Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿ ಆತ್ಮಹತ್ಯೆ ಪ್ರಕರಣ; ನಾಗೇಂದ್ರ ರಾಜೀನಾಮೆ ನೀಡಲಿ, ಸಿಬಿಐ ತನಿಖೆಯಾಗಲಿ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಧಿಕಾರಿ ಆತ್ಮಹತ್ಯೆ ಪ್ರಕರಣ; ನಾಗೇಂದ್ರ ರಾಜೀನಾಮೆ ನೀಡಲಿ, ಸಿಬಿಐ ತನಿಖೆಯಾಗಲಿ: ಬೊಮ್ಮಾಯಿ

Bengaluru City

ಅಧಿಕಾರಿ ಆತ್ಮಹತ್ಯೆ ಪ್ರಕರಣ; ನಾಗೇಂದ್ರ ರಾಜೀನಾಮೆ ನೀಡಲಿ, ಸಿಬಿಐ ತನಿಖೆಯಾಗಲಿ: ಬೊಮ್ಮಾಯಿ

Public TV
Last updated: May 30, 2024 9:37 pm
Public TV
Share
4 Min Read
Basavaraj Bommai 1
SHARE

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಹೊಸಪೇಟೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ. ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಸಿಲಿನ ತಾಪಕ್ಕೆ ನಲುಗಿದ ಉತ್ತರದ ರಾಜ್ಯಗಳು- ರಾಜಸ್ಥಾನದಲ್ಲಿ 7 ಮಂದಿ ಸಾವು

ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಈಶ್ವರಪ್ಪನವರದ್ದೇನು ತಪ್ಪಿರಲಿಲ್ಲ. ಆದರೂ ಈಶ್ವರಪ್ಪನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಅವರ ವಿಚಾರದಲ್ಲಿ ವಿಪಕ್ಷ ನಾಯಕರಿದ್ದ ಸಿದ್ದರಾಮಯ್ಯನವರು ಮಾಡಿದ ರೋಷಾವೇಶ ಈಗ ಯಾಕೆ ಇಲ್ಲಾ? ಈಗ ಅವರೇ ಸಿಎಂ. ಅವರ ಸಚಿವ ಸಂಪುಟದ ಸಚಿವರ ವ್ಯಾಪ್ತಿಯ ವಾಲ್ಮೀಕಿ ನಿಗಮದಲ್ಲಿ ಹಣ ಲೂಟಿ ಆಗಿದೆ. 14 ಅಕೌಂಟ್‌ಗಳ ಮೂಲಕ ಹಗಲು ದರೋಡೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಡೆತ್‌ನೋಟ್‌ನಲ್ಲಿ ಎರಡು ಬಾರಿ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶ ಇತ್ತು ಎಂದು ಉಲ್ಲೇಖ ಮಾಡಿದ್ದಾರೆ. ಆದರೆ, ಇವರು ರಾಜೀನಾಮೆ ತೆಗೆದುಕೊಳ್ಳುವ ನೈತಿಕತೆ ಇಲ್ಲಾ. ಇದೊಂದು ಭ್ರಷ್ಟಾಚಾರ ಕೂಟದ ಸರ್ಕಾರ ಎಂದು ಆರೋಪಿಸಿದರು. ಇದನ್ನೂ ಓದಿ: 76 ದಿನ, 206 ಕಾರ್ಯಕ್ರಮ – ಪ್ರಚಾರ ಆರಂಭಿಸಿದ ಕನ್ಯಾಕುಮಾರಿಯಲ್ಲೇ ಮೋದಿ ಧ್ಯಾನ

ಈ ಪ್ರಕರಣಕ್ಕೂ, ಈಶ್ವರಪ್ಪನವರ ಪ್ರಕರಣಕ್ಕೂ ಹೊಂದಾಣಿಕೆ ಮಾಡುತ್ತಾರೆ. ನಾಚಿಕೆಯಾಗಬೇಕು ಇವರಿಗೆ. ಬಹುಕೋಟಿ ಹಗರಣ ಇದು. ಒಂದೇ ದಿನದಲ್ಲಿ 14 ಅಕೌಂಟ್‌ನಿಂದ ಹಣ ಮಾಯ ಆಗುತ್ತದೆ ಅಂದರೆ ಸಂಶಯಾಸ್ಪದ ಅಕೌಂಟ್‌ಗಳಿಗೆ ಹೋಗಿದೆ. ಇದು ಸಿಬಿಐಗೆ ಹೋಗುವಂತಹ ಮುಖ್ಯವಾದ ಕೇಸ್. ಒಂದು ಬ್ಯಾಂಕ್ ಮುಖಾಂತರ ಬೇರೆ ರಾಜ್ಯಕ್ಕೆ ಹಣ ಹೋಗಿದೆ. 10 ಕೋಟಿಗೆ ಹೆಚ್ಚು ಹಗರಣ ಅವ್ಯವಹಾರ ಆಗಿದ್ದರೆ, ಅದು ಸಿಬಿಐ ತನಿಖೆಗೆ ಹೋಗಬೇಕು ಅಂತ ಇದೆ. ಆದರೆ, ಇವರು ಯಾಕೆ ಸಿಬಿಐಗೆ ಕೊಡುತ್ತಿಲ್ಲ? ಸಿಐಡಿ ತನಿಖೆ ಮಾಡಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜೂನ್‌ 6ರ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು – ಡೆಡ್‌ಲೈನ್‌ ಕೊಟ್ಟ ಅಶೋಕ್

ಸಿಬಿಐ ತನಿಖೆಯಾಗಬೇಕು:
ಚುನಾವಣೆ ಸಮಯದಲ್ಲಿ ಹೈದರಾಬಾದ್‌ನ ಒಂದು ಸಹಕಾರಿ ಬ್ಯಾಂಕ್‌ಗೆ ಹಣ ವರ್ಗಾವಣೆ ಆಗುತ್ತದೆ ಅಂದರೆ ರಾಜಕೀಯದಿಂದ ಚುನಾವಣೆಗಾಗಿ ನಡೆದಿರುವ ದರೋಡೆ ಪ್ರಕರಣ ಇದು. ಸರ್ಕಾರ ಏನೇ ಸಮಾಜಾಯಿಷಿ ಕೊಟ್ಟರೂ ಕೂಡ, ಡಿಜಿಟಲ್ ಟ್ರಾಕ್, ಡಿಜಿಟಲ್ ಎವಿಡೆನ್ಸ್ ಇರುವ ಕಾರಣ ಸಿಐಡಿಯಿಂದ ತನಿಖೆಯಾಗುವ ಪ್ರಕರಣ ಅಲ್ಲ. ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು. ಸಿಬಿಐ ತನಿಖೆಗೆ ಒಳಪಡಿಸಿ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಹಣ ವಾಪಸ್ ಬರಬೇಕು. ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಹಣ ವಾಪಾಸ್ ತರಬಹುದು. ಚುನಾವಣೆಗೆ ಬಳಕೆಯಾಗಿದ್ದರೆ ಏನೂ ಮಾಡಲು ಆಗುವುದಿಲ್ಲ. ಈ ಪ್ರಕರಣದಲ್ಲಿ ಮನಿ ಟ್ರೈಲ್ ಫಾಲೋ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಕುಟುಂಬದ ಜೊತೆ ವಿಶ್ರಾಂತಿಗೆ ತೆರಳಿದ ಹೆಚ್‌ಡಿಕೆ

ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್‌ಟಿ ಸಮಾಜಕ್ಕೆ ವೋಟ್ ಬ್ಯಾಂಕ್ ಆಗಿ ಪರಿವರ್ತನೆ ಮಾಡುವುದು ಬಿಟ್ಟರೆ ಬೇರೆನೂ ಪ್ರಯೋಜನವಿಲ್ಲ. ಎಸ್‌ಸಿ, ಎಸ್‌ಟಿ ಸಮುದಾಯದವರು ಮೀಸಲಾತಿ ಹೋರಾಟ ಮಾಡಿದ್ದರೂ ಹೆಚ್ಚಳ ಮಾಡಲಿಲ್ಲಾ. ನಾವು ಮೀಸಲಾತಿ ಹೆಚ್ಚಳ ಮಾಡಿದ್ದೆವು. ಎಸ್‌ಸಿ, ಎಸ್‌ಟಿ ಜನಾಂಗಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆ: 80 ಸಂದರ್ಶನ, 200ಕ್ಕೂ ಹೆಚ್ಚು ರ್‍ಯಾಲಿಗಳಲ್ಲಿ ಮೋದಿ ಭಾಗಿ

ಕಾನೂನು ಎಲ್ಲರಿಗೂ ಒಂದೆ:
ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಎಸ್‌ಐಟಿ ತನಿಖೆಯಾಗುತ್ತಿದೆ. ಪ್ರಕರಣ ತನಿಖೆ ಹಂತದಲ್ಲಿದೆ. ಅಪರಾಧ ಮಾಡಿದವರು, ಶೋಷಣೆ ಮಾಡಿದವರು, ಅದನ್ನು ಪ್ರಚಾರ ಮಾಡಿದವರು ಎಲ್ಲಾ ವಿಚಾರದಲ್ಲಿ ಕಾನೂನು ಇದೆ. ತನಿಖೆ ನಡೆಯುತ್ತಿದೆ. ಕಾನೂನು ಎಲ್ಲರಿಗೂ ಒಂದೇ ಎಂದರು. ಇದನ್ನೂ ಓದಿ: ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ- ಏರ್‌ಪೋರ್ಟ್‌ನಲ್ಲಿ ಹೈಅಲರ್ಟ್

ಕಾನೂನು ಸುವ್ಯವಸ್ಥೆ ಹಾಳಾಗಿದೆ:
ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ. ನಮ್ಮ ಮಕ್ಕಳು ಶಾಲೆ, ಕಾಲೇಜಿಗೆ ಹೋದರೆ ಸುರಕ್ಷಿತವಾಗಿ ವಾಪಸ್ ಬರುತ್ತಾರೆ ಎನ್ನುವ ನಂಬಿಕೆ ಇಲ್ಲಾ. ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲಾ. ರಾಜ್ಯದಲ್ಲಿ ಸಾಮೂಹಿಕ ಕೊಲೆಗಳು ಆಗುತ್ತಿವೆ. ಒಂದೇ ಸಮಯಕ್ಕೆ ಮೂರು ನಾಲ್ಕು ಜನರ ಕೊಲೆ ಆಗುತ್ತಿವೆ. ಸಮಾಜಘಾತುಕರಿಗೆ ಹೆದರಿಕೆ ಇಲ್ಲಾ. ಅವರಿಗೆ ಪೊಲೀಸ್ ಠಾಣೆಗಳಲ್ಲಿ ರಾಜಮರ್ಯಾದೆ ಸಿಗುತ್ತಿದೆ. ಆ ಕಾರಣಕ್ಕೆ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ. ಸಮಾಜಘಾತುಕ ಶಕ್ತಿಗಳಿಗೆ ಎಲ್ಲಿಯವರೆಗೆ ಕಠಿಣ ಕ್ರಮ ಕೈಗೊಳ್ಳುವುದಿಲ್ಲವೋ, ಅಲ್ಲಿಯವರೆಗೆ ಈ ರೀತಿಯ ಕೃತ್ಯ ತಪ್ಪುವುದಿಲ್ಲ. ಸಮಾಜಘಾತುಕರಿಗೆ ಭಯ ಹುಟ್ಟಿಸಬೇಕಿದೆ. ಇಲಾಖೆಯ ಸಡಿಲತನ ನಿಯಂತ್ರಣ ಆಗಬೇಕು. ರಾಜ್ಯ ಸರ್ಕಾರವೇ ಇದಕ್ಕೆ ಹೊಣೆ. ಅವರನ್ನು ನಿಯಂತ್ರಣ ಮಾಡುವ ಅವಶ್ಯಕತೆ ಇದೆ. ಇಲ್ಲದಿದ್ದರೆ ರಾಜ್ಯಕ್ಕೆ ಬರುವ ಬಂಡವಾಳ ವಾಪಸ್ ಹೋಗುತ್ತದೆ ಎಂದರು. ಇದನ್ನೂ ಓದಿ: 93 ಗ್ರಾಂ ಚಿನ್ನ, 3.35 ಕೆಜಿ ಬೆಳ್ಳಿ, 2.58 ಕೋಟಿ ರೂ. ನಗದು ಕಾಣಿಕೆ – ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ!

ಬೇಜವಾಬ್ದಾರಿ ಹೇಳಿಕೆ:
ಇನ್ನೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಟಕಾಟಕ್ ಹಣದ ಆಸೆಗೆ ಮಹಿಳೆಯರು ಸಾಲುಗಟ್ಟಿ ನಿಲ್ಲುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೇಜವಾಬ್ದಾರಿಯ ಹೇಳಿಕೆಗಳಿಂದ ಈ ರೀತಿ ಆಗುತ್ತದೆ. ಏನು ಹೇಳಬೇಕೋ, ಬೇಡವೋ ಅನ್ನುವುದು ಯೋಚಿಸಿ ಮಾತನಾಡಬೇಕು ಎಂದು ಹೇಳಿದರು. ಇದನ್ನೂ ಓದಿ:  ಕೇರಳ, ಈಶಾನ್ಯ ರಾಜ್ಯಗಳಿಗೆ 2 ದಿನ ಮೊದಲೇ ಮುಂಗಾರು ಪ್ರವೇಶ

TAGGED:b nagendraBasavaraj BommaibengalurubjpcongresssiddaramaiahValmiki Development Corporationಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿ.ನಾಗೇಂದ್ರಬಿಜೆಪಿಬೆಂಗಳೂರುವಾಲ್ಮೀಕಿ ಅಭಿವೃದ್ಧಿ ನಿಗಮಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
38 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
2 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
2 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?