Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಎಲ್‍ಎಕ್ಸ್ ದೋಖಾ – ಓಮ್ನಿ ಆಸೆಗೆ ಬಿದ್ದ ಕಾರ್ಮಿಕರಿಗೆ ಪಂಗನಾಮ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಒಎಲ್‍ಎಕ್ಸ್ ದೋಖಾ – ಓಮ್ನಿ ಆಸೆಗೆ ಬಿದ್ದ ಕಾರ್ಮಿಕರಿಗೆ ಪಂಗನಾಮ

Public TV
Last updated: December 29, 2019 9:17 am
Public TV
Share
3 Min Read
ckb
SHARE

ಚಿಕ್ಕಬಳ್ಳಾಪುರ: ಒಎಲ್‍ಎಕ್ಸ್ ಹಳೆಯ ಹಾಗೂ ಬೇಡವಾದ ಗೃಹಬಳಕೆ ವಸ್ತುಗಳನ್ನ ಮಾರಾಟ ಮಾಡುವುದಕ್ಕೆ ಇರುವ ಆನ್‍ಲೈನ್ ತಾಣವಾಗಿದೆ. ಆದರೆ ಅದೇ ಆನ್‍ಲೈನ್ ತಾಣವನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೆಲ ಸೈಬರ್ ಕಳ್ಳರು, ಸುಲಭವಾಗಿ ಅಮಾಯಕ ಗ್ರಾಹಕರ ಬಳಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿ ವಂಚನೆ ಮಾಡುತ್ತಿದ್ದಾರೆ.

ಒಎಲ್‌ಎಕ್ಸ್‌ನಲ್ಲಿ ಓಮ್ನಿ ಕಾರು ನೋಡಿದ ಬಳ್ಳಾರಿ ಮೂಲದ ದೊಡ್ಡನಾಯಕ್ ಹಾಗೂ ಕೃಷ್ಣನಾಯಕ್ ಅವರು ಖದೀಮರ ಕೃತ್ಯಕ್ಕೆ ಈಗ ಕಣ್ಣೀರು ಹಾಕುವಂತಾಗಿದೆ. ಹೌದು. ಒಎಲ್‌ಎಕ್ಸ್‌ನಲ್ಲಿ ಕೆಎ 17 ಬಿ 5946 ನಂಬರಿನ ಒಮ್ನಿ ಕಾರು ಕಂಡಿದ್ದೇ ತಡ ಕಾರು ಚೆನ್ನಾಗಿದೆ ಅಂತ ರೇಟ್ ನೋಡಿದ್ದಾರೆ. ಅಲ್ಲಿ ಓಮ್ನಿ ಕಾರಿಗೆ ಕೇವಲ 60 ಸಾವಿರ ರೂಪಾಯಿ ಅಂತ ಹಾಕಲಾಗಿತ್ತು. ಓಮ್ನಿ ಕಾರು ನೋಡೋಕೆ ಚೆನ್ನಾಗಿದೆ ಅಂತ ಅದರಲ್ಲಿದ್ದ ಕಾಂಟಾಕ್ಟ್ ನಂಬರಿಗೆ ದೊಡ್ಡನಾಯಕ್, ಕೃಷ್ಣನಾಯಕ್ ಕರೆ ಮಾಡಿದ್ದಾರೆ. ಆ ಕಡೆಯಿಂದ ಮಾತನಾಡಿದವನು ನಾನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‍ಎಫ್ ಆಫೀಸರ್ ವಿಜಯ್ ಕುಮಾರ್, ಕಾರಿನ ರೇಟ್ 60 ಸಾವಿರ ಅಂದಿದ್ದಾನೆ. ಈ ಕಡೆಯಿಂದ ಚರ್ಚೆಗಿಳಿದ ದೊಡ್ಡನಾಯಕ್ ಅಷ್ಟೊಂದು ಜಾಸ್ತಿ ಸರ್.. 35 ಸಾವಿರ ಕೊಡ್ತೀನಿ ಅಂದಿದ್ದಾರೆ. ಅಷ್ಟೇ ಮರುಮಾತನಾಡದೆ ವಿಜಯ್ ಕುಮಾರ್ ಒಪ್ಪಿಕೊಂಡಿದ್ದನು.

ckb olx 4

ಹಣ ಗೂಗಲ್ ಪೇ ಮಾಡಿ, ಗಾಡಿ ನಿಮ್ಮ ಜಾಗಕ್ಕೆ ನಾನೇ ಕಳಿಸಿಕೊಡ್ತೀನಿ ಸುಮ್ನೆ ಯಾಕ್ ನೀವು ಇಲ್ಲಿಗೆ ಬರೋದು ಅಂತ ಹೇಳಿದ್ದಾನೆ. ಅಲ್ಲದೆ ಮೊದಲು 5,100 ರೂ. ಹಾಕಿ ಸಾಕು ಅಮೇಲೆ ಉಳಿದ ಹಣ ಗಾಡಿ ಬಂದ ಮೇಲೆ ಹಾಕಿ ಎಂದು ವಿಜಯ್ ಕುಮಾರ್, ದೊಡ್ಡನಾಯಕ್ ಮತ್ತು ಕೃಷ್ಣನಾಯಕ್ ಬಳಿ ಹೇಳಿದ್ದಾನೆ. ಹೀಗೆ ಮೊದಲು 5,100 ರೂಪಾಯಿ ಆನ್‍ಲೈನ್ ಟ್ರಾನ್ಸ್‌ಫರ್ ಮಾಡಿಸಿಕೊಂಡ ಖದೀಮ, ಇನ್ನೇನು ಕಾರು ನಿಮ್ಮ ಊರು ಕಡೆ ಬರ್ತಿದೆ ಅಂತ ಒಂದು ಕೊರಿಯರ್‍ನಲ್ಲಿ ವಾಹನದ ದಾಖಲೆ ಪತ್ರ ಜೊತೆಗೆ ಬರೆದು ಅದನ್ನ ವಾಟ್ಸಾಪ್ ಮಾಡಿದ್ದಾನೆ. ಉಳಿದ ಹಣವನ್ನ ನಮ್ಮ ಸೀನಿಯರ್ ಆಫೀಸರ್ ನವೀನ್ ಸಿಂಗ್ ಅಕೌಂಟ್‍ಗೆ ಹಾಕಿ ಅಂದಿದ್ದಾನೆ.

ckb olx 3

ಆದರೆ ಆ ಕಡೆಯಿಂದ ದೊಡ್ಡನಾಯಕ್ ಗಾಡಿ ಬಂದ ಮೇಲೆ ಹಣ ಕಳಿಸ್ತೀವಿ ಅಂದಾಗ, ಇಲ್ಲ..ಇಲ್ಲ.. ಈಗಲೇ ಹಾಕಿ ಇಲ್ಲ ಅಂದರೆ ಗಾಡಿ ವಾಪಾಸ್ ಕರೆಸಿಕೋತೀವಿ ಅಂತ ಹೆದರಿಸಿದ್ದಾರು. ಹೀಗಾಗಿ ದೊಡ್ಡನಾಯಕ್, ಕೃಷ್ಣನಾಯಕ್ ಒಮ್ಮೆ 15 ಸಾವಿರ, ಬಳಿಕ ಐದೈದು ಸಾವಿರ ಎರಡು ಮೂರು ಸಲ ಕಳುಹಿಸಿದ್ದಾರೆ. ಹೀಗೆ ಒಟ್ಟು 35 ಸಾವಿರ ಹಣವನ್ನ ಆನ್‍ಲೈನ್ ಮೂಲಕ ಟ್ರಾನ್ಸ್‌ಫರ್ ಮಾಡಿದ್ದಾರೆ. ಆದರೆ ಕೊನೆಗೆ ಗಾಡಿ ಬರಲಿಲ್ಲ ಯಾಕೆ ಎಂದು ಫೋನ್ ಮಾಡಿದರೆ ಇನ್ನೂ ದುಡ್ಡು ಹಾಕಿ ಅಂತ ಖದೀಮರು ಕೇಳುತ್ತಿದ್ದಾರೆ. ಹೀಗಾಗಿ ತಾವು ವಂಚನೆಗೆ ಒಳಗಾಗಿರೋದು ಗೊತ್ತಾಗಿ ಹಣ ಕಳೆದುಕೊಂಡ ದೊಡ್ಡನಾಯಕ್, ಕೃಷ್ಣನಾಯಕ್ ಸದ್ಯ ಕಣ್ಣೀರು ಸುರಿಸುವಂತಾಗಿದೆ.

ckb olx 2

ಈ ಇಬ್ಬರು ಬಳ್ಳಾರಿಯಿಂದ ಬಂದು ಮಂಡ್ಯದ ಬಳಿ ಕಬ್ಬು ಕಟಾವು ಕೆಲಸ ಮಾಡುತ್ತಾ ಒಂದಷ್ಟು ಹಣ ಕೂಡಿಟ್ಟುಕೊಂಡಿದ್ದರು. ಉಳಿದ ಹಣವನ್ನ 10 ರೂಪಾಯಿ ಬಡ್ಡಿಯಂತೆ ಸಾಲ ಪಡೆದು ಈ ಆನ್‍ಲೈನ್ ವಂಚಕರಿಗೆ ಹಾಕಿದ್ದರು. ಹೀಗಾಗಿ ಹಣ ಕಳೆದುಕೊಂಡು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆ ಬಳಿ ಹೋದರೆ ಏನೂ ಉಪಯೋಗವಾಗಲಿಲ್ಲ. ಅಯ್ಯೋ ಹೋಗಿ ದಿನ ಈ ಥರ ಹತ್ತಾರು ಕೇಸು ಬರುತ್ತೆ. ನೀವು ಮೋಸ ಹೋಗಿದ್ದೀರಾ ಆ ಥರ ಸಿಐಎಸ್‍ಎಫ್‍ನವರು ಯಾರೂ ಇಲ್ಲಿಲ್ಲ ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ಹೇಳಿ ಕಳುಹಿಸಿದ್ದಾರೆ. ಆದರೆ ಪೊಲೀಸರ ನೆರವು ಸಿಗುತ್ತೇನೋ ಅಂತ ಆಸೆಗಣ್ಣಿನಿಂದ ಬಂದಿದ್ದ ಯುವಕರು ಕೊನೆಗೆ ಅಳುತ್ತಲೇ ವಾಪಾಸ್ ಹೋಗಿದ್ದಾರೆ.

ckb olx 1

ಕಳೆದ 3 ತಿಂಗಳಲ್ಲಿ ಇದೇ ತರ ಒಂದಲ್ಲ ಎರಡಲ್ಲ ನೂರಾರು ಕೇಸ್‍ಗಳು ನಡೆದಿದ್ದು, ಹಣ ಕಳೆದುಕೊಳ್ಳುತ್ತಿರುವವರು ಕೆಐಎಎಲ್ ಪೊಲೀಸ್ ಠಾಣೆ ಬಳಿ ಬರುತ್ತಿದ್ದಾರೆ. ಕೆಐಎಎಲ್ ಪೊಲೀಸ್ ಠಾಣೆಯಲ್ಲಿ ಒಎಲ್‍ಎಕ್ಸ್ ವಂಚನೆ ಪ್ರಕರಣಗಳಿಗಂತಲೇ ದೊಡ್ಡದಾದ ಹೊಸ ಫೈಲ್ ಇಡಲಾಗಿದೆ. ಅದೆಲ್ಲೋ ಕೂತು ಆನ್‍ಲೈನ್ ಮೂಲಕ ನಯವಂಚಕ ಮಾತುಗಳಿಂದ ವಂಚನೆ ಮಾಡೋ ಈ ಖದೀಮರ ಕೃತ್ಯಕ್ಕೆ ಬ್ರೇಕ್ ಹಾಕಬೇಕಾದ ಪೊಲೀಸರು ಮಾತ್ರ ತಮ್ಮ ಕೈಲಾಗಲ್ಲ ಅಂತ ಕೈ ಕಟ್ಟಿ ಕುಳಿತಿದ್ದು, ಖದೀಮರ ಆಟ ಮುಂದುವರಿಯುತ್ತಲೇ ಇದೆ. ಹೀಗಾಗಿ ಆನ್‍ಲೈನ್‍ನಲ್ಲಿ ವ್ಯವಹರಿಸೋ ಮುನ್ನ ಹತ್ತು ಬಾರಿ ಯೋಚಿಸಿಬೇಕಿದೆ.

Share This Article
Facebook Whatsapp Whatsapp Telegram
Previous Article AJJARA KADU copy ಮಠಕ್ಕೆ ಯಾರೂ ಬರ್ಬೇಡಿ, ಅಜ್ಜರಕಾಡು ಮೈದಾನಕ್ಕೆ ಬನ್ನಿ: ಭಕ್ತರಲ್ಲಿ ಕಿರಿಯ ಶ್ರೀ ಮನವಿ
Next Article shree ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ

Latest Cinema News

S Narayan
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
Bengaluru City Cinema Latest Sandalwood Top Stories
vishnuvardhan b.saroja devi
ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
Bengaluru City Cinema Latest Main Post Sandalwood
Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood
Vinay Rajkumar Ramya
ವಿನಯ್ ಜೊತೆ ರಮ್ಯಾ ಸುತ್ತಾಟ ಎಂದವರಿಗೆ ತಿರುಗೇಟು ಕೊಟ್ಟ ಮೋಹಕತಾರೆ
Cinema Latest Sandalwood Top Stories Uncategorized
ramesh aravinds daiji teaser unveiled 1
ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Cinema Latest Sandalwood

You Might Also Like

ISIS Terrorists
Crime

ಬಲಪಂಥೀಯ ನಾಯಕರೇ ಟಾರ್ಗೆಟ್‌ – ಆತ್ಮಹತ್ಯಾ ಬಾಂಬರ್‌ಗಳನ್ನ ಸಿದ್ಧಪಡಿಸಿದ್ದ ಐಸಿಸ್‌ ಉಗ್ರರ ಗ್ಯಾಂಗ್‌

9 minutes ago
Dr Rajkumar Road
Bengaluru City

ಬೆಂಗಳೂರು | ವೈಟ್ ಟಾಪಿಂಗ್ ಕಾಮಗಾರಿ – 23 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಜ್‌ಕುಮಾರ್ ರಸ್ತೆ ಬಂದ್

21 minutes ago
GST
Bengaluru City

ಕಾಗದ ಉತ್ಪನ್ನಗಳ GST ದರ ಗೊಂದಲ – ವಿದ್ಯಾರ್ಥಿಗಳ ನೋಟ್‌ಬುಕ್ ಬೆಲೆ ಏರಿಕೆ ಆತಂಕ!

44 minutes ago
CP Radhakrishan 1
Latest

ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

1 hour ago
Mysuru Murder
Crime

ಪರಿಹಾರ ಹಣದ ಆಸೆಗೆ ಪತಿಗೆ ಚಟ್ಟ ಕಟ್ಟಿದ ಧರ್ಮಪತ್ನಿ – ತಿಪ್ಪೆ ಗುಂಡಿಯಲ್ಲಿ ಗಂಡನ ಶವ ಪತ್ತೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?