Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

Latest

ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

Public TV
Last updated: January 5, 2024 12:48 pm
Public TV
Share
3 Min Read
kovind work from home for women
SHARE

ನವದೆಹಲಿ: ಒಂದು ದೇಶ ಒಂದು ಚುನಾವಣೆ (One Nation, One Election) ಸಂಬಂಧ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಾರ್ವಜನಿಕರ ಸಲಹೆಯನ್ನು ಆಹ್ವಾನಿಸಲಾಗಿದೆ.

ಒಂದು ದೇಶ ಒಂದು ಚುನಾವಣೆ ಸಂಬಂಧ ನೇಮಕವಾದ ಸಮಿತಿಯ ಧ್ಯಮಗಳಲ್ಲಿ ಜಾಹೀರಾತು ಪ್ರಕಟಸಿದ್ದು ಸಲಹೆ ನೀಡುವಂತೆ ಕೇಳಲಾಗಿದೆ. ಸಾರ್ವಜನಿಕರು ಜ.15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್‌ ಮಾಡಬಹುದು ಅಥವಾ sc-hlc@gov.in ಗೆ ಇಮೇಲ್‌ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು.

ಜನರು ನೀಡಿದ ಎಲ್ಲಾ ಸಲಹೆಯನ್ನು ಸಮಿತಿಯ ಮುಂದೆ ಇಡಲಾಗುತ್ತದೆ ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ. ಸಮಿತಿಯ ಉಲ್ಲೇಖದ ನಿಯಮಗಳ ವಿವರಗಳು ಮತ್ತು ತಜ್ಞರ ಸಂಸ್ಥೆಗಳ ವರದಿಗಳನ್ನು ವೆಬ್‌ಸೈಟ್‌ನಲ್ಲಿ ನೋಡಬಹುದು: www.onoe.gov.in/onoe-reports

narendra modi

 

ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸದಸ್ಯರಾಗಿದ್ದಾರೆ.  ಇದನ್ನೂ ಓದಿ: ಗರ್ಭಗುಡಿಯಲ್ಲಿ ರಾಮ – ಮಂದಿರದ ಬೇರೆ ಗುಡಿಗಳಲ್ಲಿ ಯಾವ ದೇವರು ಇರುತ್ತಾರೆ?

ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ.

 

udupi election vote

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು (Election) ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಬಿಜೆಪಿ (BJP) ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹಲವಾರು ಸಂದರ್ಭಗಳಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿ ಈ ಅಂಶ ಸೇರಿತ್ತು. ಇದನ್ನೂ ಓದಿ: ನಾವು ಮಸೀದಿಗಳ ಮೇಲೆ ದೇವಾಲಯಗಳನ್ನ ನಿರ್ಮಿಸಲು ಬಯಸುವುದಿಲ್ಲ: ಓವೈಸಿಗೆ ಧೀರೇಂದ್ರ ಶಾಸ್ತ್ರಿ ಟಾಂಗ್

1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು.

2016ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, 2019ರ ಲೋಕಸಭೆ ಚುನಾವಣೆ ಬಳಿಕ ಈ ವಿಷಯದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದರು. ಸಭೆಯನ್ನು ಹಲವು ವಿರೋಧ ಪಕ್ಷಗಳು ವಿರೋಧಿಸಿದ್ದವು.

 

ʼಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಹಿಂದೆ ಹಲವು ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ʼಒಂದು ದೇಶ, ಒಂದು ಚುನಾವಣೆʼಯ ಪರ ಬ್ಯಾಟಿಂಗ್‌ ಮಾಡಿದ್ದರು. ಈ ಚುನಾವಣೆ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತಿರುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಬಹಳ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದರು.

 

TAGGED:electionindiaOne ElectionOne Nationಒಂದು ದೇಶ ಒಂದು ಚುನಾವಣೆಚುನಾವಣೆಭಾರತ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Jairam Ramesh
Latest

ಪಾಕ್‌ ಮಧ್ಯಸ್ಥಿತಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
2 minutes ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
13 minutes ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
41 minutes ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
50 minutes ago
Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
1 hour ago
A young man drowned in Tunga River and died in Thirthahalli
Crime

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?