Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಐಟಿ ಕಾಯ್ದೆಯ ಸೆಕ್ಷನ್ 66(ಎ) ಅಡಿ ದೂರು ದಾಖಲಿಸಿದರೆ ಅಧಿಕಾರಿಗಳೇ ಜೈಲಿಗೆ- ಸುಪ್ರೀಂ

Public TV
Last updated: January 7, 2019 5:45 pm
Public TV
Share
2 Min Read
supreme
SHARE

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ 66 (ಎ) ಅಡಿ ದೂರು ದಾಖಲಿಸಿದರೆ ಅಧಿಕಾರಿಗಳು ಜೈಲಿಗೆ ಹೋಗಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ಪ್ರಕರಣವೊಂದರ ವಿಚಾರಣೆ ವೇಳೆ ಈ ಕುರಿತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್, 2015ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 (ಎ) ತೆಗೆದು ಹಾಕಲಾಗಿದೆ. ಆದರೆ ಅಧಿಕಾರಿಗಳು ಈ ಸೆಕ್ಷನ್ ಅನ್ವಯವೇ ದೂರು ದಾಖಲಿಸುತ್ತಾರೆ. ಇದು ಅಸಂವಿಧಾನಿಕವಾಗಿದ್ದು, 22 ಮಂದಿ ಮೇಲೆ ಈ ಪ್ರಕರಣದ ಅಡಿ ದೂರು ದಾಖಲಿಸಲಾಗಿದೆ ಎಂದು ಹೇ

ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಜಸ್ಟಿಸ್ ರೋಹಿಂಟನ್ ನಾರಿಮನ್ ಮತ್ತು ವಿನೀತ್ ಸರನ್ ಅವರ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೆಕ್ಷನ್ 66 (ಎ) ಅಡಿ ಬಂಧನ ಆಗುತ್ತಿರುವುದು ಶಾಕಿಂಗ್ ಸಂಗತಿಯಾಗಿದ್ದು, ಈ ನಿಯಮದ ಅಡಿ ಬಂಧನ ಮಾಡಲು ಸೂಚಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಅಲ್ಲದೇ ಅವರನ್ನು ಜೈಲಿಗೆ ಕೂಡ ಕಳುಹಿಸಲಾಗುವುದು ಎಂದು ನ್ಯಾಯ ಪೀಠ ಹೇಳಿದೆ.

court

ಸೆಕ್ಷನ್ 66 (ಎ) ಅಡಿ ಬಂಧನವಾಗುತ್ತಿರುವ ಕುರಿತು ಸಿವಿಲ್ ಲಿಬರ್ಟಿಸ್ ಫರ್ ಪೀಪಲ್ಸ್ ಯೂನಿಯನ್ (ಪಿಯುಸಿಎಲ್) ಎಂಬ ಸಂಸ್ಥೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಅಲ್ಲದೇ ಕೇಂದ್ರ ಅಪರಾಧ ದಳ ನೀಡಿರುವ ಮಾಹಿತಿ ಆಧಾರಿಸಿ ಕ್ರಮಕೈಗೊಳ್ಳುವಂತೆ ಕೋರಿತ್ತು.

ಏನಿದು ಸೆಕ್ಷನ್ 66 (ಎ): ಪರರನ್ನು ನಿಂದಿಸುವುದು, ಸುಳ್ಳು ಸುದ್ದಿ ಹರಡುವುದು, 3ನೇ ವ್ಯಕ್ತಿಯ ವಯಕ್ತಿಕ ಮಾಹಿತಿಗೆ ಧಕ್ಕೆ ಉಂಟು ಮಾಡುವ ಹಾಗೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕ್ರಮಕೈಗೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಈ ಹಿಂದೆ ಮುಂಬೈನಲ್ಲಿ ಬಾಳ ಠಾಕ್ರೆ ನಿಧನರಾದ ಸಮಯದಲ್ಲಿ ಬಂದ್ ಘೋಷಣೆ ಮಾಡಲಾಗಿತ್ತು. ಬಂದ್ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಯುವತಿ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಹಾಕಿದ್ದರು. ಇದನ್ನು ಮತ್ತೊಬ್ಬ ಯುವತಿ ಲೈಕ್ ಮಾಡಿ ಬಂದ್ ಮಾಡುವುದನ್ನ ಪ್ರಶ್ನಿಸಿದ್ದರು. ಪರಿಣಾಮ ಇಬ್ಬರ ಮೇಲೂ ದೂರು ದಾಖಲಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದರು. ಈ ಘಟನೆ ನಡೆದ ಬಳಿಕ 66 (ಎ) ನಿಯಮದ ಬಗ್ಗೆ ಭಾರೀ ಮಟ್ಟದಲ್ಲಿ ಚರ್ಚೆ ನಡೆದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ ಬಳಿಕ ಕೇಂದ್ರ ಸರಕಾರ ಈ ಕಾನೂನಿಗೆ ತಿದ್ದುಪಡಿ ತಂದಿತ್ತು. ಆದರೆ ಕಾನೂನು ತಿದ್ದುಪಡಿಯಾದ ಮೇಲೂ ಇದೇ ನಿಯಮದ ಅಡಿ ಹಲವರ ಬಂಧನವಾಗಿತ್ತು.

ವ್ಯಂಗ್ಯ ಚಿತ್ರಕಾರ ಅಸೀಮ್ ತ್ರಿವೇದಿ ಬಂಧನ ಕೂಡ ಇದೇ ಸೆಕ್ಷನ್ ಅಡಿಯಲ್ಲಿ ಮಾಡಲಾಗಿತ್ತು. ಈ ವೇಳೆ ಅವರ ಬಂಧನ ವಿರೋಧಿಸಿ ದೇಶಾದ್ಯಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಆ ಬಳಿಕ ಮಹಾರಾಷ್ಟ್ರ ಸರ್ಕಾರ ಅವರ ಮೇಲಿನ ಪ್ರಕರಣವನ್ನು ಕೈ ಬಿಟ್ಟಿತ್ತು.

Arrest 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Information Technology ActNew DelhiprisonPublic TVSupreme Courtಜೈಲುನವದೆಹಲಿನ್ಯಾಯಮೂರ್ತಿಪಬ್ಲಿಕ್ ಟಿವಿಮಾಹಿತಿ ತಂತ್ರಜ್ಞಾನ ಕಾಯ್ದೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

You Might Also Like

WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
5 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
11 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
30 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
43 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
48 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?