ಬಾಲ್ಯ ವಿವಾಹ ತಡೆದ ಅಧಿಕಾರಿಗಳು: ನಾಪತ್ತೆಯಾದ್ರು ವಧು-ವರ

Public TV
1 Min Read
Child marriage

ಬೆಂಗಳೂರು: ಬಾಲ್ಯ ವಿವಾಹ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮದುವೆ ಮನೆ ಮೇಲೆ ದಾಳಿ ನಡೆಸಿ, ಮದುವೆ ತಡೆದ ಘಟನೆ ನೆಲಮಂಗಲ ತಾಲೂಕಿನ ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿದೆ.

ಹೊನ್ನಗಂಗಯ್ಯನ ಪಾಳ್ಯದ ಗಂಗಮ್ಮ ತಿಮ್ಮಯ್ಯ ಸಮುದಾಯ ಭವನದಲ್ಲಿ ಮದುವೆ ಆಯೋಜಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಲ್ಯಾಣ ಮಂಟಪಕ್ಕೆ ಬಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನೆಲಮಂಗಲ ತಾಲೂಕು ಆಡಳಿತ ಅಧಿಕಾರಿಗಳು ವಿವಾಹ ತಡೆದಿದ್ದಾರೆ. ಆದರೆ ಅಧಿಕಾರಿಗಳು ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ ಎನ್ನುವುದು ವಧು-ವರರಿಗೆ ಗೊತ್ತಾಗಿದ್ದು ಅವರಿಬ್ಬರು ಮದುವೆ ಮಂಟಪಕ್ಕೆ ಆಗಮಿಸದೇ ನಾಪತ್ತೆಯಾಗಿದ್ದಾರೆ.

ವಿವಾಹಕ್ಕೆ ಆಗಮಿಸಲಿದ್ದ ಸಂಬಂಧಿಕರಿಗಾಗಿ ತರತರಿಯ ಭೋಜನವನ್ನು ಸಿದ್ಧಪಡಿಸಲಾಗುತ್ತಿತ್ತು. ಹೀಗಾಗಿ ಅದನ್ನು ಕೂಡಾ ಅಧಿಕಾರಿಗಳು ತಡೆದರು. ಘಟನೆ ಸಂಬಂಧ ವಧು ಹಾಗೂ ವರನ ಪೋಷಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *