Bengaluru City
ಅ.25ರಂದು ವಿಧಾನಸೌಧದ ವಜ್ರಮಹೋತ್ಸವ: ಪರಿಷತ್ ಸದಸ್ಯ, ಶಾಸಕ, ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್

ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವವು ಅಕ್ಟೋಬರ್ 25 ರಂದು ನಡೆಯಲಿದ್ದು, ಇದರ ಸವಿನೆನಪಿಗಾಗಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಚಿನ್ನದ ಬಿಸ್ಕತ್ ಹಾಗೂ ಸಿಬ್ಬಂದಿಗಳಿಗೆ ಬೆಳ್ಳಿತಟ್ಟೆ ನೀಡಲು ನಿರ್ಧರಿಸಿದೆ.
ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಡೆಸುತ್ತಿರುವ ಎರಡು ದಿನಗಳ ವಜ್ರಮಹೋತ್ಸವ ಸಮಾರಂಭದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟ ಸಚಿವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ವಿಧಾನಸೌಧ ವಜ್ರಮಹೋತ್ಸವ ಸಮಾರಂಭಕ್ಕಾಗಿ ಒಟ್ಟು 27 ಕೋಟಿ ರೂ. ವೆಚ್ಚದಲ್ಲಿ 300 ಶಾಸಕರಿಗೆ ಹಾಗೂ ಪರಿಷತ್ ಸದಸ್ಯರಿಗೆ 50,000 ಮೌಲ್ಯದ ಚಿನ್ನದ ಬಿಸ್ಕತ್ ನೀಡಲು ನಿರ್ಧರಿಸಿದೆ.
ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಬೆಂಗಳೂರಿನಲ್ಲಿ ಸಾವು ನೋವು ಸಂಭವಿಸಿರುವಾಗ 27 ಕೋಟಿ ಖರ್ಚು ಮಾಡುವುದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಇನ್ನು ಯಾರು, ಯಾವ ಕಾರಣಕ್ಕೆ ಖರ್ಚು ಮಾಡುತ್ತಿದ್ದಾರೆ ಎಂಬುದನ್ನು ಹೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
27 ಕೋಟಿ ರೂ. ಖರ್ಚಿನ ಲೆಕ್ಕಾಚಾರ ಇಂತಿದೆ:
