ಬೆಂಗಳೂರು: ನ್ಯಾಷನಲ್ ಕಾಲೇಜ್ ಬಳಿ ಇರುವ ಮೆಟ್ರೋ ರೈಲ್ವೇ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಬೆಳಗ್ಗೆಯಿಂದ ರೈಲ್ವೇ ನಿಲ್ದಾಣದಲ್ಲಿ ಇದ್ದ ಯುವಕ ರೈಲು ಹಳಿಗೆ ಆಗಮಿಸುತ್ತಿದಂತೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನುವ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ. ಹಳಿಗೆ ಹಾರಿದ ರಭಸಕ್ಕೆ ಯುವಕನ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾರಿದ ಯುವಕ ಯಾರು ಎನ್ನುವ ಮಾಹಿತಿ ಲಭ್ಯವಾಗಿಲ್ಲ.
ಇದೇ ಮೊದಲ ಬಾರಿಗೆ ನಮ್ಮ ಮೆಟ್ರೋ ರೈಲ್ವೇ ನಿಲ್ದಾಣದಲ್ಲಿ ಇಂತಹ ಘಟನೆ ನಡೆದಿದ್ದು, ಇದರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಾಸ ಉಂಟಾಗಿದೆ. ಸಾಮಾನ್ಯವಾಗಿ ಮೆಟ್ರೋ ನಿಲ್ದಾಣದಲ್ಲಿ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿರುತ್ತದೆ. ಈ ದೃಶ್ಯಗಳನ್ನು ಕಂಡ ಸಹ ಪ್ರಯಾಣಿಕರು ಭಯದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.
ಮೆಟ್ರೋ ಸಂಚಾರ ಸ್ಥಗಿತ: ಯುವಕ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಯಲಚೇನಹಳ್ಳಿ ಕಡೆ ಹೋಗುವ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಕೆ.ಆರ್. ಮಾರುಕಟ್ಟೆಯಲ್ಲಿ ಪ್ರಯಾಣಿಕರನ್ನು ರೈಲಿನಿಂದ ಇಳಿಸಲಾಗಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಕಾದ ಪ್ರಯಾಣಿಕರು ನಿರಾಸೆಯಿಂದ ತೆರಳಿದ್ದಾರೆ. ಎಲ್ಲ ಪ್ರಯಾಣಿಕರಿಗೆ ಮೆಟ್ರೋ ಹಣವನ್ನು ಪಾವತಿ ಮಾಡಿದೆ.
The local Police have shifted him to the Victoria hospital. Currently don't know about his identity. He is shifted with bleeding injuries to his head. #Bengaluru #NammaMetro
— PublicTV (@publictvnews) January 11, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv