Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಸಂಪಾಜೆ ಶಾಲೆಗೆ ಹಳೆ ವಿದ್ಯಾರ್ಥಿಗಳ ಕೊಡುಗೆ – 2.41 ಲಕ್ಷ ರೂ. ಮೌಲ್ಯದ ವಸ್ತುಗಳು ಹಸ್ತಾಂತರ

Public TV
Last updated: November 14, 2021 10:42 pm
Public TV
Share
4 Min Read
Old Students Group Contribute 2.41 Lakh To Sampaje Kallugundi Kannada Government School 4
SHARE

– ಕಲ್ಲುಗುಂಡಿ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳಿಂದ ಸಹಾಯ
– 4 ಸಿಸಿಟಿವಿ, 1 ಇನ್ವರ್ಟರ್, ತಲಾ 26 ಬೆಂಚ್-ಡೆಸ್ಕ್, 8 ಫ್ಯಾನ್ ಕೊಡುಗೆ

ಮಂಗಳೂರು: ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಶಾಲೆಗಳು ಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ತಾವು ಓದಿದ ಸರ್ಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ಅನುಕೂಲಕರ ವಾತಾವರಣ ನಿರ್ಮಿಸುವ ಪ್ರಯತ್ನ ಮಾಡಿ ಯಶಸ್ವಿಯಾಗಿದ್ದಾರೆ.

ಹೌದು. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲುಗುಂಡಿಯ ಹಳೆ ವಿದ್ಯಾರ್ಥಿಗಳ ತಂಡವೇ ಇಂತಹದ್ದೊಂದು ಮಾದರಿ ಹೆಜ್ಜೆಯನ್ನಿಟ್ಟು ತಮ್ಮ ಕೆಲಸವನ್ನು ಪೂರ್ಣಗೊಳಿಸಿದ್ದಾರೆ.

Old Students Group Contribute 2.41 Lakh To Sampaje Kallugundi Kannada Government School 1

ವಿದ್ಯಾರ್ಥಿಗಳು ಒಂದಾಗಿದ್ದು ಹೇಗೆ?
ನಮ್ಮೂರ ಶಾಲೆಯನ್ನು ಉಳಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ವಾಟ್ಸಪ್ ನಲ್ಲಿ ನೂರಕ್ಕೂ ಹೆಚ್ಚಿನ ಹಳೆ ವಿದ್ಯಾರ್ಥಿಗಳ ತಂಡ ಒಂದಾಯಿತು. ಶಾಲೆಯ ಅಧ್ಯಾಪಕ ಬಳಗ, ಊರಿನ ಗುರು-ಹಿರಿಯರ ಮಾರ್ಗದರ್ಶನ ಪಡೆದು ಶಾಲೆಯ ಸಬಲೀಕರಣಕ್ಕೆ ಮುಂದಾಯಿತು. ಊರಿನ ಶಾಲೆಯ ಮೂಲಭೂತ ಸೌಲಭ್ಯವನ್ನು ಅಭಿವೃದ್ಧಿಪಡಿಸುವುದು, ಮಕ್ಕಳಿಗೆ ಓದಲು ಪೂರಕ ವಾತಾವರಣ ನಿರ್ಮಿಸುವುದು. ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆಯ ಕಲ್ಲುಗುಂಡಿಯಲ್ಲಿರುವ ಸರ್ಕಾರಿ ಕನ್ನಡ ಶಾಲೆಯನ್ನು ಮಾದರಿ ಶಾಲೆಯಾಗಿ ರೂಪಿಸುವುದೇ ಹಳೆ ವಿದ್ಯಾರ್ಥಿಗಳ ತಂಡದ ಪ್ರಮುಖ ಧ್ಯೇಯೋದ್ದೇಶವಾಗಿತ್ತು. ಇದನ್ನೂ ಓದಿ:  ಕನ್ನಡ ಶಾಲೆಗಳ ಮುಚ್ಚುತ್ತಿರುವುದು ಯಾಕೆ? ನಮ್ಮ ನಿಮ್ಮೆಲ್ಲರ ಕರ್ತವ್ಯ ಏನು?

ಕೊರೊನಾ ಸವಾಲು ಮೆಟ್ಟಿ ನಿಂತರು
ನಮ್ಮೂರ ಶಾಲೆ ಉಳಿಸೋಣ ತಂಡ ಉಳಿಸೋಣ ವಾಟ್ಸಪ್ ಅಭಿಯಾನದ ನೇತೃತ್ವವನ್ನು ಪತ್ರಕರ್ತ ಹೇಮಂತ್ ಸಂಪಾಜೆ ವಹಿಸಿಕೊಂಡಿದ್ದರು. ಇವರಿಗೆ ಮಿತ್ರರಾದ ವಿನಯ್ ಸುವರ್ಣ, ಶರತ್ ಕೈಪಡ್ಕ ಸಾಥ್ ನೀಡಿದರು. ಕೊರೊನಾ ಎರಡನೇ ಅಲೆಯ ಅಬ್ಬರ ಜೋರಾಗಿದ್ದರಿಂದ ಹೊರಗೆಲ್ಲೂ ಹೋಗುವ ಪರಿಸ್ಥಿತಿ ಇರಲಿಲ್ಲ. ಧನ ಸಂಗ್ರಹಿಸುವುದು ಹೇಗೆ ಎನ್ನುವ ಸವಾಲು ಎದುರಾಯಿತು. ಈ ಸಂದರ್ಭದಲ್ಲಿ ವಾಟ್ಸಪ್‌ನಲ್ಲಿಯೇ ಎಲ್ಲವನ್ನೂ ನಿಭಾಯಿಸಲಾಯಿತು. ಹಣದ ಖರ್ಚು ವೆಚ್ಚ, ತೆಗೆದುಕೊಂಡ ವಸ್ತುಗಳಗಳ ಬಿಲ್, ದಾನಿಗಳ ವಿವರ ಸೇರಿದಂತೆ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಕೆಲಸ ಮಾಡಿ ಮುಗಿಸಲಾಯಿತು. ತಂಡವು ಸಂಘಟಿತವಾಗಿ ರಚನಾತ್ಮಕ ಕಾರ್ಯ ವೈಖರಿಗೆ ಮುಂದಾಯಿತು. ಯಾರನ್ನೂ ಮುಖತಃ ಭೇಟಿಯಾಗದೇ ಕೇವಲ ವಾಟ್ಸಪ್ ಮೂಲಕ ನಮ್ಮೂರ ಶಾಲೆ ಉಳಿಸೋಣ ತಂಡ ಕೇವಲ 50 ದಿನಗಳಲ್ಲಿ 2,41,741 ರೂ. ಸಂಗ್ರಹಿಸಿತು. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಶಾಲೆಗೆ ಹಲವು ಮಂದಿ ಧನ ಸಹಾಯ ಮಾಡಿ ಹೃದಯ ಶ್ರೀಮಂತಿಕೆ ಮೆರೆದದ್ದು ವಿಶೇಷವಾಗಿತ್ತು.  ಇದನ್ನೂ ಓದಿ: ಮರಾಠಿ ಭಾಷೆಗೆ ಬ್ರೇಕ್ – ಕಾರವಾರ ಗಡಿಯಲ್ಲಿ ಹೆಚ್ಚಾಯ್ತು ಕನ್ನಡ ಶಾಲೆಗಳು

Old Students Group Contribute 2.41 Lakh To Sampaje Kallugundi Kannada Government School 3

ಕನಸು ಹುಟ್ಟಿದ್ದೇಗೆ?
ಕಲ್ಲುಗುಂಡಿ ಶಾಲೆಯಲ್ಲಿ ಇಂತಹದ್ದೊದು ಕೆಲಸವನ್ನು ಮಾಡಬೇಕು ಅನ್ನುವ ಕನಸಿನ ಆರಂಭದ ಹಿಂದೆ ಇರುವುದು ಪತ್ರಕರ್ತ ಹೇಮಂತ್‌ ಸಂಪಾಜೆ ಹಾಗೂ ವಿನಯ್ ಸುವರ್ಣ. ಇಬ್ಬರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ್ದಾಗ ಶಾಲೆಯ ಮೂಲಸೌಲಭ್ಯ ಕುಸಿದಿರುವುದು ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸಬೇಕು ಎಂದು ತಕ್ಷಣ ದೃಢ ಸಂಕಲ್ಪ ಮಾಡಿದ ಅವರಿಬ್ಬರು ‘ನಮ್ಮೂರ ಶಾಲೆ ಉಳಿಸೋಣ’ ಎಂಬ ಹೆಸರಿನಲ್ಲಿ ವಾಟ್ಸಪ್ ಗ್ರೂಪ್‌ ತೆರೆದರು. ಜಾಲತಾಣದ ಮೂಲಕ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸಿದರು. ‘ನಮ್ಮೂರ ಶಾಲೆ ಉಳಿಸೋಣ’ ಎಂಬ ವಾಟ್ಸಪ್ ಗುಂಪನ್ನು ಸೇರುವಂತೆ, ಓದಿದ ಶಾಲೆಯನ್ನು ಉಳಿಸುವಂತೆ ಮನವಿ ಮಾಡಿದರು. ಇದಕ್ಕೆ ಹಳೆ ವಿದ್ಯಾರ್ಥಿಗಳು, ಊರಿನ ಹಾಗೂ ಪರವೂರಿನ ದಾನಿಗಳು ಸಹಾಯ ಹಸ್ತ ಚಾಚಿದರು. ಇದನ್ನೂ ಓದಿ: ಕನ್ನಡ ಶಾಲೆ ಉಳಿವಿಗಾಗಿ ಡ್ರೈವರ್ ಆದ್ರು ಮೇಷ್ಟ್ರು!

Old Students Group Contribute 2.41 Lakh To Sampaje Kallugundi Kannada Government School 2

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಸಿಜಿಎಂ (ನಿವೃತ್ತ) ರಮೇಶ್ ತೆಂಕಿಲ್ ಹಾಗೂ ಅವರ ತಂಡ, ಸಿನಿಮಾ ನಟ- ಬಾಡಿಬಿಲ್ಡರ್ ಎ.ವಿ.ರವಿ, ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಯ ನಿರೂಪಕಿ ರೀನಾ ಡಿಸೋಜಾ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎನ್ ಕೆ ಶಿವಣ್ಣ, ಪ್ರೊ ಕಬಡ್ಡಿ ರೆಫ್ರಿ ಉಸ್ನಾ ನವಾಜ್, ಮಾಜಿ ಕಬಡ್ಡಿ ಆಟಗಾರರಾದ ಬಿಸಿ ರಮೇಶ್, ಮಾಜಿ ಕಬಡ್ಡಿ ತಾರೆ ಪ್ರಸಾದ್ ಬಾಬು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೆ.ವೈ ವೆಂಕಟೇಶ್, ಐಪಿಎಲ್ ಕ್ರಿಕೆಟ್ ನ ಪ್ರಮುಖ ತಂಡವಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಫಿಸಿಯೋ ಡಾ.ಶ್ರವಣ್, ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ ಚಂದ್ರಶೇಖರ ದಾಮ್ಲೆ ಸೇರಿದಂತೆ ಪರವೂರಿನ ಹಲವು ಜನರು ಧನ ಸಹಾಯ ನೀಡಿ ಅಭಿಯಾನಕ್ಕೆ ಶಕ್ತಿ ತುಂಬಿದರು. ಹಳೆ ವಿದ್ಯಾರ್ಥಿಗಳಾದ ವಸಂತ್ ರೈ ಬಿವಿ ಸಂಪಾಜೆ, ಜಯಾನಂದ ಸಂಪಾಜೆ, ದಾಮೋದರ ಮಾಸ್ಟರ್ ಗೂನಡ್ಕ, ಸವೀತಾ ಟೀಚರ್, ಶಶಿಕಲಾ ಟೀಚರ್ ಹಳೆ ವಿದ್ಯಾರ್ಥಿಗಳ ತಂಡದ ಪ್ರಯತ್ನವನ್ನು ಬೆಂಬಲಿಸಿದರು. ಇದನ್ನೂ ಓದಿ: ಅಕ್ಷರ ಜ್ಞಾನ ಪಡೆದ ಕನ್ನಡ ಶಾಲೆಯನ್ನು ಮಾದರಿ ಶಾಲೆಯಾಗಿಸಿದ ಕೊಡಗಿನ ಹಳೆ ವಿದ್ಯಾರ್ಥಿಗಳು

ನಿಮ್ಮ ಊರಿನ ಶಾಲೆಯನ್ನೂ ಉಳಿಸಿ:
ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದಾದ್ಯಂತ ಎರಡು ಸಾವಿರಕ್ಕೂ ಹೆಚ್ಚಿನ ಕನ್ನಡ ಮಾಧ್ಯಮ ಶಾಲೆಯನ್ನು ಮುಚ್ಚುವ ಪ್ರಸ್ತಾವನೆ ಸದ್ಯ ರಾಜ್ಯ ಸರ್ಕಾರದ ಮುಂದಿದೆ. ನಮ್ಮ ಊರಿನಲ್ಲಿ ಅಂತಹ ಪರಿಸ್ಥಿತಿ ಬರಬಾರದು, ನಾವು ಓದಿದ ನೂರು ವರ್ಷಗಳ ಇತಿಹಾಸ ಹೊಂದಿರುವ ಶಾಲೆ ಮುಚ್ಚಬಾರದು. ಭವಿಷ್ಯದಲ್ಲೂ ಶಿಕ್ಷಣಾಂಮೃತವನ್ನು ಕಲ್ಲುಗುಂಡಿಯ ಶಾಲೆ ನಿರಂತರವಾಗಿ ಬಡ ವಿದ್ಯಾರ್ಥಿಗಳಿಗೆ ಉಣಬಡಿಸಬೇಕೆನ್ನುವ ಕನಸನ್ನಿಟ್ಟುಕೊಂಡ ಹಳೆ ವಿದ್ಯಾರ್ಥಿಗಳ ತಂಡ ಇಂತಹ ಕಾರ್ಯಕ್ಕೆ ಮುಂದಾಗಿದೆ.

TAGGED:CoronaKannada SchoolSampajeschoolಕನ್ನಡ ಶಾಲೆಕೊರೊನಾಸಂಪಾಜೆಸರ್ಕಾರಿ ಶಾಲೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

vijay raghavendra 2
ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ
Cinema Latest Top Stories
Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories

You Might Also Like

Rekha Gupta
Latest

ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ – ಹಲ್ಲೆ ಖಂಡಿಸಿದ ಅತಿಶಿ

Public TV
By Public TV
4 minutes ago
Student Death
Chitradurga

ಚಿತ್ರದುರ್ಗ | ಅಪರಿಚಿತ ಶವ ಪತ್ತೆ ಕೇಸ್‌ – ಯುವತಿಯ ಗುರುತು ಪತ್ತೆ, ಅತ್ಯಾಚಾರ ಎಸಗಿ ಕೊಲೆ ಶಂಕೆ

Public TV
By Public TV
50 minutes ago
Modi Cabinet
Latest

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಸಿಎಂ ವಜಾಕ್ಕೆ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

Public TV
By Public TV
1 hour ago
Karoline Leavitt
Latest

ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

Public TV
By Public TV
1 hour ago
archana tiwari
Court

12 ದಿನಗಳ ಹಿಂದೆ ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್‌ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!

Public TV
By Public TV
2 hours ago
Hassan Landslide 2
Districts

ಹಾಸನ ಜಿಲ್ಲೆಯಲ್ಲಿ ಮಳೆಯೋ ಮಳೆ – ಸಕಲೇಶಪುರದಲ್ಲಿ ಭೂಕುಸಿತ, ಅವಾಂತರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?