ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು (Bus) 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25 ಜನ ಗಂಭೀರ ಗಾಯಗೊಂಡ ಘಟನೆ ಸುರಪುರದ (Surapura) ದೇವಾಪುರದ ಬಳಿ ನಡೆದಿದೆ.
ಘಟನೆಯಲ್ಲಿ ಹುಮನಬಾದ್ನ ಹಳ್ಳಿಖೇಡ ನಿವಾಸಿ ಬಾಲು ಕುಮಾರ್ (36) ಮೃತ ಪ್ರಯಾಣಿಕ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ (Accident) ಗಂಭೀರ ಗಾಯಗೊಂಡಿರುವ ಎಲ್ಲಾ ಗಾಯಾಳುಗಳನ್ನ ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಬೀದರ್ನಿಂದ ಬೆಂಗಳೂರಿಗೆ (Bengaluru) 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ತೆರಳುತ್ತಿತ್ತು, ಈ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಬೆನಾಪೋಲ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ – ಐವರು ಸಜೀವ ದಹನ
ಮಿತಿ ಮೀರಿದ ವೇಗದಲ್ಲಿ ಚಲಾಯಿಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಬಳಿಕ ಪೊಲೀಸರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ, ಸರ್ಕಾರದಿಂದ ಚಿಟ್ ಫಂಡ್ – ಏನಿದು ಹೊಸ ಪ್ಲ್ಯಾನ್?