ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರ ಎನ್‌ಕೌಂಟರ್‌ಗೆ ಬಲಿ

Public TV
1 Min Read
terrorist Aquib Mushtaq Bhat

ಶ್ರೀನಗರ: ಅವಂತಿಪೋರಾ ಪ್ರದೇಶದಲ್ಲಿ (Awantipora Area) ನಡೆದ ಎನ್‍ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆಯಲ್ಲಿ ಭಾಗಿಯಾಗಿದ್ದ ಓರ್ವ ಉಗ್ರನನ್ನು (Terrorists) ಹತ್ಯೆಗೈದಿದ್ದಾರೆ.

ಹತ್ಯೆಗೀಡಾದವನನ್ನು ಅಕಿಬ್ ಮುಷ್ತಾಕ್ ಭಟ್‌ ಎಂದು ಗುರುತಿಸಲಾಗಿದೆ. ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನೊಬ್ಬನನ್ನು (Kashmiri Pandit) ಉಗ್ರರು ಹೊಡೆದುರುಳಿಸಿದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದೆ. ಅಕಿಬ್ ಮುಷ್ತಾಕ್ ಭಟ್‌ ಆರಂಭದಲ್ಲಿ ಹೆಚ್‌ಎಂ ಉಗ್ರ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ. ಈಗ ಟಿಆರ್‌ಎಫ್‌ನೊಂದಿಗೆ ಕೆಲಸ ಮಾಡುತ್ತಿದ್ದ. ಈ ಬಗ್ಗೆ ಕಾಶ್ಮೀರ (Kashmir) ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಪುಲ್ವಾಮಾ ಜಿಲ್ಲೆಯ ಪಡಗಂಪೋರಾ ಅವಂತಿಪೋರಾದಲ್ಲಿ ಎನ್‍ಕೌಂಟರ್ ನಡೆದಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಎನ್‍ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಕೊಲ್ಲಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಫಾರ್ಮಾ ಕಂಪನಿಯಲ್ಲಿ ಸ್ಫೋಟ – ಇಬ್ಬರು ಸಾವು

INDIAN ARMY 1

ಭಾನುವಾರ ಮತ್ತೊಂದು ಉದ್ದೇಶಿತ ಹತ್ಯೆಯಲ್ಲಿ ಕಾಶ್ಮೀರಿ ಪಂಡಿತ್ ಬಲಿಯಾಗಿದ್ದರು. ಸಂಜಯ್ ಶರ್ಮಾ ಅವರು ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದರು. ಈ ವೇಳೆ ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್

Share This Article
Leave a Comment

Leave a Reply

Your email address will not be published. Required fields are marked *