ಚಾಮರಾಜನಗರ: ಬೆಳ್ಳಂಬೆಳಗ್ಗೆ ಗಣಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಅಕ್ರಮ ಕ್ವಾರಿಗಳಲ್ಲಿ ಪರವಾನಿಗೆ ಇಲ್ಲದೆ ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಗಣಿ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮಮ್ಮ ಆದೇಶದಂತೆ ಭೂ ವಿಜ್ಞಾನ ಎರಡು ತಂಡ ರಚಿಸಿದ್ದು, ಜಿಲ್ಲಾದ್ಯಂತ ಗಸ್ತು ಕಾರ್ಯ ಕೈಗೊಂಡಿದ್ದಾರೆ. ಚಾಮರಾಜನಗರದಲ್ಲಿ ಮೂರು ಲಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಲಾರಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಲ್ಲದೇ ಗುಂಡ್ಲುಪೇಟೆಯಲ್ಲಿಯೂ ಕೂಡ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಎರಡು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಖನಿಜ ಸಾಗಾಣಿಕೆ ಮಾಡಲೂ ಪರವಾನಿಗೆ ಇಲ್ಲದಿರುವುದರಿಂದ ಸದರಿ ವಾಹನಗಳನ್ನು ವಶಪಡಿಸಿಕೊಂಡು ಪೊಲೀಸರ ಸುಪರ್ದಿಗೆ ನೀಡಲಾಗಿದೆ.