ದೂರು ಪರಿಹರಿಸಿ, ಇಲ್ಲವೇ ದಂಡ ಪಾವತಿಸಿ – ಒಲಾ, ಉಬರ್‌ಗಳಿಗೆ ಸರ್ಕಾರ ವಾರ್ನಿಂಗ್

Public TV
2 Min Read
OLA

ನವದೆಹಲಿ: ಕ್ಯಾಬ್ ಕಂಪನಿಗಳಾದ ಓಲಾ, ಉಬರ್‌ಗಳಿಗೆ ಬೇಡಿಕೆ ಹೆಚ್ಚಿದಂತೆ ದೂರುಗಳು ಬರಲು ಪ್ರಾರಂಭಿಸಿವೆ. ಆದ್ದರಿಂದ ದೂರುಗಳನ್ನು ಪರಿಹರಿಸಿ, ಇಲ್ಲವೇ ದಂಡ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನಿಡಿರುವ ಕೇಂದ್ರ ಸರ್ಕಾರ, ನ್ಯಾಯಯುತ ಬೆಲೆ ನಿಗದಿ ಮಾಡಲು ಮುಂದಾಗಿದೆ. ಅದಕ್ಕಾಗಿ ಕ್ಯಾಬ್ ಕಂಪನಿಗಳಿಗೆ ಮಾರ್ಗಸೂಚಿ ನೀಡಲಾಗುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

Uber-1-768x576

ಈಗಾಗಲೇ ಕೇಂದ್ರ ಮತ್ತು ರಾಜ್ಯ ಸಾರಿಗೆ ಇಲಾಖೆಗಳ ಮಾರ್ಗ ಸೂಚಿಗಳು ಭಿನ್ನವಾಗಿರುತ್ತವೆ. ಮಾಹಿತಿಯ ಪ್ರಕಾರ, ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿಗದಿತ ಗಡುವುಗಳೊಂದಿಗೆ ಗ್ರಾಹಕರ ದೂರುಗಳ ಪರಿಹಾರಕ್ಕಾಗಿ ಮಾರ್ಗಸೂಚಿಗಳನ್ನು ನಿಗದಿಪಡಿಸುವ ಸಾಧ್ಯತೆಯಿದೆ. ಗ್ರಾಹಕರ ದೂರುಗಳನ್ನು ಕಟ್ಟುನಿಟ್ಟಾಗಿ ಪರಿಹರಿಸಲು ನಾವು ಕ್ಯಾಬ್ ಕಂಪನಿಗಳನ್ನು ಕೇಳಿದ್ದೇವೆ. ಗ್ರಾಹಕರ ಕುಂದುಕೊರತೆಗಳ ಪರಿಹಾರಕ್ಕೆ ತಕ್ಷಣವೇ ಸಂಭಾವ್ಯ ಪರಿಹಾರಗಳೊಂದಿಗೆ ಬರಲು ನಾವು ಅವರಿಗೆ ಎಚ್ಚರಿಕೆ ನೀಡಿದ್ದೇವೆ ಇಲ್ಲದಿದ್ದರೆ ಸಕ್ಷಮ ಪ್ರಾಧಿಕಾರವು ಅವರ ವಿರುದ್ಧ ಶಿಕ್ಷಾರ್ಹ ಕ್ರಮವನ್ನು ತೆಗೆದುಕೊಳ್ಳುತ್ತದೆ. ಮುಖ್ಯವಾಗಿ ಡೆಸ್ಟಿನೇಶನ್ ಜೊತೆ ರದ್ದತಿ ಶುಲ್ಕದ ಪ್ರಕಾರ ದರವು ಎಷ್ಟು ನ್ಯಾಯಯುತ ಮತ್ತು ಸಮಂಜಸವಾಗಿದೆ ಎಂಬುದನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

uber cab

ಏರುತ್ತಿರುವ ಇಂಧನ ಬೆಲೆ ಪ್ರತಿ ವಿರುದ್ಧ ಪ್ರತಿಭಟಿಸಿ ಹಲವಾರು ಆಟೋ ಮತ್ತು ಕ್ಯಾಬ್ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದರಿಂದ ದೆಹಲಿಯಲ್ಲಿ ಕಳೆದ ತಿಂಗಳು ಪ್ರಯಾಣಿಕರು ತೊಂದರೆಗಳನ್ನು ಎದುರಿಸಿದರು. ಇಂಧನ ಬೆಲೆ ಏರಿಕೆ ಮತ್ತು ಕಡಿಮೆ ಕಮಿಷನ್‌ಗಳ ಸಮಸ್ಯೆಯಿಂದ ಕ್ಯಾಬ್ ಚಾಲಕರು `ನೋ ಎಸಿ’ ನೀತಿಯನ್ನು ಅಳವಡಿಸಿಕೊಂಡಿದ್ದರಿಂದ ಕ್ಯಾಬ್ ಕಂಪನಿಗಳು ಓಲಾ ಮತ್ತು ಉಬರ್ ಕೂಡ ಟೀಕೆಗೆ ಗುರಿಯಾಗಿದ್ದಾರೆ. ಪಶ್ಚಿಮ ಬಂಗಾಳ, ನವದೆಹಲಿ, ನೋಯ್ಡಾ ಮತ್ತು ತೆಲಂಗಾಣ ನಂತರ, ಬೆಂಗಳೂರಿನ ಕ್ಯಾಬ್ ಚಾಲಕರೂ ಈ ಭೀತಿಯನ್ನು ಎದುರಿಸುತ್ತಿದ್ದು ಏಪ್ರಿಲ್ ಆರಂಭದಿಂದ `ನೋ ಎಸಿ’ (ಹವಾನಿಯಂತ್ರಕ) ನೀತಿಯನ್ನು ಪ್ರಾರಂಭಿಸಿದರು. ಇದನ್ನೂ ಓದಿ: ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿಯಾಗಲಿದ್ದಾರೆ: ಬಿಜೆಪಿ ಶಾಸಕ

ಪೆಟ್ರೋಲ್ ಬೆಲೆ 100 ಗಡಿ ದಾಟಿದ ನಂತರ ಓಲಾ, ಉಬರ್ ಬಳಕೆದಾರರು ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕ ಕೇಳಲು ಮುಂದಾಗಿದ್ದಾರೆ. ಇದಕ್ಕಾಗಿ ಕೋವಿಡ್ ನಿಯಮಗಳನ್ನೂ ಉಲ್ಲಂಘಿಸಿದ್ದಾರೆ ಎಂದು ವರದಿಯಾಗಿದೆ.

ಲಾಕ್‌ಡೌನ್‌ನಿಂದ ತಮ್ಮ ಊರುಗಳಿಗೆ ಹೋದ ಎಷ್ಟೋ ರೈಡರ್‌ಗಳು, ಕ್ಯಾಬ್ ಬಳಕೆದಾರರು ಮರಳಿಲ್ಲ. ಶೇ.30 ರಷ್ಟು ಮಂದಿ ಬಾಡಿಗೆ, ಇಂಧನ ಹಾಗೂ ಮಾಸಿಕ ಇಎಂಐ ಪಾವತಿಸುವುದಕ್ಕೂ ಕಷ್ಟವಾಗಿದೆ. ಅದಕ್ಕಾಗಿಯೇ ತಮ್ಮ ಕುಲ ಕಸುಬನ್ನು ಅವಲಂಬಿಸುತ್ತಿದ್ದಾರೆ. ಇನ್ನೂ ಕೆಲ ಕ್ಯಾಬ್ ಚಾಲಕರು ಇಎಂಐ ಗಳನ್ನು ಪಾವತಿಸಲು ಸಾಧ್ಯವಾಗದ ಕಾರಣ ತಮ್ಮ ಕಾರುಗಳನ್ನು ಮಾರಾಟ ಮಾಡಿದ್ದಾರೆ. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ಓಲಾ, ಉಬರ್ ಬುಕ್ಕಿಂಗ್ ಮಾಡಿದ 20 ನಿಮಿಷಗಳ ವರೆಗೆ ಬರುವುದೇ ಇಲ್ಲ. ಮತ್ತು ಅದನ್ನು ರದ್ದು ಮಾಡಿದಾಗ ಮುಂದಿನ ಬುಕ್ಕಿಂಗ್ ವೇಳೆ 50 ರೂ. ದಂಡ ನೀಡಬೇಕಾಗುತ್ತಿದೆ ಎಂದು ಗ್ರಾಹಕರು ದೂರಿದ್ದಾರೆ.

Share This Article