Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ಸಭೆ, ಒಂದು ಚೇರ್‌ – ಕೃಷ್ಣ ಕಾಂಗ್ರೆಸ್‌ ಸೇರಿದ ಕಥೆಯೇ ರೋಚಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಂದು ಸಭೆ, ಒಂದು ಚೇರ್‌ – ಕೃಷ್ಣ ಕಾಂಗ್ರೆಸ್‌ ಸೇರಿದ ಕಥೆಯೇ ರೋಚಕ

Bengaluru City

ಒಂದು ಸಭೆ, ಒಂದು ಚೇರ್‌ – ಕೃಷ್ಣ ಕಾಂಗ್ರೆಸ್‌ ಸೇರಿದ ಕಥೆಯೇ ರೋಚಕ

Public TV
Last updated: December 10, 2024 1:34 pm
Public TV
Share
3 Min Read
sm krishna 3 1
SHARE

ಎಸ್‌ಎಂ ಕೃಷ್ಣ (SM Krishna) ಕಾಂಗ್ರೆಸ್‌ ಸೇರಿದ್ದೇ ಒಂದು ಇಂಟರೆಸ್ಟಿಂಗ್‌ ಸ್ಟೋರಿ. ಇಂದಿರಾ ಗಾಂಧಿ (Indira Gandhi) ಅವರ ಸಭೆಯಲ್ಲಿ ನಡೆದ ಒಂದು ಘಟನೆ ಎಸ್‌ಎಂ ಕೃಷ್ಣ (SM Krishna) ಅವರ ಜೀವನವನ್ನೇ ಬದಲಾಯಿಸಿತು.

ಹೌದು. ಅಮೆರಿಕದಿಂದ ಬಂದು ಪ್ರಜಾ ಸೋಶಿಯಲಿಸ್ಟ್‌ ಪಕ್ಷದಿಂದ ಶಾಸಕರಾಗಿ ಎಸ್‌ಎಂ ಕೃಷ್ಣ ಆಯ್ಕೆಯಾಗಿದ್ದರು. 1968ರ ಮಂಡ್ಯ (Mandya) ಲೋಕಸಭೆಯ ಉಪಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುತ್ತಾರೆ. ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿರುತ್ತಾರೆ.

ಒಂದು ದಿನ ದೆಹಲಿಯಲ್ಲಿ ಇಂದಿರಾಗಾಂಧಿ (Indira Gandhi) ನೇತೃತ್ವದಲ್ಲಿ ಸಭೆಯೊಂದು ಆಯೋಜನೆ ಆಗುತ್ತದೆ. ಸಭೆ ಆರಂಭವಾದ ನಂತರ ನಂತರ ಸಭೆಯ ಅಜೆಂಡಾವನ್ನು ಓದಬೇಕಿದ್ದ ಇಂದಿರಾಗಾಂಧಿ ಅವರ ಗಂಟಲು ಕೈಕೊಟ್ಟಿತ್ತು. ಹೀಗಾಗಿ ತಮ್ಮೆದುರಿಗಿದ್ದ ಅಜೆಂಡಾವನ್ನು ಓದಲಾಗದೇ ಇಂದಿರಾಗಾಂಧಿ ಮೌನವಾಗಿ ಸಭೆಯ ಸುತ್ತ ಕಣ್ಣಾಡಿಸುತ್ತಿದ್ದರು.

sm krishna indira gandhi

ಸಭೆಯಲ್ಲಿ ಭಾಗವಹಿಸಿದ್ದ ಗಣ್ಯ ಅತಿಥಿಗಳು ತಮ್ಮತ್ತಲೇ ನೋಡುತ್ತಿದ್ದಾರೆ. ಹೀಗಾಗಿ ಮುಂದೇನು ಮಾಡಬೇಕು ಅಂತ ಇಂದಿರಾ ಯೋಚಿಸುತ್ತಿದ್ದಂತೆಯೇ ಸಭೆಯ ಕೊನೆಯಲ್ಲಿ ನಿಂತಿದ್ದ ಯುವ ಸಂಸದ ಕೃಷ್ಣ ಅವರು ಕಣ್ಣಿಗೆ ಕಾಣಿಸಿದ್ದಾರೆ. ಈ ಸಭೆಯಲ್ಲಿ ಭಾಗವಹಿಸಿದ್ದ ಕೃಷ್ಣ ಅವರಿಗೆ ಕೂರಲು ಚೇರ್‌ ಸಿಕ್ಕಿರಲಿಲ್ಲ. ಹೀಗಾಗಿ ನಿಂತುಕೊಂಡು ಚೇರ್‌ ಹುಡುಕುತ್ತಿದ್ದ ಅವರಿಗೆ ಒಂದು ಚೇರ್‌ ಕಾಣಿಸಿದೆ. ಆದರೆ ಆ ಚೇರ್‌ ಸ್ವತ: ಪ್ರಧಾನಿ ಇಂದಿರಾಗಾಂಧಿ ಅವರ ಪಕ್ಕದ್ದಲ್ಲಿ ಇದ್ದ ಕಾರಣ ಮುಂದೇನು ಮಾಡಬೇಕು ಎನ್ನುವಂತೆ ಅವರು ಇಂದಿರಾ ಕಡೆ ನೋಡಿದ್ದಾರೆ. ಆ ಕ್ಷಣದಲ್ಲಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಕೃಷ್ಣ ಅವರ ಕಣ್ಣು ಸಂಧಿಸಿದೆ. ಕೃಷ್ಣ ಅವರನ್ನು ನೋಡಿದ ಕೂಡಲೇ ಇಂದಿರಾ ಗಾಂಧಿ ತಮ್ಮ ಬಳಿ ಬರುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ವಿದ್ಯೆ ಕೊಟ್ಟ ಊರಿನ ಋಣವನ್ನು ಬಡ್ಡಿ ಸಮೇತ ತೀರಿಸಿದ್ರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ!

sm krishna atal bihari vajpayee

ಪ್ರಧಾನಿಯೇ ಹತ್ತಿರ ಬರುವಂತೆ ಹೇಳಿದ್ದರಿಂದ ಕೃಷ್ಣ ಅವರು ಹೋಗಿ ಇಂದಿರಾ ಬಳಿಯ ಚೇರ್‌ನಲ್ಲಿ ಕುಳಿತಿದ್ದಾರೆ. ಹೀಗೆ ತಮ್ಮ ಪಕ್ಕ ಕುಳಿತ ಕೃಷ್ಣ ಅವರ ಮುಂದೆ ತಮ್ಮ ಮುಂದಿದ್ದ ಅಜೆಂಡಾ ಪ್ರತಿಯನ್ನು ತಳ್ಳಿ ಓದುವಂತೆ ಹೇಳುತ್ತಾರೆ. ತಮಗೆ ನೀಡಿದ ಈ ಜವಾಬ್ದಾರಿಯನ್ನು ಕೃಷ್ಣ ಅವರು ಎಷ್ಟು ಚೆನ್ನಾಗಿ ನಿರ್ವಹಿಸಿದ್ದಾರೆಂದರೆ ಅವರ ಅಸ್ಖಲಿತ ಭಾಷೆ ಇಂದಿರಾ ಸೇರಿದಂತೆ ಇಡೀ ಸಭೆಯನ್ನು ಮಂತ್ರಮುಗ್ಧಗೊಳಿಸಿತ್ತು.

sm krishna jayalalitha

ಸಭೆ ಮುಗಿದ ನಂತರ ಕೃಷ್ಣ ಅವರಿಗೆ ಮೆಚ್ಚುಗೆಯ ಮಾತನ್ನು ಇಂದಿರಾ ಗಾಂಧಿಗಾಂಧಿ ಹೇಳಿ ತನ್ನನ್ನು ಭೇಟಿಯಾಗುವಂತೆ ಸೂಚಿಸಿದ್ದಾರೆ. ಪ್ರಧಾನಿ ಆಹ್ವಾನ ನೀಡಿದ ನಂತರ ನಿಗದಿತ ಸಮಯಕ್ಕೆ ಕೃಷ್ಣ ಅವರು ಕಚೇರಿಯಲ್ಲಿ ಇಂದಿರಾ ಗಾಂಧಿ ಅವರನ್ನು ಭೇಟಿಯಾಗುತ್ತಾರೆ. ಈ ವೇಳೆ ತನ್ನ ಪರಿಚಯ ತಿಳಿಸಿದ ಕೃಷ್ಣ ಅವರು ನಾನು ಮಂಡ್ಯದಿಂದ ಪ್ರಜಾ ಸೋಶಿಯಲಿಸ್ಟ್ ಪಾರ್ಟಿಯ ಪ್ರತಿನಿಧಿಯಾಗಿ ಆಯ್ಕೆ ಆಗಿದ್ದೇನೆ ಎಂದು ತಿಳಿಸಿ ಪಕ್ಷದ ಉದ್ದೇಶವನ್ನು ವಿವರಿಸುತ್ತಾರೆ. ಇದನ್ನೂ ಓದಿ: ಹಳೆ ಮೈಸೂರು ಎಸ್‌ಎಂಕೆ ಪಾಲಿಗೆ ವರವೂ ಹೌದು, ಶಾಪವೂ ಹೌದು!

ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ನಿಮ್ಮ ಪಕ್ಷ ಯಾವುದಕ್ಕೆ ಹೋರಾಡುತ್ತಿದೆಯೋ ಅದನ್ನು ಜಾರಿಗೊಳಿಸಲೆಂದೇ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ನೀವು ಪ್ರತ್ಯೇಕವಾಗಿರುವ ಬದಲು ಕಾಂಗ್ರೆಸ್‌ ಸೇರಬಹುದಲ್ಲ ಎಂದು ಹೇಳುತ್ತಾರೆ. ಇಂದಿರಾ ನೀಡಿದ ಆಹ್ವಾನದ ಬಗ್ಗೆ ಕೃಷ್ಣ ಅವರು ಪ್ರಜಾ ಸೋಶಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ವಿವರಿಸಿದರೂ ಪಕ್ಷದ ಸದಸ್ಯರು ಒಪ್ಪಿಗೆ ನೀಡಿರಲಿಲ್ಲ. ನಂತರ ಪಕ್ಷದ ನಿಲುವನ್ನು ಕೃಷ್ಣ ಅವರು ಇಂದಿರಾ ಬಳಿ ತಿಳಿಸಿದಾಗ, ಯಾರೂ ಬಾರದೇ ಇದ್ದರೆ ನೀವು ಬನ್ನಿ. ನಿಮಗೆ ಬಹಳಷ್ಟು ಜ್ಞಾನವಿದೆ. ಕಾಂಗ್ರೆಸ್‌ ಸೇರಿದರೆ ಪಕ್ಷದಲ್ಲಿ ನಿಮಗೆ ಮುಂದೆ ಉತ್ತಮ ಅವಕಾಶ ಸಿಗಲಿದೆ ಎಂದರಂತೆ. ಖುದ್ದು ಪ್ರಧಾನಿಯೇ ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ಎಂಸ್‌ಎಂ ಕೃಷ್ಣ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುತ್ತಾರೆ. ಕಾಂಗ್ರೆಸ್‌ ಸೇರಿದ ನಂತರ ಮುಂದೆ ನಡೆದದ್ದು ಇತಿಹಾಸ. ಸಚಿವ ಮುಖ್ಯಮಂತ್ರಿ, ವಿದೇಶಾಂಗ ಮಂತ್ರಿಯಾಗಿ ಕೆಲಸ ಮಾಡಿ ಯಶಸ್ವಿ ನಾಯಕನಾಗಿ ಎಸ್‌ಎಂ ಕೃಷ್ಣ ಹೊರಹೊಮ್ಮುತ್ತಾರೆ.

 

TAGGED:congressIndira GandhimandyaSM Krishnaಇಂದಿರಾ ಗಾಂಧಿಎಸ್‍ಎಂ ಕೃಷ್ಣಕಾಂಗ್ರೆಸ್ಮಂಡ್ಯ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
4 hours ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
5 hours ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
5 hours ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
5 hours ago
Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
6 hours ago
Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?