Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ

Latest

ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ

Public TV
Last updated: April 27, 2022 2:11 pm
Public TV
Share
3 Min Read
narendra modi covid meeting
SHARE

-ವೈದ್ಯಕೀಯ ಕಾಲೇಜು, ಆಸ್ಪತ್ರೆಗಳಲ್ಲಿ ಮೂಲಸೌಕರ್ಯ, ಮಾನವಶಕ್ತಿ ಹೆಚ್ಚಿಸಿ
-ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆಗೆ ಉತ್ತೇಜಿಸಿ
-ಕೇಂದ್ರ, ರಾಜ್ಯ ಸರ್ಕಾರಗಳು ಒಂದಾಗಿ ಕೊರೊನಾ ನಿಭಾಯಿಸಬೇಕು

ನವದೆಹಲಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನು ಉಂಟು ಮಾಡುತ್ತವೆ. ನಾವು ಜಾಗರೂಕರಾಗಿಬೇಕು ಎಂದು ಪ್ರಧಾನಿ ಮೋದಿ ಅವರು ಎಚ್ಚರಿಸಿದರು.

ಕೋವಿಡ್ ನಾಲ್ಕನೇ ಅಲೆ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

modi meeting

ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ರಾಜ್ಯಗಳಲ್ಲಿ ಲಸಿಕೆ ಅಭಿಯಾನ ಚುರುಕು ಮಾಡಿ. ಬೂಸ್ಟರ್ ಡೋಸ್ ಬಗ್ಗೆ ರಾಜ್ಯಗಳು ಗಮನ ಕೊಡಬೇಕು. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಕೊಡಲು ಶೀಘ್ರವಾಗಿ ಕ್ರಮವಹಿಸಬೇಕು. ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಬೇಕು. ಸೋಂಕಿತ ರಾಷ್ಟ್ರಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು ಎಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಎಲ್ಲಾ ರಾಜ್ಯದ ಸಿಎಂಗಳಿಗೆ ಸೂಚನೆ.

ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ರಾಜ್ಯಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಿ. ಸೋಂಕು ಕಡಿಮೆ ಇದೆ ಅಂತ ಟೆಸ್ಟಿಂಗ್ ಕಡಿಮೆ ಮಾಡಬೇಡಿ. ಟೆಸ್ಟಿಂಗ್ ಪ್ರಮಾಣ ಹೆಚ್ಚಳ ಮಾಡಿ ಸೋಂಕಿತರನ್ನ ಬೇಗ ಟ್ರೇಸ್ ಮಾಡಬೇಕು ಎಂದು ತಿಳಿಸಿದರು.

3ಟಿ ಸೂತ್ರ ಮತ್ತೆ ಪ್ರಸ್ತಾಪ ಮಾಡಿದ ಪ್ರಧಾನಿ, ಪ್ರತಿ ರಾಜ್ಯಗಳು 3ಟಿ ಸೂತ್ರ ಅಳವಡಿಸಿಕೊಳ್ಳಬೇಕು. ಈ ಮೂಲಕ 4ನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಹಿಸಬೇಕು. ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‌ಮೆಂಟ್ ನಿಯಮ ಅನುಷ್ಠಾನ ಮಾಡಿ. ವೇಗವಾಗಿ ಟೆಸ್ಟಿಂಗ್ ಮಾಡಿ, ಸೋಂಕಿತರನ್ನು ಕೂಡಲೇ ಟ್ರೇಸ್ ಮಾಡಿ. ಸೋಂಕಿತರನ್ನು ಪತ್ತೆ ಹಚ್ಚಿ ಟ್ರೀಟ್‌ಮೆಂಟ್ ಕೊಡಿ ಎಂದು ಸಲಹೆ ನೀಡಿದರು.

OMICRON 1

ವೈದ್ಯಕೀಯ ಕಾಲೇಜು, ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಮತ್ತು ಮಾನವಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ಔಷಧಿಗಳು, ಆಕ್ಸಿಜನ್ ವ್ಯವಸ್ಥೆ ಸಿದ್ಧ ಮಾಡಿಕೊಳ್ಳಿ. 4ನೇ ಅಲೆ ಅಪಾಯಕಾರಿಯಲ್ಲದೇ ಇದ್ದರೂ ಎಚ್ಚರಿಕೆ ಇರಲಿ. ರೂಪಾಂತರ ತಳಿ ಬಗ್ಗೆ ನಿರ್ಲಕ್ಷ್ಯ ಮಾಡೋದು ಬೇಡ. ಬೇರೆ ದೇಶಗಳಲ್ಲಿ 4ನೇ ಅಲೆ ಬಂದಿದ್ದರೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾದ ವರದಿ ಆಗಿಲ್ಲ. ಆದರೂ ರಾಜ್ಯಗಳು ಮೈಮರೆಯುವುದು ಬೇಡ. ಆಸ್ಪತ್ರೆ ವ್ಯವಸ್ಥೆ ಸಿದ್ಧವಾಗಿ ಇರಿಸಿಕೊಳ್ಳಿ. ಆಕ್ಸಿಜನ್ ಕೊರತೆ ಆಗದಂತೆ ಕ್ರಮವಹಿಸಿ. ಆಸ್ಪತ್ರೆಗಳು, ಬೆಡ್‌ಗಳು, ಔಷಧಿಗಳ ಕೊರತೆ ಆಗದಂತೆ ಎಚ್ಚರಿಕೆವಹಿಸಿ ಎಂದು ಹೇಳಿದರು.

ವ್ಯಾಕ್ಸಿನ್ ದೊಡ್ಡ ಕವಚವಾಗಿದೆ. ವ್ಯಾಕ್ಸಿನ್ ಪಡೆಯುವುದರಿಂದ ಅಪಾಯದಿಂದ ರಕ್ಷಣೆ ಸಿಗಲಿದೆ. ಶಾಲಾ ಮಕ್ಕಳಲ್ಲೂ ಸೋಂಕು ಕಂಡು ಬಂದಿತ್ತು. ಈಗ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಶೀಘ್ರದಲ್ಲಿ ಹೆಚ್ಚು ಮಕ್ಕಳಿಗೆ ವ್ಯಾಕ್ಸಿನ್ ನೀಡುವುದು ನಮ್ಮ ಆದ್ಯತೆ. ಶಾಲೆಗಳಲ್ಲಿ ವಿಶೇಷ ವ್ಯಾಕ್ಸಿನ್ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು.

ಮುನ್ನೆಚ್ಚರಿಕೆ ಡೋಸ್ ಪಡೆಯುವುದು ಉತ್ತಮ. ಮೂರನೇ ಅಲೆಯಲ್ಲಿ ನಿತ್ಯ ಮೂರು ಲಕ್ಷ ಪ್ರಕರಣಗಳು ವರದಿಯಾಗಿದೆ. ಆಗಲೂ ನಮ್ಮ ರಾಜ್ಯಗಳು ಪರಿಸ್ಥಿತಿ ನಿಭಾಯಿಸಿವೆ. ಈಗಲೂ ನಮ್ಮ ತಜ್ಞರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಭಾರತದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಲಹೆ ನೀಡಲಿದ್ದಾರೆ ಎಂದರು.

COVID HIKE 2

ಇವತ್ತಿನ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ಮಾಡಿದೆ. ಈಗಾಗಲೇ ಸಾಕಷ್ಟು ಸುಧಾರಣೆಯಾಗಿದೆ. ಆಕ್ಸಿಜನ್, ವೆಂಟಿಲೇಟರ್ ವಿಚಾರಣದಲ್ಲಿ ನಾವು ಅಭಿವೃದ್ಧಿ ಸಾಧಿಸಿದ್ದೇವೆ. ಕೊರೊನಾ ಹೋರಾಟವನ್ನು ನಾವು ಮುಂದುವರಿಸಲಿದ್ದೇವೆ. ಈ ದೀರ್ಘ ಹೋರಾಟದಲ್ಲಿ ನಾವು ಗೆಲ್ಲಲಿದ್ದೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಕೊರೊನಾದಿಂದ ಆಗುವ ಪರಿಸ್ಥಿತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿಭಾಯಿಸಬೇಕು. ಈ ಹಿಂದೆಯೂ ಎರಡು ಸರ್ಕಾರಗಳು ಇಂತಹ ಪ್ರಯತ್ನ ಮಾಡಿವೆ. ಆರ್ಥಿಕ ನಿರ್ಧಾರಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹೊಂದಾಣಿಕೆ ಅವಶ್ಯಕತೆ ಇದೆ. ಇದೊಂದು ಯುದ್ಧದ ಪರಿಸ್ಥಿತಿ ಇದ್ದಂತೆ. ಇಂತಹ ದಿನಗಳಲ್ಲಿ ಎರಡು ಸರ್ಕಾರಗಳ ಮಧ್ಯೆ ಹೊಂದಾಣಿಕೆ ಮುಖ್ಯ ಎಂದು ಆಶಯ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿಗಳ ನೇತೃತ್ವದಲ್ಲಿ ಇದು 24ನೇ ಕೋವಿಡ್ ಸಭೆ. ಈಗಾಗಲೇ ಪ್ರಧಾನಿಗಳ ನೇತೃತ್ವದಲ್ಲಿ ಮೂರು ಅಲೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಅದರಂತೆ ನಾಲ್ಕನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕು ಎಂದು ತಿಳಿಸಿದರು.

Basavaraj Bommai 9

ತಜ್ಞರ ಸಲಹೆಗಳ ಆಧಾರದಲ್ಲಿ ಮುಂಜಾಗ್ರತಾ ಕ್ರಮ ವಹಿಸಬೇಕು. ಜನರು ಕೊರೊನಾ ನಿಯಮಗಳನ್ನು ಪಾಲಿಸುವಂತೆ ಮಾಡಬೇಕು. ಕಾಲ ಕಾಲಕ್ಕೆ ಅಗತ್ಯ ಕ್ರಮಗಳೊಂದಿಗೆ ನಾಲ್ಕನೇ ಅಲೆ ನಿಯಂತ್ರಣ ಮಾಡಬೇಕು ಎಂದರು.

ಇದೇ ವೇಳೆ ಕರ್ನಾಟಕದ ಕೋವಿಡ್ ಪರಿಸ್ಥಿತಿ ಹಾಗೂ ಲಸಿಕಾಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದರು. ಈ ವೇಳೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಸಿಎಸ್ ರವಿಕುಮಾರ್ ಉಪಸ್ಥಿತರಿದ್ದರು.

TAGGED:Covid 19covid meetingnarendra modiNew Delhiomicron subvariantಓಮಿಕ್ರಾನ್‌ಕೊರೊನಾನರೇಂದ್ರ ಮೋದಿಮುಖ್ಯಮಂತ್ರಿಗಳುಸಭೆ
Share This Article
Facebook Whatsapp Whatsapp Telegram

Cinema news

Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories
Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood

You Might Also Like

Drumstick Main
Bengaluru City

ಗ್ರಾಹಕರಿಗೆ ಶಾಕ್ – ನುಗ್ಗೇಕಾಯಿ ಕೆಜಿಗೆ 700 ರೂ.

Public TV
By Public TV
8 hours ago
Bengaluru Andrahalli
Bengaluru City

ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ!

Public TV
By Public TV
8 hours ago
d.k.shivakumar KPCC
Latest

ಡಿ.8 ರ ಸರ್ವಪಕ್ಷ‌ ಸಭೆ ಮುಂದೂಡಿಕೆ: ಡಿ.ಕೆ.ಶಿವಕುಮಾರ್

Public TV
By Public TV
8 hours ago
N chaluvarayaswamy
Districts

ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ – ಚಲುವರಾಯಸ್ವಾಮಿ

Public TV
By Public TV
9 hours ago
Lawrence Bishnoi
Districts

ಹನುಮ ಮಾಲಾಧಾರಿಯಿಂದ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್‌ ಫೋಟೋ ಪ್ರದರ್ಶನ

Public TV
By Public TV
9 hours ago
IndiGo
Latest

ದೇಶಾದ್ಯಂತ 200 ವಿಮಾನಗಳ ಹಾರಾಟ ರದ್ದು – ಕ್ಷಮೆ ಕೋರಿದ ಇಂಡಿಗೋ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?