ದೇವೇಗೌಡರ ಆರೋಗ್ಯ ವಿಚಾರಿಸುವ ನೆಪದಲ್ಲಿ ರಾಜಕೀಯ ನಾಯಕರು ಸಿಂಪತಿ ಗಿಟ್ಟಿಸಿಕೊಳ್ತಿದ್ದಾರೆ: ಶರವಣ

Public TV
1 Min Read
sharavana

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ (HD Deve Gowda)ಆರೋಗ್ಯ ವಿಚಾರಿಸುವ ನೆಪದಲ್ಲಿ ರಾಜಕೀಯ ನಾಯಕರು ಸಿಂಪತಿ ಗಿಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಅಂತ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಶರವಣ (Sharavana) ಟೀಕೆ ಮಾಡಿದ್ದಾರೆ.

HD DEVEGOWDA SIDDARAMAIAH

ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇವೇಗೌಡರು ಆರೋಗ್ಯವಾಗಿ ಇದ್ದಾರೆ. ಆದರೆ ರಾಜಕೀಯ ನಾಯಕರು ದೇವೇಗೌಡರನ್ನು ಭೇಟಿ ಮಾಡುವ ಮೂಲಕ ಸಿಂಪತಿ ಗಿಟ್ಟಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

HDD BSY

ನನ್ನ ಬಳಿಯೇ ದೇವೇಗೌಡರು ಎರಡು ಗಂಟೆ ಪಕ್ಷದ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಾನೇ ಕಚೇರಿಗೆ ಬಂದು ಆಯುಧ ಪೂಜೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಜನತಾ ಮಿತ್ರ ಕಾರ್ಯಕ್ರಮಕ್ಕೆ ದೇವೇಗೌಡರು ಬರುತ್ತಾರೆ ಅಂತ ತಿಳಿಸಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಸಿಎಂ, ಮಾಜಿ ಸಿಎಂ ಯಡಿಯೂರಪ್ಪ (Yeddiyurappa), ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸೇರಿ ಅನೇಕ ಜನರು ಗೌಡರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇವರೆಲ್ಲ ದೇವೇಗೌಡರ ಆರೋಗ್ಯ ವಿಚಾರಿಸುವ ನೆಪದಲ್ಲಿ ಸಿಂಪತಿ ಗಿಟ್ಟಿಸಿಕೊಳ್ಳುತ್ತಿದ್ದಾರೆ ಅಂತ ಶರವಣ ಆರೋಪ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *