Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

Latest

ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

Public TV
Last updated: January 5, 2024 12:48 pm
Public TV
Share
3 Min Read
kovind work from home for women
SHARE

ನವದೆಹಲಿ: ಒಂದು ದೇಶ ಒಂದು ಚುನಾವಣೆ (One Nation, One Election) ಸಂಬಂಧ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಾರ್ವಜನಿಕರ ಸಲಹೆಯನ್ನು ಆಹ್ವಾನಿಸಲಾಗಿದೆ.

ಒಂದು ದೇಶ ಒಂದು ಚುನಾವಣೆ ಸಂಬಂಧ ನೇಮಕವಾದ ಸಮಿತಿಯ ಧ್ಯಮಗಳಲ್ಲಿ ಜಾಹೀರಾತು ಪ್ರಕಟಸಿದ್ದು ಸಲಹೆ ನೀಡುವಂತೆ ಕೇಳಲಾಗಿದೆ. ಸಾರ್ವಜನಿಕರು ಜ.15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್‌ ಮಾಡಬಹುದು ಅಥವಾ sc-hlc@gov.in ಗೆ ಇಮೇಲ್‌ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು.

ಜನರು ನೀಡಿದ ಎಲ್ಲಾ ಸಲಹೆಯನ್ನು ಸಮಿತಿಯ ಮುಂದೆ ಇಡಲಾಗುತ್ತದೆ ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ. ಸಮಿತಿಯ ಉಲ್ಲೇಖದ ನಿಯಮಗಳ ವಿವರಗಳು ಮತ್ತು ತಜ್ಞರ ಸಂಸ್ಥೆಗಳ ವರದಿಗಳನ್ನು ವೆಬ್‌ಸೈಟ್‌ನಲ್ಲಿ ನೋಡಬಹುದು: www.onoe.gov.in/onoe-reports

narendra modi

 

ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸದಸ್ಯರಾಗಿದ್ದಾರೆ.  ಇದನ್ನೂ ಓದಿ: ಗರ್ಭಗುಡಿಯಲ್ಲಿ ರಾಮ – ಮಂದಿರದ ಬೇರೆ ಗುಡಿಗಳಲ್ಲಿ ಯಾವ ದೇವರು ಇರುತ್ತಾರೆ?

ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ.

 

udupi election vote

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು (Election) ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಬಿಜೆಪಿ (BJP) ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹಲವಾರು ಸಂದರ್ಭಗಳಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿ ಈ ಅಂಶ ಸೇರಿತ್ತು. ಇದನ್ನೂ ಓದಿ: ನಾವು ಮಸೀದಿಗಳ ಮೇಲೆ ದೇವಾಲಯಗಳನ್ನ ನಿರ್ಮಿಸಲು ಬಯಸುವುದಿಲ್ಲ: ಓವೈಸಿಗೆ ಧೀರೇಂದ್ರ ಶಾಸ್ತ್ರಿ ಟಾಂಗ್

1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು.

2016ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, 2019ರ ಲೋಕಸಭೆ ಚುನಾವಣೆ ಬಳಿಕ ಈ ವಿಷಯದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದರು. ಸಭೆಯನ್ನು ಹಲವು ವಿರೋಧ ಪಕ್ಷಗಳು ವಿರೋಧಿಸಿದ್ದವು.

 

ʼಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಹಿಂದೆ ಹಲವು ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ʼಒಂದು ದೇಶ, ಒಂದು ಚುನಾವಣೆʼಯ ಪರ ಬ್ಯಾಟಿಂಗ್‌ ಮಾಡಿದ್ದರು. ಈ ಚುನಾವಣೆ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತಿರುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಬಹಳ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದರು.

 

TAGGED:electionindiaOne ElectionOne Nationಒಂದು ದೇಶ ಒಂದು ಚುನಾವಣೆಚುನಾವಣೆಭಾರತ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
5 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
6 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
6 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
7 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?