ಹಾವೇರಿ: ತುಂಗಭದ್ರಾ ನದಿಯ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದ 9 ತೆಪ್ಪಗಳನ್ನ ವಶಪಡಿಸಿಕೊಂಡು ಸುಟ್ಟು ಹಾಕಿದ ಘಟನೆ ಹಾವೇರಿ ತಾಲೂಕು ಕಂಚಾರಗಟ್ಟಿ ಗ್ರಾಮದ ಬಳಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ತುಂಗಭದ್ರಾ ನದಿ ತೀರದಲ್ಲಿ ತೆಪ್ಪಗಳ ಮೂಲಕ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಹಾವೇರಿಯ ತಹಶೀಲ್ದಾರರು ಬಿದಿರಿನ ತೆಪ್ಪಗಳನ್ನ ವಶಕ್ಕೆ ಪಡೆದು, ನದಿ ತೀರದಲ್ಲಿ ಸುಟ್ಟು ಹಾಕಿದ್ದಾರೆ.
ಇದೇ ವೇಳೆ ಮರಳು ಗಣಿಗಾರಿಕೆ ಮಾಡುತ್ತಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ. ಹಾವೇರಿ ತಹಶೀಲ್ದಾರರ ನವೀನ ಹುಲ್ಲೂರು ಹಾಗೂ ಉಪತಹಶೀಲ್ದಾರ್ ಗವಿಸಿದ್ದಪ್ಪ ಸೇರಿದಂತೆ ಅಧಿಕಾರಿಗಳು ಕಾರ್ಯಚರಣೆ ಭಾಗವಹಿಸಿದ್ದಾರೆ.
ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.