(ಸಾಂದರ್ಭಿಕ ಚಿತ್ರ)
ವಿಜಯಪುರ: ಹಾಳು ಬಾವಿಯಲ್ಲಿ ವೃದ್ಧೆಯ ಶವ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.
ಶೇಖವ್ವ ತಾಯಿ ನರಳು ಮೃತ ದುರ್ದೈವಿ. ದೇವರಹಿಪ್ಪರಗಿ ಪಟ್ಟಣದ ಉಪ್ಪಳೇ ಅವರ ಹಾಳು ಬಾವಿಯಲ್ಲಿ ಶವ ಪತ್ತೆಯಾಗಿದೆ. ಬೆಳಗ್ಗೆ ಗ್ರಾಮಸ್ಥರು ಬಾವಿ ಸಮೀಪ ಹೋದಾಗ ವಿಷಯ ತಿಳಿದಿದೆ. ಇವರ ಸಾವಿಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಮಾನಸಿಕ ಖಿನ್ನತೆಯಿಂದಾಗಿ ನೇಣಿಗೆ ಶರಣಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್
ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಟ್ಟಡದ 7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ