Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಒಂದು ಸಭೆ, ಒಂದು ಚೇರ್‌ – ಕೃಷ್ಣ ಕಾಂಗ್ರೆಸ್‌ ಸೇರಿದ ಕಥೆಯೇ ರೋಚಕ

Public TV
Last updated: December 10, 2024 1:34 pm
Public TV
Share
3 Min Read
sm krishna 3 1
SHARE

ಎಸ್‌ಎಂ ಕೃಷ್ಣ (SM Krishna) ಕಾಂಗ್ರೆಸ್‌ ಸೇರಿದ್ದೇ ಒಂದು ಇಂಟರೆಸ್ಟಿಂಗ್‌ ಸ್ಟೋರಿ. ಇಂದಿರಾ ಗಾಂಧಿ (Indira Gandhi) ಅವರ ಸಭೆಯಲ್ಲಿ ನಡೆದ ಒಂದು ಘಟನೆ ಎಸ್‌ಎಂ ಕೃಷ್ಣ (SM Krishna) ಅವರ ಜೀವನವನ್ನೇ ಬದಲಾಯಿಸಿತು.

ಹೌದು. ಅಮೆರಿಕದಿಂದ ಬಂದು ಪ್ರಜಾ ಸೋಶಿಯಲಿಸ್ಟ್‌ ಪಕ್ಷದಿಂದ ಶಾಸಕರಾಗಿ ಎಸ್‌ಎಂ ಕೃಷ್ಣ ಆಯ್ಕೆಯಾಗಿದ್ದರು. 1968ರ ಮಂಡ್ಯ (Mandya) ಲೋಕಸಭೆಯ ಉಪಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುತ್ತಾರೆ. ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿರುತ್ತಾರೆ.

ಒಂದು ದಿನ ದೆಹಲಿಯಲ್ಲಿ ಇಂದಿರಾಗಾಂಧಿ (Indira Gandhi) ನೇತೃತ್ವದಲ್ಲಿ ಸಭೆಯೊಂದು ಆಯೋಜನೆ ಆಗುತ್ತದೆ. ಸಭೆ ಆರಂಭವಾದ ನಂತರ ನಂತರ ಸಭೆಯ ಅಜೆಂಡಾವನ್ನು ಓದಬೇಕಿದ್ದ ಇಂದಿರಾಗಾಂಧಿ ಅವರ ಗಂಟಲು ಕೈಕೊಟ್ಟಿತ್ತು. ಹೀಗಾಗಿ ತಮ್ಮೆದುರಿಗಿದ್ದ ಅಜೆಂಡಾವನ್ನು ಓದಲಾಗದೇ ಇಂದಿರಾಗಾಂಧಿ ಮೌನವಾಗಿ ಸಭೆಯ ಸುತ್ತ ಕಣ್ಣಾಡಿಸುತ್ತಿದ್ದರು.

sm krishna indira gandhi

ಸಭೆಯಲ್ಲಿ ಭಾಗವಹಿಸಿದ್ದ ಗಣ್ಯ ಅತಿಥಿಗಳು ತಮ್ಮತ್ತಲೇ ನೋಡುತ್ತಿದ್ದಾರೆ. ಹೀಗಾಗಿ ಮುಂದೇನು ಮಾಡಬೇಕು ಅಂತ ಇಂದಿರಾ ಯೋಚಿಸುತ್ತಿದ್ದಂತೆಯೇ ಸಭೆಯ ಕೊನೆಯಲ್ಲಿ ನಿಂತಿದ್ದ ಯುವ ಸಂಸದ ಕೃಷ್ಣ ಅವರು ಕಣ್ಣಿಗೆ ಕಾಣಿಸಿದ್ದಾರೆ. ಈ ಸಭೆಯಲ್ಲಿ ಭಾಗವಹಿಸಿದ್ದ ಕೃಷ್ಣ ಅವರಿಗೆ ಕೂರಲು ಚೇರ್‌ ಸಿಕ್ಕಿರಲಿಲ್ಲ. ಹೀಗಾಗಿ ನಿಂತುಕೊಂಡು ಚೇರ್‌ ಹುಡುಕುತ್ತಿದ್ದ ಅವರಿಗೆ ಒಂದು ಚೇರ್‌ ಕಾಣಿಸಿದೆ. ಆದರೆ ಆ ಚೇರ್‌ ಸ್ವತ: ಪ್ರಧಾನಿ ಇಂದಿರಾಗಾಂಧಿ ಅವರ ಪಕ್ಕದ್ದಲ್ಲಿ ಇದ್ದ ಕಾರಣ ಮುಂದೇನು ಮಾಡಬೇಕು ಎನ್ನುವಂತೆ ಅವರು ಇಂದಿರಾ ಕಡೆ ನೋಡಿದ್ದಾರೆ. ಆ ಕ್ಷಣದಲ್ಲಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಕೃಷ್ಣ ಅವರ ಕಣ್ಣು ಸಂಧಿಸಿದೆ. ಕೃಷ್ಣ ಅವರನ್ನು ನೋಡಿದ ಕೂಡಲೇ ಇಂದಿರಾ ಗಾಂಧಿ ತಮ್ಮ ಬಳಿ ಬರುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ವಿದ್ಯೆ ಕೊಟ್ಟ ಊರಿನ ಋಣವನ್ನು ಬಡ್ಡಿ ಸಮೇತ ತೀರಿಸಿದ್ರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ!

sm krishna atal bihari vajpayee

ಪ್ರಧಾನಿಯೇ ಹತ್ತಿರ ಬರುವಂತೆ ಹೇಳಿದ್ದರಿಂದ ಕೃಷ್ಣ ಅವರು ಹೋಗಿ ಇಂದಿರಾ ಬಳಿಯ ಚೇರ್‌ನಲ್ಲಿ ಕುಳಿತಿದ್ದಾರೆ. ಹೀಗೆ ತಮ್ಮ ಪಕ್ಕ ಕುಳಿತ ಕೃಷ್ಣ ಅವರ ಮುಂದೆ ತಮ್ಮ ಮುಂದಿದ್ದ ಅಜೆಂಡಾ ಪ್ರತಿಯನ್ನು ತಳ್ಳಿ ಓದುವಂತೆ ಹೇಳುತ್ತಾರೆ. ತಮಗೆ ನೀಡಿದ ಈ ಜವಾಬ್ದಾರಿಯನ್ನು ಕೃಷ್ಣ ಅವರು ಎಷ್ಟು ಚೆನ್ನಾಗಿ ನಿರ್ವಹಿಸಿದ್ದಾರೆಂದರೆ ಅವರ ಅಸ್ಖಲಿತ ಭಾಷೆ ಇಂದಿರಾ ಸೇರಿದಂತೆ ಇಡೀ ಸಭೆಯನ್ನು ಮಂತ್ರಮುಗ್ಧಗೊಳಿಸಿತ್ತು.

sm krishna jayalalitha

ಸಭೆ ಮುಗಿದ ನಂತರ ಕೃಷ್ಣ ಅವರಿಗೆ ಮೆಚ್ಚುಗೆಯ ಮಾತನ್ನು ಇಂದಿರಾ ಗಾಂಧಿಗಾಂಧಿ ಹೇಳಿ ತನ್ನನ್ನು ಭೇಟಿಯಾಗುವಂತೆ ಸೂಚಿಸಿದ್ದಾರೆ. ಪ್ರಧಾನಿ ಆಹ್ವಾನ ನೀಡಿದ ನಂತರ ನಿಗದಿತ ಸಮಯಕ್ಕೆ ಕೃಷ್ಣ ಅವರು ಕಚೇರಿಯಲ್ಲಿ ಇಂದಿರಾ ಗಾಂಧಿ ಅವರನ್ನು ಭೇಟಿಯಾಗುತ್ತಾರೆ. ಈ ವೇಳೆ ತನ್ನ ಪರಿಚಯ ತಿಳಿಸಿದ ಕೃಷ್ಣ ಅವರು ನಾನು ಮಂಡ್ಯದಿಂದ ಪ್ರಜಾ ಸೋಶಿಯಲಿಸ್ಟ್ ಪಾರ್ಟಿಯ ಪ್ರತಿನಿಧಿಯಾಗಿ ಆಯ್ಕೆ ಆಗಿದ್ದೇನೆ ಎಂದು ತಿಳಿಸಿ ಪಕ್ಷದ ಉದ್ದೇಶವನ್ನು ವಿವರಿಸುತ್ತಾರೆ. ಇದನ್ನೂ ಓದಿ: ಹಳೆ ಮೈಸೂರು ಎಸ್‌ಎಂಕೆ ಪಾಲಿಗೆ ವರವೂ ಹೌದು, ಶಾಪವೂ ಹೌದು!

ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ನಿಮ್ಮ ಪಕ್ಷ ಯಾವುದಕ್ಕೆ ಹೋರಾಡುತ್ತಿದೆಯೋ ಅದನ್ನು ಜಾರಿಗೊಳಿಸಲೆಂದೇ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ನೀವು ಪ್ರತ್ಯೇಕವಾಗಿರುವ ಬದಲು ಕಾಂಗ್ರೆಸ್‌ ಸೇರಬಹುದಲ್ಲ ಎಂದು ಹೇಳುತ್ತಾರೆ. ಇಂದಿರಾ ನೀಡಿದ ಆಹ್ವಾನದ ಬಗ್ಗೆ ಕೃಷ್ಣ ಅವರು ಪ್ರಜಾ ಸೋಶಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ವಿವರಿಸಿದರೂ ಪಕ್ಷದ ಸದಸ್ಯರು ಒಪ್ಪಿಗೆ ನೀಡಿರಲಿಲ್ಲ. ನಂತರ ಪಕ್ಷದ ನಿಲುವನ್ನು ಕೃಷ್ಣ ಅವರು ಇಂದಿರಾ ಬಳಿ ತಿಳಿಸಿದಾಗ, ಯಾರೂ ಬಾರದೇ ಇದ್ದರೆ ನೀವು ಬನ್ನಿ. ನಿಮಗೆ ಬಹಳಷ್ಟು ಜ್ಞಾನವಿದೆ. ಕಾಂಗ್ರೆಸ್‌ ಸೇರಿದರೆ ಪಕ್ಷದಲ್ಲಿ ನಿಮಗೆ ಮುಂದೆ ಉತ್ತಮ ಅವಕಾಶ ಸಿಗಲಿದೆ ಎಂದರಂತೆ. ಖುದ್ದು ಪ್ರಧಾನಿಯೇ ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ಎಂಸ್‌ಎಂ ಕೃಷ್ಣ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುತ್ತಾರೆ. ಕಾಂಗ್ರೆಸ್‌ ಸೇರಿದ ನಂತರ ಮುಂದೆ ನಡೆದದ್ದು ಇತಿಹಾಸ. ಸಚಿವ ಮುಖ್ಯಮಂತ್ರಿ, ವಿದೇಶಾಂಗ ಮಂತ್ರಿಯಾಗಿ ಕೆಲಸ ಮಾಡಿ ಯಶಸ್ವಿ ನಾಯಕನಾಗಿ ಎಸ್‌ಎಂ ಕೃಷ್ಣ ಹೊರಹೊಮ್ಮುತ್ತಾರೆ.

 

TAGGED:congressIndira GandhimandyaSM Krishnaಇಂದಿರಾ ಗಾಂಧಿಎಸ್‍ಎಂ ಕೃಷ್ಣಕಾಂಗ್ರೆಸ್ಮಂಡ್ಯ
Share This Article
Facebook Whatsapp Whatsapp Telegram

Cinema Updates

Sanjay Dutt 4
ನಮ್ಮ ದೇಶದ ತಾಕತ್ ಏನಂತ ಪ್ರಪಂಚಕ್ಕೆ ಗೊತ್ತಾಗಿದೆ: ಸಂಜಯ್ ದತ್
5 hours ago
narendra modi with sudeep
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
9 hours ago
ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
1 day ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
1 day ago

You Might Also Like

wang yi pakistan
Latest

ಉಗ್ರರ ಪೋಷಕ ಪಾಕಿಸ್ತಾನಕ್ಕೆ ಮತ್ತೆ ಬೆಂಬಲ ಘೋಷಿಸಿದ ಚೀನಾ

Public TV
By Public TV
6 minutes ago
nagrota indian army
Latest

ನಾಗ್ರೋಟಾದಲ್ಲಿ ಭಾರತೀಯ ಸೇನೆ & ಉಗ್ರರ ನಡುವೆ ಗುಂಡಿನ ಚಕಮಕಿ

Public TV
By Public TV
45 minutes ago
Capture 1
Latest

ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ: ವಿಕ್ರಂ ಮಿಸ್ರಿ

Public TV
By Public TV
1 hour ago
BSF Sub Inspector Mohammed Imteyaz
Crime

ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ

Public TV
By Public TV
2 hours ago
Omar Abdullah drone attack
Latest

ಕದನ ವಿರಾಮಕ್ಕೆ ಏನಾಯಿತು?: ಶ್ರೀನಗರದಲ್ಲಿ ಸ್ಫೋಟದ ಸದ್ದು ಕೇಳಿ ಜಮ್ಮು ಸಿಎಂ ಆತಂಕ

Public TV
By Public TV
3 hours ago
Ceasefire violation
Latest

ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್‌ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?