ತು ನಾವು ನಿಮ್ಮ ಮೇಲೆ ಯಾವ ತನಿಖೆಗೂ ಹಾಕಲ್ಲ, ಹಾಗೆ ಮಾಡೋದಾಗಿದ್ರೆ ನಿಮ್ಮ ಬಳಿ ಯಾಕೆ ಬರುತ್ತಿದ್ದೇವು? ಅಧಿಕಾರಿಗಳೇ ಹೀಗೆ ಹೇಳಿದರೆ ರೈತರು ಏನು ಮಾಡಬೇಕು ಎಂದು ಕೇಳಿದ್ದಾರೆ. ಅದಕ್ಕೆ ಕೋಪಗೊಂಡ ಅಧಿಕಾರಿ ಏನಾದರೂ ಮಾಡಿಕೊಳ್ಳಿ ನಾನು ಯಾರಿಗೂ ಹೆದರೋದಿಲ್ಲ ಎನ್ನುವ ರೀತಿ ಉತ್ತರ ನೀಡಿ ರೈತರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ.

ಈ ಘಟನೆಯನ್ನು ಸ್ಥಳದಲ್ಲಿದ್ದವರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಅಲ್ಲದೆ ಅಧಿಕಾರಿಯ ದರ್ಪದ ವರ್ತನೆ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *